Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...