Homeದಲಿತ್ ಫೈಲ್ಸ್ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ...

ದಲಿತರು ಭಾಗವಹಿಸುತ್ತಾರೆ ಎಂಬ ಭಯದಲ್ಲಿ ಜಾತ್ರೆ ರದ್ದು?: ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಇಂದಿಗೂ ಸಾಮಾಜಿಕ ಬಹಿಷ್ಕಾರ

ಸ್ಪೃಶ್ಯತೆಯನ್ನು ತೊಲಗಿಸಲು ಸಾಧ್ಯವಿಲ್ಲದಿದ್ದರೆ, ಸರಕಾರಿ ಯೋಜನೆಗೆ ತನ್ನ ಮಗನ ಹೆಸರಿಟ್ಟು ಏನು ಪ್ರಯೋಜನ ಎಂದು ವಿನಯನ ತಂದೆ ಚಂದ್ರಶೇಖರ ಶಿವಪ್ಪ ಕೇಳುತ್ತಾರೆ

- Advertisement -
- Advertisement -

ಕರ್ನಾಟಕವು ತನ್ನ ಅಸ್ಪೃಶ್ಯತಾ ವಿರೋಧಿ ಕಾರ್ಯಕ್ರಮಕ್ಕೆ ಈ ದಲಿತ ಬಾಲಕನ ಹೆಸರಿಟ್ಟಿದೆ. ಆದರೆ, ಆದದ್ದೇನು? ಆ ಊರಿನ ಗ್ರಾಮಸ್ಥರು ಆ ಬಾಲಕನ ಕುಟುಂಬಕ್ಕೇ ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ್ದಾರೆ!

2021ರ ಸೆ. 4 ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ವಿನಯ ಹೆಸರಿನ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು. ಈ ಘಟನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಸರಕಾರವು ತನ್ನ ಅಸ್ಪೃಶ್ಯತಾ ವಿರೋಧಿ ಯೋಜನೆಗೆ ಯಾವ ದಲಿತ ಹುಡುಗನ ಹೆಸರಿಟ್ಟಿತೋ, ಅದೇ ಹುಡುಗನ ಕುಟುಂಬವನ್ನೇ ಊರವರು ಸಾಮಾಜಿಕ ಬಹಿಷ್ಕಾರ ಹಾಕಿ ಹೊರದಬ್ಬಿದ ಘಟನೆಯೊಂದನ್ನು “ಇಂಡಿಯನ್ ಎಕ್ಸ್‌ಪ್ರೆಸ್” ವರದಿ ಮಾಡಿದೆ.

ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಸ್ಪೃಶ್ಯತೆಯ ಕುರಿತು ಅರಿವು ಮೂಡಿಸುವ “ವಿನಯ ಸಾಮರಸ್ಯ ಯೋಜನೆ”ಯನ್ನು ಬಸವರಾಜ ಬೊಮ್ಮಾಯಿ ಸರಕಾರ ಘೋಷಿಸಿದ್ದು, ಇದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14ರಂದು ಚಾಲನೆಗೊಳ್ಳಲಿದೆ.

ಮೂರು ವರ್ಷಗಳ ದಲಿತ ಮಗು ವಿನಯ, ಮಳೆಯಿಂದ ರಕ್ಷಣೆ ಪಡೆಯಲು ಆಕಸ್ಮಿಕವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾಮದ ಮುಖಂಡರು ಅವನ ಕುಟುಂಬಕ್ಕೆ 25,000 ರೂ.ಗಳ ದಂಡ ವಿಧಿಸಿತ್ತು. ಮಾಧ್ಯಮಗಳಲ್ಲಿ ವರದಿಯಾದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳ ಬಂಧನವೂ ಆಗಿತ್ತು. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಕ್ಕಿತೆ? ಇಲ್ಲ ಇದೀಗ ಅದು ಸಾಲದು ಎಂಬಂತೆ ಈ ಕುಟುಂಬವು ಇನ್ನೂ ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗಿದೆ.

ಈ ಘಟನೆಯ ನಂತರ ಮುಖ್ಯವಾಗಿ ಗಾಣಿಗ ಸಮುದಾಯದವರೇ ಇರುವ 1,500ರಷ್ಟು ಗ್ರಾಮಸ್ಥರು ಈ ದಲಿತ ಕುಟುಂಬಕ್ಕೆ ಎಂತಾ ಕಿರುಕುಳ ನೀಡಿದ್ದಾರೆಂದರೆ, ಆ ಕುಟುಂಬ ತನ್ನ ಕೃಷಿ ಜಮೀನನ್ನೂ, ಊರನ್ನೂ ಬಿಟ್ಟುಹೋಗಿದೆ.

ಈ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾದವರು ಜಾಮೀನಿನ ಮೇಲೆ ಹೊರಬಂದಿದ್ದು, ಈಗ ಗ್ರಾಮವನ್ನೇ ಆಳುತ್ತಿದ್ದಾರೆ ಎಂದು ವಿನಯನ ಕುಟುಂಬದವರು ಹೇಳುತ್ತಾರೆ..

ದಲಿತರು ಭಾಗವಹಿಸಬಹುದು ಎಂಬ ಭಯದಿಂದ ವರ್ಷ ವರ್ಷವೂ ನಡೆಯುವ ಊರ ಜಾತ್ರೆಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಹೇಳುತ್ತಾರೆ. ಆದರೆ, ಜಾತ್ರೆ ರದ್ದಾಗಿರುವ ಬಗ್ಗೆ ತಮಗೇನೂ ಮಾಹಿತಿಯಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸುತ್ತದೆ.

“ಊರಲ್ಲಿ ನಡೆದ ಎಲ್ಲಾ ಕೆಟ್ಟದಕ್ಕೂ ನಮ್ಮ ಕುಟುಂಬವೇ ಕಾರಣ ಎಂದು ಊರವರು ದೂರುತ್ತಾರೆ. ಒಂದು ವೇಳೆ ಏನಾದರೂ ತುರ್ತಾದ ಉಪಕಾರ ಆಗಬೇಕಿದ್ದರೂ, ಅದು ಈ ಊರಿನಲ್ಲಿ ಸಿಗುವ ಸಾಧ್ಯತೆ ಇಲ್ಲ” ಎಂದವರು ಹೇಳುತ್ತಾರೆ. ಈ ಕುಟುಂಬವು ಈಗ ಚಂದ್ರಶೇಖರ ಅವರ ತಾಯಿಯ ಊರಾದ ಯಲಬುರ್ಗಾದಲ್ಲಿ ವಾಸಿಸುತ್ತಿದೆ.

ಚಂದ್ರಶೇಖರ ಅವರಿಗೆ ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ದೊರೆತಿದ್ದು, ಅವರೊಂದು ಕಾರು ತೊಳೆಯುವ ಅಂಗಡಿಯನ್ನು ಆರಂಭಿಸುವ ಯೋಚನೆ ಹೊಂದಿದ್ದಾರೆ. ಆದರೆ, ಮಿಯಾಪುರದಲ್ಲಿರುವ ತನ್ನ ಜಮೀನನ್ನು ರಕ್ಷಿಸಲು ಅಥವಾ ಬದಲಿ ಜಮೀನು ಪಡೆಯಲು ಸರಕಾರದೊಂದಿಗೆ ನಡೆಸಿದ ಪ್ರಯತ್ನ ಫಲ ನೀಡಿಲ್ಲ ಎಂದವರು ಹೇಳುತ್ತಾರೆ.

“ನಾನಿನ್ನು ಸರಕಾರಿ ಅಧಿಕಾರಿಗಳ ಮುಂದೆ ಕೈಯೊಡ್ಡಿ ಬೇಡಲು ಹೋಗುವುದಿಲ್ಲ. ನನಗಿದು ಈಗ ಸಾಕಾಗಿ ಹೋಗಿದೆ” ಎನ್ನುತ್ತಾರವರು.

“ಅವರಿಗೆ ಯಲಬುರ್ಗಾದಲ್ಲಿ ಜಮೀನು ದೊರಕಿಸಿ, ಮನೆ ಕಟ್ಟಲು ನೆರವಾಗುವ ಪ್ರಯತ್ನ ಮಾಡಲಾಗಿದೆ” ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಕ್ಕೆ ಅಶ್ಪಶ್ಯತೆ ಆಚರಣೆ ತಡೆಗಟ್ಟುವ ನಿಜವಾದ ಕಾಳಜಿ ಇದ್ದಲ್ಲಿ, ರಾಜ್ಯದ ಸಮಸ್ತ ಜನರಲ್ಲಿ ಕಾನೂನು ಅರಿವು ಮೂಡಿಸಬೇಕಿದೆ. ಜಿಲ್ಲಾಡಳಿತ ಜಾತೀಯತೆ ಕ್ರೂರ ಆಚರಣೆ ಎಂಬುದಾಗಿ ಅರಿವು ಮೂಡಿಸಬೇಕು. ಜಾತಿ ದೌರ್ಜನ್ಯವೆಸಗಿದವರಿಗೆ ಕಠಿಣ ಶಿಕ್ಷೆ ಇದೆ ಎಂದು ದೊಡ್ಡ ದೊಡ್ಡ ಹೋರ್ಡಿಂಗ್‌ಗಳ ಮೂಲಕ, ಟಿವಿ-ಪತ್ರಿಕೆ ಜಾಹೀರಾತುಗಳ ಮೂಲಕ ಜನರಿಗೆ ಅರಿವು ಮತ್ತು ಎಚ್ಚರಿಕೆ ಮೂಡಿಸಬೇಕು” ಎಂದರು.

ಜಾತಿಯನ್ನು ಮನುಷ್ಯರು ಸೃಷ್ಟಿಸಿದ್ದಾರೆಯೆ ಹೊರತು ದೇವರಲ್ಲ. ಹಾಗಾಗಿ ದಲಿತ ದಮನಿತರ ಮೇಲೆ ದೌರ್ಜನ್ಯವೆಸಗುವುದು ಅಪರಾಧವಾಗಿದೆ ಎಂದು ಸವರ್ಣಿಯ ಸಮುದಾಯಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಅದೇ ಸಂದರ್ಭದಲ್ಲಿ ದಲಿತ ದಮನಿತರು ಆರ್ಥಿಕವಾಗಿ-ಸಾಮಾಜಿಕವಾಗಿ ಮೇಲೆತ್ತಲು ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು. ಅದೇ ಸಂದರ್ಭದಲ್ಲಿ ಸಮಾನತೆ-ಸಾಮರಸ್ಯದ ಕಾರ್ಯಕ್ರಮಗಳನ್ನು ಪ್ರಜ್ಞಾಪೂರ್ವಕವಾಗಿ ಏರ್ಪಡಿಸಬೇಕು. ಅದನ್ನು ಸರ್ಕಾರ ಜಾರಿಗೆ ತರುತ್ತಿರುವ ವಿನಯ ಸಾಮರಸ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ತರಬೇಕು ಎಂದು ಕರಿಯಪ್ಪ ಗುಡಿಮನಿ ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯೋ ….ನಮ್ಮೂರಲ್ಲಿ ದಲಿತರು ದೈವಕ್ಷೇತ್ರ ಪ್ರವೇಶ ಮಾಡ್ತಾರೆಂದು ಆ ಕ್ಷೇತ್ರವನ್ನೇ ಮುಚ್ಚಿದ್ದಾರೆ. ೨೦೧೮ ರಿಂದ ನಮ್ಮ ಗ್ರಾಮ ದೈವಸ್ಥಾನ ಮುಚ್ಚಲ್ಪಟ್ಟಿದೆ. ಇಲ್ಲಿಯವರೇನೂ ಎಲ್ಲಿಗೂ ಓಡಿಹೋಗಿಲ್ಲ. ನಿರಂತರ ಹೋರಾಟಗಳ ಮೂಲಕ ಮುಚ್ಚಿದವರ ನಿದ್ದೆಗೆಡಿಸುತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...