Homeಮುಖಪುಟಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

"ಚುನಾವಣೆಯಲ್ಲಿ ಸೋಲಿಸಲಾಗದ ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ" -ಕೇಜ್ರಿವಾಲ್

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಯ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ’ ಎಂದಿದ್ದಾರೆ.

“ಪ್ರಪಂಚದ ಅತಿ ದೊಡ್ಡ ಪಕ್ಷ ಮತ್ತು ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿಯು ಈ ರೀತಿಯ ಗೂಂಡಾಗಿರಿ ನಡೆಸಿದರೆ ದೇಶದ ಯುವಜನರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ? ಈ ರೀತಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಏಕೆಂದರೆ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ” ಕೇಜ್ರಿವಾಲ್ ಹೇಳಿದ್ದಾರೆ.

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್‌ ನೀಡಿದ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು ಕೇಜ್ರಿವಾಲ್ ಮನಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸಿದೆ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿದ್ದು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.

ಪಂಜಾಬ್ ವಿಧಾನಸಭೆಯಲ್ಲಿ ಎಎಪಿ ಗೆಲುವು ಬಿಜೆಪಿಯನ್ನು ಕಂಗೆಡಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಈಗ ಅವರನ್ನು ಕೊಲ್ಲಲು ಬಯಸಿದೆ ಎಂದಿದ್ದಾರೆ.

ಬುಧವಾರ ಮುಖ್ಯಮಂತ್ರಿಯವರ ಮನೆ ಮೇಲೆ ನಡೆದ ದಾಳಿಯು, ಪೊಲೀಸರ ಸಹಾಯದಿಂದ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಔಪಚಾರಿಕ ದೂರು ನೀಡುತ್ತೇವೆ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಕೇಜ್ರಿವಾಲ್ ಮೇಲೆ ನಡೆದಿರುವ ಜೀವ ಬೆದರಿಕೆಯ ದಾಳಿ ಇದಾಗಿದೆ. ದಾಳಿಯನ್ನು ವ್ಯವಸ್ಥಿತವಾಗಿ ಯೋಜಿಸಲಾಗಿದೆ” ಎಂದು ಅವರು ದೂರಿದ್ದಾರೆ.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರ ನೇತೃತ್ವದಲ್ಲಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿಯವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಕೇಜ್ರಿವಾಲ್ ಅಣಕಿಸಿದ್ದಾರೆಂದು ಆರೋಪಿಸಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಸೂರ್ಯ ಸೇರಿದಂತೆ ಕೆಲವು ಸದಸ್ಯರು ಸಿಎಂ ನಿವಾಸದ ಮುಖ್ಯ ಗೇಟ್ ತಲುಪಲು ಯಶಸ್ವಿಯಾದರು. ಸ್ಟೀಲ್ ಬಾಗಿಲಿಗೆ ಬಣ್ಣ ಎಸೆದರು. ಗೇಟ್ ಬಳಿ ಅಳವಡಿಸಲಾದ ಸಿಸಿಟಿವಿಯನ್ನು ಹಾನಿಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದಾರೆ.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದರು.

‘ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಪ್ರಯತ್ನವಾಗಿದೆ’ ಎಂಬ ಸಿಸೋಡಿಯಾ ಹೇಳಿಕೆಯನ್ನು ಉಲ್ಲೇಖಿಸಿದ ಸೂರ್ಯ, “ನಾವು ಅವರನ್ನು (ಕೇಜ್ರಿವಾಲ್) ಭೇಟಿ ಮಾಡಿ ನಮ್ಮ ದುಃಖವನ್ನು ವ್ಯಕ್ತಪಡಿಸಲು ಬಯಸಿದ್ದೇವೆ. ಇದು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವ ಯತ್ನ ಎಂದಿರುವುದು ಉನ್ಮಾದ ಮತ್ತು ಕಲ್ಪನೆಯಿಂದ ಕೂಡಿದೆ” ಎಂದಿದ್ದಾರೆ.

ಎಎಪಿ ಶಾಸಕ ಅತಿಶಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿಎಂ ಮನೆಗೆ ಹೇಗೆ ತಲುಪಲು ಸಾಧ್ಯವಾಯಿತು ಎಂದು ಕೇಳಿದ್ದಾರೆ. “ಶಾಕಿಂಗ್! ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದಾಗ ದೆಹಲಿ ಪೊಲೀಸರು ಏನು ಮಾಡುತ್ತಿದ್ದರು?” ಎಂದು ಟ್ವೀಟ್ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 70 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ಐಪಿ ಕಾಲೇಜು ಬಳಿಯ ಲಿಂಕ್ ರಸ್ತೆಯಲ್ಲಿರುವ ಸಿಎಂ ನಿವಾಸದ ಹೊರಗೆ ಬಿಜೆವೈಎಂನ ಸುಮಾರು 150-200 ಪ್ರತಿಭಟನಾಕಾರರು ಧರಣಿ ಆರಂಭಿಸಿದರು ಎಂದು ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾಹಿತಿ ನೀಡಿದ್ದಾರೆ.

“ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ದೆಹಲಿ ಸಿಎಂ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ನಿವಾಸದ ಹೊರಗೆ ಬಂದು ಗದ್ದಲ ಎಬ್ಬಿಸಿ ಘೋಷಣೆಗಳನ್ನು ಕೂಗಿದರು. ಸಿಎಂ ಮನೆ ಬಾಗಿಲಿಗೂ ಬಣ್ಣ ಎರಚಿದ್ದಾರೆ. ಬೂಮ್ ತಡೆಗೋಡೆ ಮತ್ತು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಧ್ವಂಸಗೊಳಿಸಲಾಗಿದೆ” ಎಂದು ಹೇಳಿದರು.

ಕಳೆದ ಗುರುವಾರ, ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ಕಾಶ್ಮೀರಿ ಪಂಡಿತರ ನಿರ್ಗಮನವನ್ನು “ದೊಡ್ಡ ದುರಂತ” ಮತ್ತು “ಅನ್ಯಾಯ” ಎಂದು ಕರೆದಿರುವ ಕೇಜ್ರಿವಾಲ್, “ಬಿಜೆಪಿಗೆ ಕಾಶ್ಮೀರ ಫೈಲ್‌ಗಳು ಮುಖ್ಯವಾಗಿದೆ. ನನಗೆ ಕಾಶ್ಮೀರಿ ಪಂಡಿತರು ಹೆಚ್ಚು ಮುಖ್ಯ. ಕಾಶ್ಮೀರದಿಂದ ಪಂಡಿತರು ವಲಸೆ ಬಂದಾಗ 1993ರಲ್ಲಿ 233 ಪಂಡಿತರು ದೆಹಲಿ ಸರ್ಕಾರಕ್ಕೆ ಗುತ್ತಿಗೆ ಶಿಕ್ಷಕರಾಗಿ ಸೇರಿದ್ದರು. ನಮ್ಮ ಸರ್ಕಾರ ಬಂದಾಗ ಅವರನ್ನೆಲ್ಲ ಖಾಯಂ ಮಾಡಿದೆವು. ನಾವು ಅವರ ಮೇಲೆ ಸಿನಿಮಾ ಮಾಡಿಲ್ಲ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...