Homeಮುಖಪುಟಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ ಎಂದ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ!

- Advertisement -
- Advertisement -

ಛತ್ತೀಸ್‌ಘಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೆ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮೃತಪಟ್ಟ ಸಂಬಂಧಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತು ನಡೆದ ಘಟನೆ ಜರುಗಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಕ್ಕಿಲ್ಲ. ಹಾಗಾಗಿ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹುಟ್ಟಿಸಿದೆ.

“ಜ್ವರದಿಂದ ಬಳಲುತ್ತಿದ್ದ ನಮ್ಮ ಸಂಬಂಧಿ ರಾಯ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟರು. ಆಸ್ಪತ್ರೆಯವರು ಶವ ಸಾಗಿಸಲು ಯಾವುದೇ ವ್ಯವಸ್ಥೆ ಮಾಡಲಿಲ್ಲ. ಹಾಗಾಗಿ ನಾವು ಮಂಚದಲ್ಲಿಯೇ ಹೊತ್ತುಕೊಂಡು ಮನೆಗೆ ಹೋಗುತ್ತಿದ್ದೇವೆ” ಎಂದು ಮಹಿಳೆಯೊಬ್ಬರು ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಮಗೆ ಆಸ್ಪತ್ರೆಯಾಗಲಿ, ಆಡಳಿತವಾಗಲಿ ಯಾವುದೇ ಸಹಾಯ ಮಾಡಲಿಲ್ಲ. ಹಾಗಾಗಿ ನಾವು ಬಂದ ದಾರಿಯಲ್ಲಿಯೇ ಮಂಚದಲ್ಲಿಯೇ ಶವ ಹೊತ್ತು ಹೋಗುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳನ್ನು ಕರೆದೊಯ್ಯಲು ವಾಹನಗಳ ಕೊರತೆಯಿಂದ ಈ ಹಿಂದೆಯೂ ಈ ರೀತಿಯ ತೊಂದರೆ ಉಂಟಾಗಿದೆ ಎಂದು ಕೆಲ ಸಿಬ್ಬಂದಿಗಳು ಹೇಳಿದ್ದಾರೆ. ಇದು ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರು ಕೇಳಿಬಂದಿದೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...