Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...