Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...