Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...