ಹಿಜಾಬ್ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಹಿಜಾಬ್ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಇತ್ತೀಚೆಗೆ ಸೂಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಪಬ್ಲಿಕ್ ಟಿವಿ ಫೆಬ್ರವರಿ 3ರಂದು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ, ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯ ಕಾರ್ಯಕ್ರಮದಲ್ಲಿ ಎಚ್.ಆರ್. ರಂಗನಾಥ್ ಹಾಗೂ ಅರುಣ್ ಬಡಿಗರ್ ಅವರು ಮತನಾಡುತ್ತಾ, ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದು ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.
ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸುವಂತೆ ಕೋರ್ಟ್ ಸೂಚನೆ
ಈ ಹೇಳಿಕೆಯನ್ನು ವಿರೋಧಿಸಿ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ನಿರೂಪಕರಿಬ್ಬರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಅವರ ದೂರನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ), 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಇದನ್ನೂ ಓದಿ: ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್ ಟಿವಿ: ‘ಹೇಟ್ ಸ್ಪೀಚ್ ಬೇಡ’ ತಂಡ ಆಕ್ರೋಶ



ಇಂಥಹ ಕೋಮುವಾದಿಗಳ ವಿರುದ್ದ ಜನಗಳು ಎಚ್ಚೆತ್ತುಕೊಳ್ಳಬೇಕು
ನಿಮ್ಮ ಪತ್ರಿಕೆ ಮೇಲೇ FIR ದಾಖಲಿಸಬೇಕಿತ್ತು ಅನಿಸುತ್ತೇ ,ಈ ದೇಶದ ನೆಲದ ಕಾನೂನು ಹಿಂದುತ್ವ ದ ಆದಾರದ ಮೇಲೇನೆ ನೆಲೆಸಿರೋದು ಹಿಂದೆ ,ಮುಂದೆಯೂ ಸಹ ,ಯಾರಿಗೆ ಇಲ್ಲಿ ಇರಲು ಸಾಧ್ಯವಿಲ್ಲವೋ ಅವರು ಜಾಗ ಖಾಲಿ ಮಾಡಬಹುದಾಗಿದೆ
ಹಿಂದೂ ಧರ್ಮ ಹುಟ್ಟಿದ್ದೇ ಭಾರತದಲ್ಲಿ. ಭಾರತ ಹುಟ್ಟಿದಾಗ ಸಿಂಧೂ ನಾಗರೀಕತೆಯೊಂದೇ ಅಸ್ತಿತ್ವದಲ್ಲಿದ್ದದ್ದು.ಸಿಂಧೂ ನಾಗರೀಕತೆಯೇ ಹಿಂದೂ ಧರ್ಮವಾಯಿತು. ಹೀಗಾಗಿ, ಭಾರತ ಜನ್ಮ ತಳೆದಿದ್ದೇ ಹಿಂದೂ ಧರ್ಮದ ಆಧಾರದ ಮೇಲೆ.
Nothing to worry..to be honest citizen..
Honest media sd be appreciated not prosecuted.
Let them be supportive to hindustan..what’s getting itching to be a hindustani in India..
U sd hv a small sense Hindustan is a multi culture land respecting all religions not a caste.
Who respects culture of a nation is considered as Indians irrespective of caste.