Homeಅಂತರಾಷ್ಟ್ರೀಯರಂಜಾನ್: ವಿಶ್ವದ 34 ದೇಶಗಳಲ್ಲಿ ಇಫ್ತಾರ್ ಕಾರ್ಯಕ್ರಮ ಪ್ರಾರಂಭಿಸಲಿರುವ ಸೌದಿ ಅರೇಬಿಯಾ

ರಂಜಾನ್: ವಿಶ್ವದ 34 ದೇಶಗಳಲ್ಲಿ ಇಫ್ತಾರ್ ಕಾರ್ಯಕ್ರಮ ಪ್ರಾರಂಭಿಸಲಿರುವ ಸೌದಿ ಅರೇಬಿಯಾ

- Advertisement -
- Advertisement -

ಸೌದಿ ಅರೇಬಿಯಾ ದೇಶವು ವಿಶ್ವದ 34 ದೇಶಗಳಲ್ಲಿ ಪವಿತ್ರ ರಂಜಾನ್ ತಿಂಗಳ ಇಫ್ತಾರ್ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ. ಏಪ್ರಿಲ್ 2 ರಂದು ಪ್ರಾರಂಭವಾಗುವ ರಂಜಾನ್ ಸಮಯದಲ್ಲಿ ಮುಸ್ಲಿಮರಿಗೆ ಇಫ್ತಾರ್ ಭೋಜನವನ್ನು ಒದಗಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು, ಸುಮಾರು 1.2 ಮಿಲಿಯನ್ ಜನರು ಈ ಯೋಜನೆಯಿಂದ ಪ್ರಯೋಜನೆ ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳು, ದಾವಾ ಮತ್ತು ಮಾರ್ಗದರ್ಶನ ಸಚಿವಾಲಯವು ವಿಶ್ವದ ಎಲ್ಲಾ ಖಂಡಗಳನ್ನು ಯೋಜನೆ ತಲುಪಲು ಬೇಕಾಗಿ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದು, ಅಗತ್ಯ ಮತ್ತು ವಿನಂತಿಗಳನ್ನು ಅವಲಂಬಿಸಿ ಸೌದಿ ರಾಯಭಾರ ಕಚೇರಿಗಳು ಮತ್ತು ಸಚಿವಾಲಯದ ಇಸ್ಲಾಮಿಕ್ ಕೇಂದ್ರಗಳು ಯೋಜನೆಯನ್ನು ಸಮನ್ವಗೊಳಿಸಲಿದೆ.

ಇದನ್ನೂ ಓದಿ:  ಪತ್ರಿಕೋದ್ಯಮ ಜಾಗದಲ್ಲಿ ಪ್ರತ್ಯಕ್ಷವಾದ ದ್ವೇಷ; ಸುದ್ದಿರಹಿತ ಸುದ್ದಿ ಮಾಧ್ಯಮಗಳಾದ ಕನ್ನಡ ಟಿವಿಗಳ ಪ್ರಕರಣ

ಇಸ್ಲಾಮಿಕ್ ವ್ಯವಹಾರಗಳು, ದಾವಾ ಮತ್ತು ಮಾರ್ಗದರ್ಶನದ ಸಚಿವ ಶೇಖ್ ಅಬ್ದುಲ್ಲತೀಫ್ ಅಲ್-ಅಶೇಖ್, ಪವಿತ್ರ ತಿಂಗಳಲ್ಲಿ ಇಸ್ಲಾಂ ಮತ್ತು ಮುಸ್ಲಿಮರಿಗೆ ಸೇವೆ ಸಲ್ಲಿಸುವ ಇಂತಹ ದತ್ತಿ ಯೋಜನೆಗಳನ್ನು ಪ್ರಾರಂಭಿಸಿದ ನಾಯಕತ್ವದ ಬೆಂಬಲವನ್ನು ಎತ್ತಿ ತೋರಿಸಿದ್ದಾರೆ. ಫಲಾನುಭವಿ ದೇಶಗಳಲ್ಲಿ ನಿಯಮಾವಳಿಗಳ ಪ್ರಕಾರ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಕೊರೊನಾಗೆ ಸಂಬಂಧಿಸಿದಂತೆ ನಿರ್ಬಂಧ ಮತ್ತು ಆರೋಗ್ಯ ಪ್ರೋಟೋಕಾಲ್‌ಗಳು ಜಾರಿಯಲ್ಲಿದ್ದ ಕಾರಣ, ದೇಶದ ಇಫ್ತಾರ್ ಕಾರ್ಯಕ್ರಮಗಳನ್ನು ವಿಶ್ವದ 16 ದೇಶಗಳಿಗೆ ಮಾತ್ರ ನೀಡಲಾಗಿತ್ತು. ಸೌದಿ ಅರೇಬಿಯಾ ಈ ವರ್ಷ ಕೂಡಾ ಫಲಾನುಭವಿ ದೇಶಗಳಲ್ಲಿ ಸಾಂಕ್ರಮಿಕ ರೋಗ ತಡೆಗಟ್ಟುವ ಕ್ರಮಗಳನ್ನು ಅಳವಡಿಸಿಕೊಂಡೆ ಈ ಯೋಜನೆಯನ್ನು ರೂಪಿಸಿದೆ.

2022 ರ ರಂಜಾನ್‌ನಲ್ಲಿ ಉಮ್ರಾವನ್ನು ಯಾತ್ರೆಗೆ ಹೊರಡುವ ಮುಸ್ಲಿಮರಿಗೆ, ವಿಶೇಷವಾಗಿ ವಿದೇಶಿಯರಿಗೆ ಉತ್ತೇಜನ ನೀಡಲು, ಕಡ್ಡಾಯ ವ್ಯಾಕ್ಸಿನೇಷನ್ ಸೇರಿದಂತೆ ವಿದೇಶಿ ಪ್ರಯಾಣಿಕರ ಮೇಲಿನ ಎಲ್ಲಾ ಕೋವಿಡ್ ಸಂಬಂಧಿತ ನಿರ್ಬಂಧಗಳನ್ನು ಸೌದಿ ಅರೇಬಿಯಾ ತೆಗೆದುಹಾಕಿದೆ.

ಇದನ್ನೂ ಓದಿ:  ಹಿಜಾಬಿಗೆ ಡಿಯರ್ ಮೀಡಿಯಾದ 5W -1H ಜವಾಬ್

“2 ವರ್ಷಗಳ ನಂತರ, ಸಾಂಕ್ರಾಮಿಕ ರೋಗದ ಕಾರಣಕ್ಕಾಗಿ ಜಾರಿಗೆ ತರಲಾಗಿದ್ದ ಉಮ್ರಾ / ಝಿಯಾರಾ ಮೇಲಿನ ಎಲ್ಲಾ ಪ್ರಯಾಣ ಸಂಬಂಧಿತ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ” ಎಂದು ಮಕ್ಕಾ ಮದೀನಾದ ಮಸೀದಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್ ಆಗಿರುವ ಹರಮೈನ್ ಷರೀಫೈನ್‌ ಸೌದಿ ಟೂರಿಸಂನ ಟ್ವೀಟ್‌ ಅನ್ನು ಮರುಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಾಮಾಜಿಕ ನೈತಿಕ ಮೌಲ್ಯಗಳ ದೃಷ್ಟಿಯಿಂದ ಪವಿತ್ರ ರಂಜಾನ್ ಮಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...