Homeಕರ್ನಾಟಕಪಬ್ಲಿಕ್‌‌ ಟಿವಿ ಸಂಪಾದಕ ರಂಗನಾಥ್‌ ಮತ್ತು ನಿರೂಪಕ ಅರುಣ್ ಬಡಿಗೇರ್‌ ವಿರುದ್ಧ FIR ದಾಖಲು

ಪಬ್ಲಿಕ್‌‌ ಟಿವಿ ಸಂಪಾದಕ ರಂಗನಾಥ್‌ ಮತ್ತು ನಿರೂಪಕ ಅರುಣ್ ಬಡಿಗೇರ್‌ ವಿರುದ್ಧ FIR ದಾಖಲು

- Advertisement -
- Advertisement -

ಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಇತ್ತೀಚೆಗೆ ಸೂಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಪಬ್ಲಿಕ್ ಟಿವಿ ಫೆಬ್ರವರಿ 3ರಂದು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ, ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯ ಕಾರ್ಯಕ್ರಮದಲ್ಲಿ ಎಚ್.ಆರ್. ರಂಗನಾಥ್ ಹಾಗೂ ಅರುಣ್ ಬಡಿಗರ್ ಅವರು ಮತನಾಡುತ್ತಾ, ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದು ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

ಈ ಹೇಳಿಕೆಯನ್ನು ವಿರೋಧಿಸಿ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ನಿರೂಪಕರಿಬ್ಬರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಅವರ ದೂರನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿಯ ಎಚ್‌.ಆರ್‌. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ), 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಇದನ್ನೂ ಓದಿ:  ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಿಮ್ಮ ಪತ್ರಿಕೆ ಮೇಲೇ FIR ದಾಖಲಿಸಬೇಕಿತ್ತು ಅನಿಸುತ್ತೇ ,ಈ ದೇಶದ ನೆಲದ ಕಾನೂನು ಹಿಂದುತ್ವ ದ ಆದಾರದ ಮೇಲೇನೆ ನೆಲೆಸಿರೋದು ಹಿಂದೆ ,ಮುಂದೆಯೂ ಸಹ ,ಯಾರಿಗೆ ಇಲ್ಲಿ ಇರಲು ಸಾಧ್ಯವಿಲ್ಲವೋ ಅವರು ಜಾಗ ಖಾಲಿ ಮಾಡಬಹುದಾಗಿದೆ

  2. ಹಿಂದೂ ಧರ್ಮ ಹುಟ್ಟಿದ್ದೇ ಭಾರತದಲ್ಲಿ‌. ಭಾರತ ಹುಟ್ಟಿದಾಗ ಸಿಂಧೂ ನಾಗರೀಕತೆಯೊಂದೇ ಅಸ್ತಿತ್ವದಲ್ಲಿದ್ದದ್ದು.ಸಿಂಧೂ ನಾಗರೀಕತೆಯೇ ಹಿಂದೂ ಧರ್ಮವಾಯಿತು. ಹೀಗಾಗಿ, ಭಾರತ ಜನ್ಮ ತಳೆದಿದ್ದೇ ಹಿಂದೂ ಧರ್ಮದ ಆಧಾರದ ಮೇಲೆ.

  3. Nothing to worry..to be honest citizen..
    Honest media sd be appreciated not prosecuted.
    Let them be supportive to hindustan..what’s getting itching to be a hindustani in India..
    U sd hv a small sense Hindustan is a multi culture land respecting all religions not a caste.
    Who respects culture of a nation is considered as Indians irrespective of caste.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...