Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...