Homeಮುಖಪುಟಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

"ಚುನಾವಣೆಯಲ್ಲಿ ಸೋಲಿಸಲಾಗದ ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ" -ಕೇಜ್ರಿವಾಲ್

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಯ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ’ ಎಂದಿದ್ದಾರೆ.

“ಪ್ರಪಂಚದ ಅತಿ ದೊಡ್ಡ ಪಕ್ಷ ಮತ್ತು ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿಯು ಈ ರೀತಿಯ ಗೂಂಡಾಗಿರಿ ನಡೆಸಿದರೆ ದೇಶದ ಯುವಜನರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ? ಈ ರೀತಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಏಕೆಂದರೆ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ” ಕೇಜ್ರಿವಾಲ್ ಹೇಳಿದ್ದಾರೆ.

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್‌ ನೀಡಿದ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು ಕೇಜ್ರಿವಾಲ್ ಮನಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸಿದೆ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿದ್ದು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.

ಪಂಜಾಬ್ ವಿಧಾನಸಭೆಯಲ್ಲಿ ಎಎಪಿ ಗೆಲುವು ಬಿಜೆಪಿಯನ್ನು ಕಂಗೆಡಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಈಗ ಅವರನ್ನು ಕೊಲ್ಲಲು ಬಯಸಿದೆ ಎಂದಿದ್ದಾರೆ.

ಬುಧವಾರ ಮುಖ್ಯಮಂತ್ರಿಯವರ ಮನೆ ಮೇಲೆ ನಡೆದ ದಾಳಿಯು, ಪೊಲೀಸರ ಸಹಾಯದಿಂದ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಔಪಚಾರಿಕ ದೂರು ನೀಡುತ್ತೇವೆ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಕೇಜ್ರಿವಾಲ್ ಮೇಲೆ ನಡೆದಿರುವ ಜೀವ ಬೆದರಿಕೆಯ ದಾಳಿ ಇದಾಗಿದೆ. ದಾಳಿಯನ್ನು ವ್ಯವಸ್ಥಿತವಾಗಿ ಯೋಜಿಸಲಾಗಿದೆ” ಎಂದು ಅವರು ದೂರಿದ್ದಾರೆ.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರ ನೇತೃತ್ವದಲ್ಲಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿಯವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಕೇಜ್ರಿವಾಲ್ ಅಣಕಿಸಿದ್ದಾರೆಂದು ಆರೋಪಿಸಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಸೂರ್ಯ ಸೇರಿದಂತೆ ಕೆಲವು ಸದಸ್ಯರು ಸಿಎಂ ನಿವಾಸದ ಮುಖ್ಯ ಗೇಟ್ ತಲುಪಲು ಯಶಸ್ವಿಯಾದರು. ಸ್ಟೀಲ್ ಬಾಗಿಲಿಗೆ ಬಣ್ಣ ಎಸೆದರು. ಗೇಟ್ ಬಳಿ ಅಳವಡಿಸಲಾದ ಸಿಸಿಟಿವಿಯನ್ನು ಹಾನಿಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದಾರೆ.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದರು.

‘ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಪ್ರಯತ್ನವಾಗಿದೆ’ ಎಂಬ ಸಿಸೋಡಿಯಾ ಹೇಳಿಕೆಯನ್ನು ಉಲ್ಲೇಖಿಸಿದ ಸೂರ್ಯ, “ನಾವು ಅವರನ್ನು (ಕೇಜ್ರಿವಾಲ್) ಭೇಟಿ ಮಾಡಿ ನಮ್ಮ ದುಃಖವನ್ನು ವ್ಯಕ್ತಪಡಿಸಲು ಬಯಸಿದ್ದೇವೆ. ಇದು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವ ಯತ್ನ ಎಂದಿರುವುದು ಉನ್ಮಾದ ಮತ್ತು ಕಲ್ಪನೆಯಿಂದ ಕೂಡಿದೆ” ಎಂದಿದ್ದಾರೆ.

ಎಎಪಿ ಶಾಸಕ ಅತಿಶಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿಎಂ ಮನೆಗೆ ಹೇಗೆ ತಲುಪಲು ಸಾಧ್ಯವಾಯಿತು ಎಂದು ಕೇಳಿದ್ದಾರೆ. “ಶಾಕಿಂಗ್! ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದಾಗ ದೆಹಲಿ ಪೊಲೀಸರು ಏನು ಮಾಡುತ್ತಿದ್ದರು?” ಎಂದು ಟ್ವೀಟ್ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 70 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ಐಪಿ ಕಾಲೇಜು ಬಳಿಯ ಲಿಂಕ್ ರಸ್ತೆಯಲ್ಲಿರುವ ಸಿಎಂ ನಿವಾಸದ ಹೊರಗೆ ಬಿಜೆವೈಎಂನ ಸುಮಾರು 150-200 ಪ್ರತಿಭಟನಾಕಾರರು ಧರಣಿ ಆರಂಭಿಸಿದರು ಎಂದು ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾಹಿತಿ ನೀಡಿದ್ದಾರೆ.

“ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ದೆಹಲಿ ಸಿಎಂ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ನಿವಾಸದ ಹೊರಗೆ ಬಂದು ಗದ್ದಲ ಎಬ್ಬಿಸಿ ಘೋಷಣೆಗಳನ್ನು ಕೂಗಿದರು. ಸಿಎಂ ಮನೆ ಬಾಗಿಲಿಗೂ ಬಣ್ಣ ಎರಚಿದ್ದಾರೆ. ಬೂಮ್ ತಡೆಗೋಡೆ ಮತ್ತು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಧ್ವಂಸಗೊಳಿಸಲಾಗಿದೆ” ಎಂದು ಹೇಳಿದರು.

ಕಳೆದ ಗುರುವಾರ, ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ಕಾಶ್ಮೀರಿ ಪಂಡಿತರ ನಿರ್ಗಮನವನ್ನು “ದೊಡ್ಡ ದುರಂತ” ಮತ್ತು “ಅನ್ಯಾಯ” ಎಂದು ಕರೆದಿರುವ ಕೇಜ್ರಿವಾಲ್, “ಬಿಜೆಪಿಗೆ ಕಾಶ್ಮೀರ ಫೈಲ್‌ಗಳು ಮುಖ್ಯವಾಗಿದೆ. ನನಗೆ ಕಾಶ್ಮೀರಿ ಪಂಡಿತರು ಹೆಚ್ಚು ಮುಖ್ಯ. ಕಾಶ್ಮೀರದಿಂದ ಪಂಡಿತರು ವಲಸೆ ಬಂದಾಗ 1993ರಲ್ಲಿ 233 ಪಂಡಿತರು ದೆಹಲಿ ಸರ್ಕಾರಕ್ಕೆ ಗುತ್ತಿಗೆ ಶಿಕ್ಷಕರಾಗಿ ಸೇರಿದ್ದರು. ನಮ್ಮ ಸರ್ಕಾರ ಬಂದಾಗ ಅವರನ್ನೆಲ್ಲ ಖಾಯಂ ಮಾಡಿದೆವು. ನಾವು ಅವರ ಮೇಲೆ ಸಿನಿಮಾ ಮಾಡಿಲ್ಲ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...