Homeಮುಖಪುಟಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಬಾಯ್ಮುಚ್ಚು, ನಿನಗೆ ಒಳ್ಳೆಯದಾಗೊಲ್ಲ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಬಾಬಾ ರಾಮ್‌ದೇವ್ ಧಮಕಿ

ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ತೆರಿಗೆ ಇಲ್ಲದೆ ಸರ್ಕಾರ ದೇಶವನ್ನು ನಡೆಸುವುದು ಹೇಗೆ? ಎಂದು ರಾಮ್‌ದೇವ್ ಹೇಳಿದ್ದಾರೆ.

- Advertisement -
- Advertisement -

ಪೆಟ್ರೋಲ್ ಬೆಲೆ ಏರುತ್ತಿರುವುದರ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಬಾಯ್ಮುಚ್ಚು, ಹೀಗೆ ಪ್ರಶ್ನೆ ಕೇಳಿದರೆ ನಿನಗೆ ಒಳ್ಳೆಯದಾಗೊಲ್ಲ ಎಂದು ಬಾಬಾ ರಾಮ್‌ದೇವ್ ಧಮಕಿ ಹಾಕಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ.

ಸರ್ಕಾರಗಳು ಜನರಿಗೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ಮತ್ತು 300 ರೂಗೆ ಗ್ಯಾಸ್ ಸಿಲಿಂಡರ್ ವಿತರಿಸಬೇಕೆಂದು ಹಿಂದೊಮ್ಮೆ ನೀವು ಹೇಳಿದ್ದೀರಿ ಎಂದು ಪತ್ರಕರ್ತನೊಬ್ಬ ಬಾಬಾ ರಾಮ್‌ದೇವ್‌ರವರನ್ನು ಪ್ರಶ್ನಿಸಿದರು. ಆಗ ಪ್ರತಿಕ್ರಿಯಿಸಿದ ರಾಮ್‌ದೇವ್ “ಹೌದು ನಾನು ಹಾಗೆ ಹೇಳಿದ್ದೆ. ಈಗ ನೀನು ಏನು ಮಾಡ್ತೀಯ? ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡ. ನಿನ್ನ ಪ್ರಶ್ನೆಗಳಿಗೆ ಉತ್ತರಿಸಿಲು ನಾನು ನಿನ್ನ ಗುತ್ತಿಗೆದಾರನಲ್ಲ” ಎಂದು ಉತ್ತರಿಸಿದ್ದಾರೆ.

ಈಗ ಪೆಟ್ರೋಲ್ ಬೆಲೆ ಗಗನಕ್ಕೆ ಏರಿಕೆ ಎಂದು ಪತ್ರಕರ್ತ ಪ್ರಶ್ನಿಸಿದಾಗ ಕೆಂಡಮಂಡಲವಾದ ರಾಮ್‌ದೇವ್ “ಬಾಯ್ಮುಚ್ಚು, ಇದೇ ರೀತಿ ಪ್ರಶ್ನಿಸಿದರೆ ನಿನಗೆ ಒಳ್ಳೆಯದಾಗುವುದಿಲ್ಲ. ಈ ರೀತಿ ಮಾತನಾಡಬೇಡ. ನೀನು ಒಳ್ಳೇಯ ಕುಟುಂಬದವನಾಗಿರಬೇಕು” ಎಂದು ಪರೋಕ್ಷವಾಗಿ ಧಮಕಿ ಹಾಕಿದ್ದಾರೆ.

ನಂತರ ಮಾತನಾಡಿದ ರಾಮ್‌ದೇವ್, “ಈ ಕಷ್ಟಕರ ಸಮಯದಲ್ಲಿ ಜನರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಬೇಕು. ಇಂಧನ ಬೆಲೆ ಕಡಿಮೆ ಮಾಡಿದರೆ ಸರ್ಕಾರಕ್ಕೆ ತೆರಿಗೆ ಸಂಗ್ರಹವಾಗುವುದಿಲ್ಲ. ಹಾಗಾದರೆ ದೇಶವನ್ನು ನಡೆಸುವುದು ಹೇಗೆ? ಜನರಿಗೆ ಸಂಬಳ ಕೊಡಬೇಕು, ರಸ್ತೆಗಳನ್ನು ನಿರ್ಮಿಸಬೇಕು ಅಲ್ಲವೆ. ಹೌದು, ಹಣದುಬ್ಬರ ಕಡಿಮೆಯಾಗಬೇಕೆಂದು ನಾನು ಒಪ್ಪುತ್ತೇನೆ. ಆದರೆ ಜನರು ಕಷ್ಟಪಟ್ಟು ಕೆಲಸ ಮಾಡಬೇಕು. ನಾನು ಕೂಡ ಬೆಳಿಗ್ಗೆ 4 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರೆಗೂ ಕೆಲಸ ಮಾಡುತ್ತೇನೆ” ಎಂದು ಹೇಳಿದಾಗ ಅವರ ಸುತ್ತ ನೆರೆದಿದ್ದ ಬೆಂಬಲಿಗರು ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ.

ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಬಾಬಾ ರಾಮ್‌ದೇವ್ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕುರಿತು ಸತತ ಟೀಕೆ ಮಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರದ ಕಾರಣದಿಂದ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಬ್ರಿಟೀಷ್ ಮನಸ್ಥಿತಿಯ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದಾಗಿ ಬಡತನ ಹೆಚ್ಚುತ್ತಿದೆ ಅದಕ್ಕೆ ನೇರವಾಗಿ ಸರ್ಕಾರವೇ ಕಾರಣವಾಗಿದೆ ಎಂದು ಕಟುವಾಗಿ ಟೀಕಿಸಿದ್ದರು.

ಕಪ್ಪು ಹಣ ವಾಪಸ್ ತಂದರೆ 30 ರೂಗೆ ಒಂದು ಲೀಟರ್ ಪೆಟ್ರೋಲ್ ನೀಡಬಹುದು ಎಂದು ರಾಮ್‌ದೇವ್ ಹೇಳಿದ್ದರು. ಯುಪಿಎ ಸರ್ಕಾರ ಇಂಧನಗಳ ಮೇಲೆ 50% ತೆರಿಗೆ ವಿಧಿಸುವ ಮೂಲಕ ಜನರ ಕೈಯಲ್ಲಿನ ಹಣವನ್ನು ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದ್ದರು. ಈಗ ಬಿಜೆಪಿ ಸರ್ಕಾರ ಬಂದ ನಂತರ ಅವರು ಪೆಟ್ರೋಲ್ ಡೀಸೆಲ್ ಬೆಲೆ ದುಪ್ಪಟ್ಟಾದರೂ ತುಟಿ ಬಿಚ್ಚುತ್ತಿಲ್ಲ. ಪ್ರಶ್ನಿಸಿದ ಪತ್ರಕರ್ತನಿಗೆ ಧಮಕಿ ಹಾಕಿದ್ದಲ್ಲದೆ, ಜನರು ಕಷ್ಟಪಟ್ಟು ದುಡಿಯಬೇಕೆಂದು ಉಪದೇಶ ನೀಡಿದ್ದಾರೆ.

ಕೇಂದ್ರ ಸರ್ಕಾರ ಕಳೆದ 10 ದಿನಗಳಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಬೆಂಗಳೂರಿನಲ್ಲಿ 9 ಬಾರಿ ಬೆಲೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ ಬೆಲೆ 107.30 ರೂಗೆ ತಲುಪಿದೆ. ಡೀಸೆಲ್ ದರ 91.27 ರೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...