Homeಮುಖಪುಟಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ತೆರಿಗೆ ಇಲ್ಲದೆ ಸರ್ಕಾರ ದೇಶವನ್ನು ನಡೆಸುವುದು ಹೇಗೆ? ಎಂದು ರಾಮ್‌ದೇವ್ ಹೇಳಿದ್ದಾರೆ.

- Advertisement -
- Advertisement -

ಪೆಟ್ರೋಲ್ ಬೆಲೆ ಏರುತ್ತಿರುವುದರ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಬಾಯ್ಮುಚ್ಚು, ಹೀಗೆ ಪ್ರಶ್ನೆ ಕೇಳಿದರೆ ನಿನಗೆ ಒಳ್ಳೆಯದಾಗೊಲ್ಲ ಎಂದು ಬಾಬಾ ರಾಮ್‌ದೇವ್ ಧಮಕಿ ಹಾಕಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಸರ್ಕಾರಗಳು ಜನರಿಗೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ಮತ್ತು 300 ರೂಗೆ ಗ್ಯಾಸ್ ಸಿಲಿಂಡರ್ ವಿತರಿಸಬೇಕೆಂದು ಹಿಂದೊಮ್ಮೆ ನೀವು ಹೇಳಿದ್ದೀರಿ ಎಂದು ಪತ್ರಕರ್ತನೊಬ್ಬ ಬಾಬಾ ರಾಮ್‌ದೇವ್‌ರವರನ್ನು ಪ್ರಶ್ನಿಸಿದರು. ಆಗ ಪ್ರತಿಕ್ರಿಯಿಸಿದ ರಾಮ್‌ದೇವ್ “ಹೌದು ನಾನು ಹಾಗೆ ಹೇಳಿದ್ದೆ. ಈಗ ನೀನು ಏನು ಮಾಡ್ತೀಯ? ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡ. ನಿನ್ನ ಪ್ರಶ್ನೆಗಳಿಗೆ ಉತ್ತರಿಸಿಲು ನಾನು ನಿನ್ನ ಗುತ್ತಿಗೆದಾರನಲ್ಲ” ಎಂದು ಉತ್ತರಿಸಿದ್ದಾರೆ.

ಈಗ ಪೆಟ್ರೋಲ್ ಬೆಲೆ ಗಗನಕ್ಕೆ ಏರಿಕೆ ಎಂದು ಪತ್ರಕರ್ತ ಪ್ರಶ್ನಿಸಿದಾಗ ಕೆಂಡಮಂಡಲವಾದ ರಾಮ್‌ದೇವ್ “ಬಾಯ್ಮುಚ್ಚು, ಇದೇ ರೀತಿ ಪ್ರಶ್ನಿಸಿದರೆ ನಿನಗೆ ಒಳ್ಳೆಯದಾಗುವುದಿಲ್ಲ. ಈ ರೀತಿ ಮಾತನಾಡಬೇಡ. ನೀನು ಒಳ್ಳೇಯ ಕುಟುಂಬದವನಾಗಿರಬೇಕು” ಎಂದು ಪರೋಕ್ಷವಾಗಿ ಧಮಕಿ ಹಾಕಿದ್ದಾರೆ.

ನಂತರ ಮಾತನಾಡಿದ ರಾಮ್‌ದೇವ್, “ಈ ಕಷ್ಟಕರ ಸಮಯದಲ್ಲಿ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುವುದಿಲ್ಲ. ಹಾಗಾದರೆ ದೇಶವನ್ನು ನಡೆಸುವುದು ಹೇಗೆ? ಜನರಿಗೆ ಸಂಬಳ ಕೊಡಬೇಕು, ರಸ್ತೆಗಳನ್ನು ನಿರ್ಮಿಸಬೇಕು ಅಲ್ಲವೆ. ಹೌದು, ಹಣದುಬ್ಬರ ಕಡಿಮೆಯಾಗಬೇಕೆಂದು ನಾನು ಒಪ್ಪುತ್ತೇನೆ. ಆದರೆ ಜನರು ಕಷ್ಟಪಟ್ಟು ಕೆಲಸ ಮಾಡಬೇಕು. ನಾನು ಕೂಡ ಬೆಳಿಗ್ಗೆ 4 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರೆಗೂ ಕೆಲಸ ಮಾಡುತ್ತೇನೆ” ಎಂದು ಹೇಳಿದಾಗ ಅವರ ಸುತ್ತ ನೆರೆದಿದ್ದ ಬೆಂಬಲಿಗರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ.

ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಬಾಬಾ ರಾಮ್‌ದೇವ್ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಸತತ ಟೀಕೆ ಮಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಬ್ರಿಟೀಷ್ ಮನಸ್ಥಿತಿಯ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ಬಡತನ ಹೆಚ್ಚುತ್ತಿದೆ ಅದಕ್ಕೆ ನೇರವಾಗಿ ಸರ್ಕಾರವೇ ಕಾರಣವಾಗಿದೆ ಎಂದು ಕಟುವಾಗಿ ಟೀಕಿಸಿದ್ದರು.

ಕಪ್ಪು ಹಣ ವಾಪಸ್ ತಂದರೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ನೀಡಬಹುದು ಎಂದು ರಾಮ್‌ದೇವ್ ಹೇಳಿದ್ದರು. ಯುಪಿಎ ಸರ್ಕಾರ ಇಂಧನಗಳ ಮೇಲೆ 50% ತೆರಿಗೆ ವಿಧಿಸುವ ಮೂಲಕ ಜನರ ಕೈಯಲ್ಲಿನ ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈಗ ಬಿಜೆಪಿ ಸರ್ಕಾರ ಬಂದ ನಂತರ ಅವರು ಪೆಟ್ರೋಲ್ ಡೀಸೆಲ್ ಬೆಲೆ ದುಪ್ಪಟ್ಟಾದರೂ ತುಟಿ ಬಿಚ್ಚುತ್ತಿಲ್ಲ. ಪ್ರಶ್ನಿಸಿದ ಪತ್ರಕರ್ತನಿಗೆ ಧಮಕಿ ಹಾಕಿದ್ದಲ್ಲದೆ, ಜನರು ಕಷ್ಟಪಟ್ಟು ದುಡಿಯಬೇಕೆಂದು ಉಪದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರ ಕಳೆದ 10 ದಿನಗಳಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಬೆಂಗಳೂರಿನಲ್ಲಿ 9 ಬಾರಿ ಬೆಲೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ ಬೆಲೆ 107.30 ರೂಗೆ ತಲುಪಿದೆ. ಡೀಸೆಲ್ ದರ 91.27 ರೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...