Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...