Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...