Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...