Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...