Homeಕರ್ನಾಟಕಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದು, ಅವರರೆಲ್ಲರನ್ನೂ ವಾಪಾಸು ಕಳುಹಿಸಿದರೆ ಅವರಿಗೆ ನೀವು ಉದ್ಯೋಗ ಕೊಡುತ್ತೀರಾ ಎಂದು ಅವರ ತಮ್ಮದೇ ಪಕ್ಷದ ಸರ್ಕಾರವನ್ನು ಪ್ರಶ್ನಿಸಿದ್ದಾರೆ

- Advertisement -
- Advertisement -

ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡುತ್ತಿರುವ ಬಿಜೆಪಿ ಪರ ಸಂಘಟನೆಗಳ ನಡೆಯನ್ನು ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರವು “ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ವಿಕಾಸ ಮತ್ತು ವಿಶ್ವಾದ ಬಗ್ಗೆ ಮಾತನಾಡಿಕೊಂಡು ಬಂದಿದ್ದಾರೆಯೆ ಹೊರತು ಹಿಂದುತ್ವದ ಬಗ್ಗೆ ಈ ತನಕ ಮಾತನಾಡಿಲ್ಲ. ಆದರೆ ನಾವು ದೇಶವನ್ನು ಮತ್ತು ರಾಜ್ಯವನ್ನು ಎಲ್ಲಿ ತೆಗೆದುಕೊಂಡು ಹೋಗುತ್ತಿದ್ದೇವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ತೆಡೆಯುದು ಸರಿಯಲ್ಲ ಎಂದು ಹೇಳಿದ ಅವರು, “ಇದನ್ನು ಯಾರೂ ಒಪ್ಪಲ್ಲ. ಅದು ಅವರ ಬದುಕು. ದೇವಸ್ಥಾನದಲ್ಲಿ ಬಾಳೆಹಣ್ಣು, ಹೂವು, ಬಳೆ ಮಾರುವವರ ಬಂಡವಾಳವೇ ಐನೂರು ರುಪಾಯಿ ಇರುವುದಿಲ್ಲ. ಅದಕ್ಕೂ ತೊಂದರೆ ನೀಡಿ ಅವರ ಹೊಟ್ಟೆ ಮೇಲೆ ಹೊಡೆದರೆ ಅವರು ಏನು ತಿನ್ನುತ್ತಾರೆ. ಇಲ್ಲಿ ಹೊಟ್ಟೆ ಮುಖ್ಯವಾಗಿದ್ದು, ಜಾತಿ, ಧರ್ಮ, ಪಕ್ಷ ಎಲ್ಲವೂ ಆಮೇಲೆ. ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುತ್ತೀರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮುಸ್ಲಿಮರು ಈ ದೇಶ ಪ್ರಜೆಯಲ್ಲವೆ? ಈ ರೀತಿಯಾಗಿ ಹೋದರೆ ಭಾರತ ಎಲ್ಲಿ ಹೋಗುತ್ತದೆ? ಇದು ಕೂಡಾ ಅಸ್ಪೃಶ್ಯತೆಯ ಆಚರಣೆಯೆ ಆಗಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಭಾರತೀಯರು, ನಮ್ಮ ದೇಶದಲ್ಲಿ ಇರಬಾರದು ಎಂದು ತೀರ್ಮಾನ ತೆಗೆದುಕೊಂಡರೆ ನಾವೆಲ್ಲಾ ಎಲ್ಲಿಗೆ ಹೋಗುತ್ತೇವೆ? ಅಲ್ಲಿಂದ ಬಂದವರಿಗೆಲ್ಲಾ ಇಲ್ಲಿ ಉದ್ಯೋಗ ಕೊಡಲು ನಮಗೆ ಸಾಧ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ, ವಿಶೇಷವಾಗಿ ಮುಸ್ಲಿಂ ರಾಷ್ಟ್ರಗಳಲ್ಲಿ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಭಾರತೀಯರು ಕೆಲಸ ಮಾಡಬಾರದು ಎಂದು ತೀರ್ಮಾನಿಸಿದರೆ, ಏನು ಮಾಡುತ್ತೇವೆ ನಾವು? ಎಲ್ಲಿ ಹೋಗೋದು?. ಏನ್‌ ಹುಚ್ಚಾಟ ಇದೆಲ್ಲಾ? ಇದೆಲ್ಲಾ ಸರಿಯಲ್ಲಾ. ಯಾವ ದೇವರು, ಧರ್ಮನೂ ಈ ರೀತಿಯಾಗಿ ಬೇಧಬಾವ ಮಾಡಲು ಹೇಳಿಲ್ಲ. ಇದೆಲ್ಲಾ ಸರಿಯಲ್ಲ, ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಯಾಕೆ ಸರ್ಕಾರ ಇದರ ಬಗ್ಗೆ ಮೌನವಹಿಸಿದೆ?” ಎಂದು ತಮ್ಮ ಸರ್ಕಾರದ ವಿರುದ್ದವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಮುಸ್ಲಿಮರು ಯಾರೂ ಕನ್ನಡಿಗರು ಅಲ್ಲವೆ? ಪಾಕಿಸ್ತಾನ-ಭಾರತ ಇಬ್ಬಾಗವಾದಾಗ ಈ ದೇಶದ ಮುಸ್ಲಿಮರು ಇಲ್ಲೇ ಉಳಿದರು. ಅವರು ಜಿನ್ನಾ ಜೊತೆಗೆ ಹೋಗಲಿಲ್ಲ. ಇದರ ಬಗ್ಗೆ ನಾವು ಯೋಚನೆ ಮಾಡಬೇಕು. ಭಾರತದಲ್ಲಿ ಉಳಿದಂತವರು ಭಾರತೀಯ ಮುಸ್ಲಿಮರು. ಅವರು ಪಾಕಿಸ್ತಾನಿಗಳಲ್ಲ, ಅವರು ಭಾರತೀಯರು. ಇದೆಲ್ಲವನ್ನೂ ಏನೂ ಯೋಚನೆ ಮಾಡದೆ, ಮುಸ್ಲಿಮರು ವ್ಯಾಪಾರ ಮಾಡಬಾರದು ಎನ್ನುವವರು ಯಾರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜನರು ಕೈಗೆತ್ತಿಕೊಳ್ಳುತ್ತಾರೆ. ಜಾತಿ ಧರ್ಮದ ಮೇಲೆ ರಾಜಕಾರಣ ಖಂಡಿತಾ ಮಾಡಬಾರದು. ಅದು ಬಹಳ ಅಪಾಯಕಾರಿ. ಇದನ್ನು ಒಂದೆರೆಡು ಚುನಾವಣೆಯವರೆಗೂ ಮಾಡಬಹದು. ಆಮೇಲೆ ಏನು ಮಾಡುತ್ತೀರಿ? ಬಿಜೆಪಿ ತನ್ನ ಪಕ್ಷದ ಸಂವಿಧಾನದಲ್ಲಿ ಮುಸ್ಲಿಮರನ್ನು ಹೊರಹಾಕುತ್ತೇವೆ ಎಂದು ಎಲ್ಲೂ ಬರೆದಿಲ್ಲ. ಇವೆಲ್ಲಾ ಎಷ್ಟರ ಮಟ್ಟಿಗೆ ನಡೆಯುತ್ತದೆ? ಇದಕ್ಕೆಲ್ಲಾ ಯಾರೂ ಹೇಳೋರು ಕೇಳೋರು ಇಲ್ಲವೆ?” ಎಂದು ಅವರು ಹೇಳಿದ್ದಾರೆ.

“ನಾಳೆ ಏನಾದರೂ ಆಗಿಬಿಟ್ಟರೆ ಏನು ಮಾಡುವುದು? ನಮ್ಮ ಮಕ್ಕಳೆಲ್ಲಾ ಬೇರೆ ಬೇರೆ ದೇಶದಲ್ಲಿ ಇದ್ದಾರೆ. ಅವರೆಲ್ಲಾ ವಾಪಾಸು ಬಂದರೆ ನೀವು ಕೆಲಸ ಕೊಡುತ್ತೀರಾ?. ಇದು ಯೋಚನೆ ಮಾಡಬೇಕು. ಕನಕದಾಸರು ಹೇಳಿದಂತೆ ಎಲ್ಲಾರು ಬಾಳುವುದು ಗೇಣು ಹೊಟ್ಟೆಗಾಗಿ. ಹೊಟ್ಟೆಗೆ ಇಲ್ಲವೆಂದರೆ ಪ್ರಜಾಪ್ರಭುತ್ವ, ಧರ್ಮ, ಜಾತಿಯನ್ನು ತೆಗೆದುಕೊಂಡು ಹೋಗಿ ಬಿಸಾಕಿ. ಹೊಟ್ಟೆಗೆ ಇಲ್ಲವೆಂದರೆ ಏನು ಹುಡುಕುತ್ತೀರಿ ಇಲ್ಲಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...