Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...