Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...