Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

- Advertisement -
- Advertisement -

ಇತ್ತೀಚೆಗೆ ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ತೀವ್ರ ರೀತಿಯ ‘ಇಸ್ಲಾಮೊಫೊಬಿಯಾ’ ಹರಡುತ್ತಿವೆ. ಯಾವುದೆ ರೀತಿಯಲ್ಲೂ ಯಾರಿಗೂ ತೊಂದರೆ ಮಾಡದ ಮುಸ್ಲಿಮರ ಆಚರಣೆ ಮತ್ತು ಸಂಪ್ರದಾಯಗಳನ್ನು ಈ ಸಂಘಟನೆಗಳು ‘ಅಪರಾಧಿಕರಣ’ ಮಾಡುತ್ತಿವೆ. ಈ ಮೂಲಕ ಜನರ ನಡುವೆ ಮುಸ್ಲಿಂ ದ್ವೇಷ, ಅಪನಂಬಿಕೆ ಹರಡುವಂತೆ ಮಾಡಿ, ಸಮಾಜದಲ್ಲಿ ಒಡಕುಂಟು ಮಾಡುತ್ತಿವೆ. ರಾಜ್ಯದ ಬಿಜೆಪಿ ಸರ್ಕಾರ ಇದಕ್ಕೆ ನೇರವಾಗಿಯೆ ಬೆಂಬಲಿಸುತ್ತಿದೆ ಎಂಬುವುದು ಅಪಾಯಕಾರಿಯಾದ ಸಂಗತಿಯಾಗಿದೆ.

ಇದೀಗ ಹೊಸದಾಗಿ ‘ಹಲಾಲ್’ ವಿಚಾರವನ್ನು ಸಂಘಪರಿವಾರ ವಿವಾದವನ್ನಾಗಿ ಮಾಡಿದ್ದು, ಹಲವಾರು ಸುಳ್ಳುಗಳನ್ನು ‘ವೈಜ್ಞಾನಿಕ ಆಧಾರವಿದೆ’ ಎಂದು ಬಿಂಬಿಸಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಮತ್ತು ಬಜರಂಗದಳದ ಪೋಸ್ಟರ್‌ ಒಂದು ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ವೈರಲ್ ಪೋಸ್ಟರ್‌ನಲ್ಲಿ, “ಮುಸ್ಲಿಮರ ಅಂಗಡಿಯಿಂದ ಹಲಾಲ್ ಮಾಡಿರುವ ಮಾಂಸವನ್ನು ಖರೀದಿ ಮಾಡಬೇಡಿ. ಹಲಾಲ್ ಎಂದರೆ ಅಲ್ಲಾಹನ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಮಾಂಸ ವಿತರಣೆ ಮಾಡುವುದು. ಹಲಾಲ್‌‌‌ ಮಾಡುವ ಸಂದರ್ಭದಲ್ಲಿ ವಧೆಯಾಗುವ ಪ್ರಾಣಿಯ ಕತ್ತಿನ ಭಾಗ ಸೀಳಿ ಹಾಗೇ ಬಿಡುತ್ತಾರೆ”

“ಆಗ ಆ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ಕೆಲವು ವಿಷಕಾರಿ ಅಂಶಗಳು ಬಿಡುಗಡೆಯಾಗಿ ಪ್ರಾಣಿಯ ದೇಹದ ಎಲ್ಲಾ ಭಾಗಗಳಿಗೆ ಹರಡಿ ಮಾಂಸವು ವಿಷಯುಕ್ತವಾಗುತ್ತದೆ. ಇದರ ನಿರಂತರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಇದು ವೈಜ್ಞಾನಿಕವಾಗಿ ನಿರೂಪಿತವಾಗಿರುವ ಸತ್ಯ. ಅವೈಜ್ಞಾನಿಕ ವಿಧಾನವಾದ ಹಲಾಲ್‌ ಮಾಡಿದ ಮಾಂಸ ಖರೀದಿಸುವುದರ ಬದಲು, ನಮ್ಮ ಹಿಂದು ಬಾಂಧವರು ಮಾಡುವ ‘ಜಟ್ಕಾಕಟ್‌’ ವಿಧಾನ ವೈೆಜ್ಞಾನಿಕವಾಗಿದೆ” ಎಂದು ಬಜರಂಗದಳದ ಪೋಸ್ಟರ್‌ ಹರಿದಾಡುತ್ತಿದೆ.

ಬಿಜೆಪಿ ಬೆಂಬಲಿತ ಸಂಘಟನೆಯ ಈ ಪೋಸ್ಟರ್‌ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಬಜರಂದಳ ಮತ್ತು ವಿಎಚ್‌ಪಿ

ವಾಸ್ತವದಲ್ಲಿ ಬಜರಂಗದಳ ಎಂಬ ಸಂಘಟನೆಯು ಬಿಜೆಪಿ ಪರ ಕೆಲಸ ಮಾಡುತ್ತಿರುವ ಸಂಘಟನೆಯಾಗಿದೆ. ಈ ಸಂಘಟನೆಯಲ್ಲಿ ಹೆಚ್ಚಿನ ಸಂಖ್ಯೆಯ ದಲಿತ ಮತ್ತು ಹಿಂದುಳಿದ ಸಮುದಾಯದ ಯುವಕರು ತುಂಬಿಕೊಂಡಿದ್ದು, ಮತೀಯ ಗಲಭೆಗಳಲ್ಲಿ ಭಾಗಿಯಾಗಿ ಬಲಿಪಶುಗಳಾಗಿರುವುದು ಚರ್ಚಿತ ವಿಷಯ. ಈ ಸಂಘಟನೆಗೆ ಸವರ್ಣೀಯರ ನಾಯಕತ್ವ ಇರುವ ಸಂಘಟನೆಯಾದ ವಿಎಚ್‌ಪಿ ಮಾರ್ಗದರ್ಶನ ನೀಡುತ್ತದೆ.

ಸಾಮಾನ್ಯವಾಗಿ ಈ ಸಂಘಟನೆಯನ್ನು ಬಿಜೆಪಿ ಸಮಾಜದಲ್ಲಿ ಅಶಾಂತಿ ಮೂಡಿಸುವಲ್ಲಿ ಮತ್ತು ಸಮಾಜದ ನಡುವೆ ಅಪನಂಬಿಕೆ, ದ್ವೇಷ ಹರಡಲು ಬಳಸಿಕೊಳ್ಳುತ್ತಲೆ ಬಂದಿದೆ. ಈ ಸಂಘಟನೆಯ ಹೆಸರಿನಲ್ಲಿ ಇದೀಗ ಹರಡುತ್ತಿರುವ ಪೋಸ್ಟರ್‌ ಸಂಪೂರ್ಣವಾಗಿ ಮುಸ್ಲಿಮರ ವಿರುದ್ದ ದ್ವೇಷ ಮತ್ತು ಅಪನಂಬಿಕೆ ಹರಡಬೇಕೆಂದೆ ರೂಪಿಸಲಾಗಿದೆ.

ಹಲಾಲ್ ಎಂದರೇನು?

ವಾಸ್ತವದಲ್ಲಿ ‘ಹಲಾಲ್‌‌’ ಎಂಬುವುದು ಮಾಂಸಕ್ಕೆ ಬಳಸುವ ಪ್ರಾಣಿಗಳನ್ನು ಕೊಲ್ಲುವ ವಿಧಾನಕ್ಕೆ ಇರುವ ಹೆಸರೇ ಅಲ್ಲ. ‘ಹಲಾಲ್‌’ ಎಂಬುದು ಅರೇಬಿಕ್ ಪದವಾಗಿದ್ದು, ಇದನ್ನು ‘ಸಮ್ಮತ’ ಎಂಬುವುದಾಗಿ ಸರಳವಾಗಿ ಅರ್ಥೈಸಬಹುದಾಗಿದೆ. ಆದರೆ, ಮಾಂಸಕ್ಕಾಗಿ ಪ್ರಾಣಿಯನ್ನು ಕೊಯ್ಯುವ ವಿಧಾನವೊಂದನ್ನಷ್ಟೆ ಹಲಾಲ್‌ ಎಂದು ಬಹುತೇಕರು ಅರ್ಥೈಸಿಕೊಂಡಿದ್ದಾರೆ.

ವಾಸ್ತವದಲ್ಲಿ ಪ್ರಾಣಿಯನ್ನು ಕೊಲ್ಲುವ ಇಸ್ಲಾಮಿ ವಿಧಾನಕ್ಕೆ ‘ದ್ಸಬಹ್’ ಎಂದು ಕರೆಯುತ್ತಾರೆ. ಮಾಂಸದ ಪ್ರಾಣಿಯ ಕತ್ತಿನ ಮುಂಭಾಗಕ್ಕೆ ಹರಿತವಾದ ಚೂರಿಯಿಂದ, ಮುಖ್ಯ ರಕ್ತನಾಳ, ಶ್ವಾಸ ನಾಳ ಮತ್ತು ಅನ್ನ ನಾಳವನ್ನು ಕೊಯ್ಯುವುದಾಗಿದೆ ದ್ಸಬಹ್. ಈ ವೇಳೆ ಪ್ರಾಣಿಯ ಬೆನ್ನುಹುರಿಯನ್ನು ಕತ್ತರಿಸಬಾರದು. (ಹಲಾಲ್‌ ಮತ್ತು ಹರಾಂ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ಫ್ಯಾಕ್ಟ್‌ಚೆಕ್‌: ಪೋಸ್ಟರ್‌‌ನಲ್ಲಿರುವ ಮಾಹಿತಿ ನಿಜವೇ?

ಪೋಸ್ಟರ್‌ ಮುಖ್ಯವಾಗಿ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬೇಡಿ ಎಂದು ಹೇಳುತ್ತದೆ. ಇದು ಸಮಾಜದಲ್ಲಿ ಮುಸ್ಲಿಮರ ವಿರುದ್ದ ದ್ವೇಷ ಹರಡುವ ಬಜರಂಗದಳದ ಎಂದಿನ ಕಾರ್ಯಸೂಚಿಯಾಗಿದೆ. ಉಳಿದಂತೆ ಅದು, ಯಾಕೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂಬುದಕ್ಕೆ ಹಲವು ಕಾರಣಗಳನ್ನು ನೀಡುತ್ತದೆ. ಅವುಗಳನ್ನು ಮುಖ್ಯವಾಗಿ ಕೆಳಗಿನಂತೆ ಪಟ್ಟಿ ಮಾಡಬಹುದು.

  • ಹಲಾಲ್ ಎಂದರೆ ಅಲ್ಲಾಹನ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಮಾಂಸ ವಿತರಣೆ ಮಾಡುವುದು.

ಈ ವಾದಕ್ಕೆ ಯಾವುದೆ ಹುರುಳಿಲ್ಲ. ಹಿಂದೂಗಳು ದೇವರಿಗೆ ನೈವೇದ್ಯ ಅರ್ಪಿಸುಂತೆ, ಮುಸ್ಲಿಮರು ಅಲ್ಲಾಹುವಿಗೆ ನೈವೇದ್ಯ ಅರ್ಪಿಸುವ ಆಚರಣೆಯನ್ನು ಮಾಡುವುದಿಲ್ಲ. ಅದಾಗ್ಯೂ ಮುಸ್ಲಿಮರು ಪ್ರಾಣಿಯನ್ನು ಕೊಲ್ಲುವಾಗ ‘ಬಿಸ್ಮಿಲ್ಲಾಹಿ-ರ್‍ರಹ್ಮಾನಿ-ರ್‍ರಹೀಂ’ ಎಂದು ಹೇಳುತ್ತಾರೆ. ಇದು ಯಾವುದೆ ‘ಅಪರಾಧಿ’ ಮಂತ್ರವಲ್ಲ. ಇದು ಕೇವಲ ತಾನು ನಂಬಿದ ದೇವರನ್ನು ನೆನೆಯುವುದಾಗಿದೆ.

ಇದನ್ನು ಮಸ್ಲಿಮರು ಕೇವಲ ಪ್ರಾಣಿಯನ್ನು ಕೊಯ್ಯುವಾಗ ಮಾತ್ರ ಹೇಳುವುದಲ್ಲ. ಮುಸ್ಲಿಮರು ತಿನ್ನಲಾರಂಭಿಸುವಾಗ, ಕುಡಿಯಲಾರಂಭಿಸುವಾಗ, ಮನೆಯಿಂದ ಹೊರಗೆ ಕಾಲಿಡುವಾಗ, ಮನೆಯೊಳಕ್ಕೆ ಪ್ರವೇಶಿಸುವಾಗ, ವಾಹನವೇರುವಾಗ, ವ್ಯಾಪಾರ ಆರಂಭಿಸುವಾಗ, ಯಾರಿಗಾದರೂ ಏನನ್ನಾದರೂ ಕೊಡುವಾಗ, ದುಡಿಮೆ ಆರಂಭಿಸುವಾಗ ಹೀಗೆ ಎಲ್ಲಾ ಕಾರ್ಯಗಳ ಆರಂಭದಲ್ಲೂ ಅಲ್ಲಾಹುವಿನ ನಾಮ ಉಚ್ಚರಿಸುತ್ತಾರೆ.

ತಾನು ನಂಬಿದ ದೇವನನ್ನು ನೆನೆದು ಕೆಲಸ ಪ್ರಾರಂಭ ಮಾಡುವುದು ಯಾರಿಗೂ ತೊಂದರೆ ಮಾಡುವುದಿಲ್ಲ. ಇದನ್ನು ಎಲ್ಲಾ ನಂಬಿಕೆಯ ಜನರು ಮಾಡುತ್ತಾರೆ. ಆದರೆ ಬಜರಂಗದಳ ಇದನ್ನು ‘ಅಪರಾಧ’ ಎಂಬಂತೆ ಬಿಂಬಿಸುತ್ತದೆ. ಇದು ದ್ವೇಷ ಹರಡುವ ತಂತ್ರವೆ ಹೊರತು ಬೇರೇನಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

  • ಹಲಾಲ್‌‌‌‌ ಮಾಡುವ ಸಂದರ್ಭದಲ್ಲಿ ವಧೆಯಾಗುವ ಪ್ರಾಣಿಯ ಕತ್ತಿನ ಭಾಗ ಸೀಳಿ ಹಾಗೇ ಬಿಡುತ್ತಾರೆ. ಆಗ ಆ ಪ್ರಾಣಿಯ ಮೆದುಳಿನ ಗ್ರಂಥಿಯಿಂದ ಕೆಲವು ವಿಷಕಾರಿ ಅಂಶಗಳು ಬಿಡುಗಡೆಯಾಗಿ ಪ್ರಾಣಿಯ ದೇಹದ ಎಲ್ಲಾ ಭಾಗಗಳಿಗೆ ಹರಡಿ ಮಾಂಸವು ವಿಷಯುಕ್ತವಾಗುತ್ತದೆ.

ಈ ವಾದಗಳು ಕೂಡಾ ಸುಳ್ಳಾಗಿದ್ದು, ಇದಕ್ಕೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಆಹಾರ ತಜ್ಞ ಕೆ.ಸಿ. ರಘು, “ಮುಸ್ಲಿಮರು ಆಹಾರಕ್ಕಾಗಿ ಪ್ರಾಣಿಗಳನ್ನು ಕೊಲ್ಲುವ ವಿಧಾನದಿಂದ ಯಾವುದೆ ರೀತಿಯಲ್ಲಿ ಅಪಾಯವಿಲ್ಲ. ಮೆದುಳಿನ ಗ್ರಂಥಿಯಿಂದ ವಿಷಕಾರಿ ಅಂಶಗಳು ಬಿಡುಗಡೆಯಾಗುತ್ತದೆ ಎಂಬ ವಿಚಾರ ಸುಳ್ಳಾಗಿದ್ದು, ಇದಕ್ಕೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ” ಎಂದು ಹೇಳಿದ್ದಾರೆ.

‘‘ಪ್ರಾಣಿಗಳ ಮಾಂಸಗಳಲ್ಲಿ ವಿಷ ಇರುವುದು ಅವುಗಳಿಗೆ ಕೊಡುವ ಮೇವು ಮತ್ತು ಅವುಗಳನ್ನು ಸಾಕುವ ವಿಧಾನದಿಂದಾಗಿದೆ. ಅವುಗಳು ತಿನ್ನುವ ಆಹಾರದಲ್ಲಿ ವಿಷ ಇರುವುದರಿಂದ ಅವುಗಳ ಮಾಂಸವು ವಿಷಕಾರಿಯಾಗುತ್ತದೆ ಹೊರತು, ಕೊಂದ ನಂತರ ಅಲ್ಲ. ಪ್ರಾಣಿಯನ್ನು ಮಾಂಸಕ್ಕಾಗಿ ಕೊಲ್ಲುವಾಗ ಆದಷ್ಟು ಬೇಗನೆ ಪ್ರಾಣ ಹೋಗುವಂತೆ ಕೊಂದರೆ ಆರೋಗ್ಯಕ್ಕೆ ಒಳ್ಳೆಯದು. ಹಾಗೆ ನೋಡಿದರೆ ಮುಸ್ಲಿಮರು ಮಾಂಸಕ್ಕಾಗಿ ಕೊಯ್ಯುವಾಗ ಪ್ರಾಣಿಗಳ ಜೀವ ಬೇಗನೇ ಹಾರಿ ಹೋಗುತ್ತದೆ” ಎಂದು ಹೇಳಿದ್ದಾರೆ. 

  • ಹಲಾಲ್‌ ಮಾಡಿದ ಮಾಂಸದ ನಿರಂತರ ಸೇವನೆಯಿಂದ ಆರೋಗ್ಯದಲ್ಲಿ ಏರು ಪೇರಾಗುತ್ತದೆ ಮತ್ತು ಹಲಾಲ್‌ ಮಾಡಿರುವ ಮಾಂಸವು ವಿಷಯುಕ್ತವಾಗುತ್ತದೆ ಎಂಬುವುದು ವೈಜ್ಞಾನಿಕವಾಗಿ ನಿರೂಪಿತವಾಗಿರುವ ಸತ್ಯ.
  • ಹಲಾಲ್‌ ಮಾಡುವುದು ಅವೈಜ್ಞಾನಿಕ. ಹಿಂದೂಗಳು ಮಾಡುವ ‘ಜಟ್ಕಾಕಟ್‌’ ವಿಧಾನ ವೈೆಜ್ಞಾನಿಕವಾಗಿದೆ. 

ಬಜರಂಗದಳದ ಈ ಎರಡು ವಾದಕ್ಕೂ ಯಾವುದೆ ಹುರುಳಿಲ್ಲ. ಆರೋಗ್ಯದಲ್ಲಿ ಏರು ಪೇರಾಗುವುದು ಮಾಂಸದ ಗುಣಮಟ್ಟದಲ್ಲಿ ಆಗಿರುವುದರಿಂದ, ಮುಸ್ಲಿಮರು ಮಾಂಸಕ್ಕಾಗಿ ಪ್ರಾಣಿಗಳನ್ನು ಕೊಲ್ಲುವ ರೀತಿಯಿಂದಲ್ಲ. 

ಕೆ.ಸಿ. ರಘು ಅವರು, “ಪ್ರಾಣಿಗೆ ಕೊಡುವ ರಾಸಾಯನಿಕ ಭರಿತ ಆಹಾರದಿಂದಾಗಿ ಅದರ ಮಾಂಸದಲ್ಲಿ ವಿಷ ಇರಬಹುದೆ ಹೊರತು, ಪ್ರಾಣಿಯನ್ನು ಯಾವುದೇ ರೀತಿಯಲ್ಲಿ ಕೊಂದರೂ ಅದರ ಮಾಂಸದಲ್ಲಿ ವಿಷ ಹರಡುವುದಿಲ್ಲ. ಇವೆಲ್ಲಾ ಸುಳ್ಳಾಗಿದ್ದು, ಯಾವುದೆ ವೈಜ್ಞಾನಿಕ ಆಧಾರ ಇಲ್ಲ” ಎಂದು ಹೇಳುತ್ತಾರೆ.

ಒಟ್ಟಿನಲ್ಲಿ, ಬಜರಂಗದಳದ ಈ ವೈರಲ್ ಪೋಸ್ಟ್‌ ಸುಳ್ಳುಗಳಿಂದಲೇ ಕೂಡಿರುವ ಮತ್ತು ಸಮಾಜದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಹರಡಲೆಂದೆ ಮಾಡಿರುವ ಪೋಸ್ಟರ್‌ ಆಗಿದೆ. ಬಜರಂಗದಳ ಪೋಸ್ಟರ್‌ನಲ್ಲಿ ನೀಡಿರುವ ಮಾಹಿತಿಗೆ ಯಾವುದೆ ವೈಜ್ಞಾನಿಕ ಆಧಾರವಿಲ್ಲ ಎಂಬುದು ಆಹಾರ ತಜ್ಞರ ಮಾತಿನಿಂದ ಸಾಬೀತಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಜರಂಗ ದಳ ಮಾಡುವದು ವಳೆಯ. ಭಜರಂಗ ದಳದವರು ಏನೇ ನಿರ್ಧಾರ ತೆಗೆದುಕೊಂಡರು ಅದು ಸರಿಯಾಗಿ ಇರುತ್ತೆ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...