Homeಅಂತರಾಷ್ಟ್ರೀಯರಂಜಾನ್: ವಿಶ್ವದ 34 ದೇಶಗಳಲ್ಲಿ ಇಫ್ತಾರ್ ಕಾರ್ಯಕ್ರಮ ಪ್ರಾರಂಭಿಸಲಿರುವ ಸೌದಿ ಅರೇಬಿಯಾ

ರಂಜಾನ್: ವಿಶ್ವದ 34 ದೇಶಗಳಲ್ಲಿ ಇಫ್ತಾರ್ ಕಾರ್ಯಕ್ರಮ ಪ್ರಾರಂಭಿಸಲಿರುವ ಸೌದಿ ಅರೇಬಿಯಾ

- Advertisement -
- Advertisement -

ಸೌದಿ ಅರೇಬಿಯಾ ದೇಶವು ವಿಶ್ವದ 34 ದೇಶಗಳಲ್ಲಿ ಪವಿತ್ರ ರಂಜಾನ್ ತಿಂಗಳ ಇಫ್ತಾರ್ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ. ಏಪ್ರಿಲ್ 2 ರಂದು ಪ್ರಾರಂಭವಾಗುವ ರಂಜಾನ್ ಸಮಯದಲ್ಲಿ ಮುಸ್ಲಿಮರಿಗೆ ಇಫ್ತಾರ್ ಭೋಜನವನ್ನು ಒದಗಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು, ಸುಮಾರು 1.2 ಮಿಲಿಯನ್ ಜನರು ಈ ಯೋಜನೆಯಿಂದ ಪ್ರಯೋಜನೆ ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳು, ದಾವಾ ಮತ್ತು ಮಾರ್ಗದರ್ಶನ ಸಚಿವಾಲಯವು ವಿಶ್ವದ ಎಲ್ಲಾ ಖಂಡಗಳನ್ನು ಯೋಜನೆ ತಲುಪಲು ಬೇಕಾಗಿ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದು, ಅಗತ್ಯ ಮತ್ತು ವಿನಂತಿಗಳನ್ನು ಅವಲಂಬಿಸಿ ಸೌದಿ ರಾಯಭಾರ ಕಚೇರಿಗಳು ಮತ್ತು ಸಚಿವಾಲಯದ ಇಸ್ಲಾಮಿಕ್ ಕೇಂದ್ರಗಳು ಯೋಜನೆಯನ್ನು ಸಮನ್ವಗೊಳಿಸಲಿದೆ.

ಇದನ್ನೂ ಓದಿ:  ಪತ್ರಿಕೋದ್ಯಮ ಜಾಗದಲ್ಲಿ ಪ್ರತ್ಯಕ್ಷವಾದ ದ್ವೇಷ; ಸುದ್ದಿರಹಿತ ಸುದ್ದಿ ಮಾಧ್ಯಮಗಳಾದ ಕನ್ನಡ ಟಿವಿಗಳ ಪ್ರಕರಣ

ಇಸ್ಲಾಮಿಕ್ ವ್ಯವಹಾರಗಳು, ದಾವಾ ಮತ್ತು ಮಾರ್ಗದರ್ಶನದ ಸಚಿವ ಶೇಖ್ ಅಬ್ದುಲ್ಲತೀಫ್ ಅಲ್-ಅಶೇಖ್, ಪವಿತ್ರ ತಿಂಗಳಲ್ಲಿ ಇಸ್ಲಾಂ ಮತ್ತು ಮುಸ್ಲಿಮರಿಗೆ ಸೇವೆ ಸಲ್ಲಿಸುವ ಇಂತಹ ದತ್ತಿ ಯೋಜನೆಗಳನ್ನು ಪ್ರಾರಂಭಿಸಿದ ನಾಯಕತ್ವದ ಬೆಂಬಲವನ್ನು ಎತ್ತಿ ತೋರಿಸಿದ್ದಾರೆ. ಫಲಾನುಭವಿ ದೇಶಗಳಲ್ಲಿ ನಿಯಮಾವಳಿಗಳ ಪ್ರಕಾರ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಕೊರೊನಾಗೆ ಸಂಬಂಧಿಸಿದಂತೆ ನಿರ್ಬಂಧ ಮತ್ತು ಆರೋಗ್ಯ ಪ್ರೋಟೋಕಾಲ್‌ಗಳು ಜಾರಿಯಲ್ಲಿದ್ದ ಕಾರಣ, ದೇಶದ ಇಫ್ತಾರ್ ಕಾರ್ಯಕ್ರಮಗಳನ್ನು ವಿಶ್ವದ 16 ದೇಶಗಳಿಗೆ ಮಾತ್ರ ನೀಡಲಾಗಿತ್ತು. ಸೌದಿ ಅರೇಬಿಯಾ ಈ ವರ್ಷ ಕೂಡಾ ಫಲಾನುಭವಿ ದೇಶಗಳಲ್ಲಿ ಸಾಂಕ್ರಮಿಕ ರೋಗ ತಡೆಗಟ್ಟುವ ಕ್ರಮಗಳನ್ನು ಅಳವಡಿಸಿಕೊಂಡೆ ಈ ಯೋಜನೆಯನ್ನು ರೂಪಿಸಿದೆ.

2022 ರ ರಂಜಾನ್‌ನಲ್ಲಿ ಉಮ್ರಾವನ್ನು ಯಾತ್ರೆಗೆ ಹೊರಡುವ ಮುಸ್ಲಿಮರಿಗೆ, ವಿಶೇಷವಾಗಿ ವಿದೇಶಿಯರಿಗೆ ಉತ್ತೇಜನ ನೀಡಲು, ಕಡ್ಡಾಯ ವ್ಯಾಕ್ಸಿನೇಷನ್ ಸೇರಿದಂತೆ ವಿದೇಶಿ ಪ್ರಯಾಣಿಕರ ಮೇಲಿನ ಎಲ್ಲಾ ಕೋವಿಡ್ ಸಂಬಂಧಿತ ನಿರ್ಬಂಧಗಳನ್ನು ಸೌದಿ ಅರೇಬಿಯಾ ತೆಗೆದುಹಾಕಿದೆ.

ಇದನ್ನೂ ಓದಿ:  ಹಿಜಾಬಿಗೆ ಡಿಯರ್ ಮೀಡಿಯಾದ 5W -1H ಜವಾಬ್

“2 ವರ್ಷಗಳ ನಂತರ, ಸಾಂಕ್ರಾಮಿಕ ರೋಗದ ಕಾರಣಕ್ಕಾಗಿ ಜಾರಿಗೆ ತರಲಾಗಿದ್ದ ಉಮ್ರಾ / ಝಿಯಾರಾ ಮೇಲಿನ ಎಲ್ಲಾ ಪ್ರಯಾಣ ಸಂಬಂಧಿತ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ” ಎಂದು ಮಕ್ಕಾ ಮದೀನಾದ ಮಸೀದಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್ ಆಗಿರುವ ಹರಮೈನ್ ಷರೀಫೈನ್‌ ಸೌದಿ ಟೂರಿಸಂನ ಟ್ವೀಟ್‌ ಅನ್ನು ಮರುಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಾಮಾಜಿಕ ನೈತಿಕ ಮೌಲ್ಯಗಳ ದೃಷ್ಟಿಯಿಂದ ಪವಿತ್ರ ರಂಜಾನ್ ಮಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...