Homeಮುಖಪುಟಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ.

- Advertisement -
- Advertisement -

ಹಲಾಲ್ ವಿರುದ್ಧ ಕರಪತ್ರ ಹಂಚಿ ಒಂದು ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ತಿಳಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಜರಂಗದಳದವರು ಈಗ ಹಲಾಲ್ – ಜಟ್ಕಾ ಕಟ್ ಎಂಬ ಹೆಸರಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ಅವರು ಹಲಾಲ್ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಅದರ ಬದಲಿಗೆ ಜಟ್ಕಾ ಕಟ್ ತೆಗೆದುಕೊಳ್ಳಿ ಎಂದು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು, ಕಟ್ ಮಾಡಲು ಅದೇ ಸಮಾಜದವರೇ ಬರಬೇಕು. ಅವರು ಹಲಾಲ್ ಮಾಡ್ತಾರೊ, ಬಿಡ್ತಾರೊ ಅದು ವಿಷಯವಲ್ಲ. ನಮ್ಮ ರೈತರು ಎಷ್ಟು ಮಾಂಸ ಕಟ್ ಮಾಡುವ ಡಿಮ್ಯಾಂಡ್ ಇದೆ ಅದನ್ನು ಇವರು ಪೂರೈಸುವ ಪರಿಸ್ಥಿತಿಯಲ್ಲಿ ಇಲ್ಲ. ನಿಮ್ಮ ಜಟ್ಕಾ ಕಟ್ ಮಾಡೋಕು, ಇನ್ನೊಂದು ಮಾಡೋಕು ಆ ಸಮುದಾಯದವರೇ ಬೇಕು” ಎಂದರು.

ಈಗ ರೇಷ್ಮೆ, ಮಾವು ಬೆಳೆ ಮಾರಾಟಕ್ಕೂ ಸಹ ಅದೇ ಸಮುದಾಯದವರು ಬರಬೇಕು. ಈ ಬಜರಂಗದಳ ಪೋಲಿಗಳು ಬರ್ತಾವಾ ರೇಷ್ಮೆ ಮತ್ತು ಮಾವು ಖರೀದಿ ಮಾಡಲು? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಮಾವು ಬೆಳೆ ನಷ್ಟವಾಗಿದೆ. ನಾಳೆ ಮಾವು ಖರೀದಿ ಮಾಡಲು ನಮಗೆ ಅದೇ ಸಮುದಾಯದ ಸಹಕಾರ ಬೇಕು. ಇವು ಯಾವೊ ವಿಶ್ವ ಹಿಂದೂ ಪರಿಷತ್‌ನವರು, ಬಜರಂಗದಳದವರು ತಮ್ಮ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರ ಇಟ್ಟುಕೊಂಡು ಹೊರಟಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ. ಆದರೆ ರೈತನ ಮಗನಾಗಿ ಇವರನ್ನು ನಂಬಬೇಡಿ, ಇವರು ಸಮಾಜ ಹಾಳು ಮಾಡಲು ಬರುತ್ತಿದ್ದಾರೆ ಎಂದು ರೈತರಿಗೆ ಹೇಳಲು ಬಯಸುತ್ತೇನೆ ಎಂದರು.

ಇಷ್ಟು ವರ್ಷ ಹಲಾಲ್ ಮಾಂಸ ತಿಂದಿದ್ದೇವೆ, ಏನಾಗಿದೆ ನಮಗೆ? ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಯ್ತದ? ನಮ್ಮ ದೇವರು ನಮ್ಮನ್ನು ಮೆಚ್ಚಲ್ವ.‌ ಇಷ್ಟು ವರ್ಷ ಹಲಾಲ್ ತಿಂದಾಗ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಇದು ತಪ್ಪು ಎಂದು ಹೇಳಲಿಲ್ಲವಲ್ಲ ಎಂದು ಲೇವಡಿ ಮಾಡಿದರು.

“ಇವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ನನಗೆ ಓಟು ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಇರಬೇಕು, ನಾಡಿನ ಜನ ನೆಮ್ಮದಿಯಿಂದ ಬದುಕಬೇಕು ಎಂಬುದು ನನ್ನ ಬಯಕೆ. ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ. ಅಯ್ಯೊ ಹಿಂದುಗಳು ನಮಗೆ ವೋಟು ಹಾಕದಿದ್ರೆ ಎಂಬ ಭಯದಲ್ಲಿ ಕಾಂಗ್ರೆಸ್‌ನವರಿಗೆ ಈ ವಿಷಯ ಮಾತನಾಡಲು ತಾಕತ್ ಇಲ್ಲ. ಪಾಪಾ ಧೈರ್ಯ ಕಳೆದುಕೊಂಡಿದ್ದಾರೆ ಅವರು. ಆದರೆ ಮತಬ್ಯಾಂಕ್‌ಗಿಂತ ಹೆಚ್ಚಾಗಿ ನನ್ನ ಜನರ ಬದುಕು ಮುಖ್ಯ ನನಗೆ. ಎಲ್ಲಾ ಸಮಾಜಗಳು ಒಟ್ಟಿಗೆ ಬದುಕಬೇಕು. ಕುವೆಂಪುರವರ ಸಂದೇಶದಂತೆ ಇದು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಏಕೆ ಬೆಂಕಿ ಹಚ್ಚಲು ಬಂದಿದ್ದೀರಿ ನೀವು? ಇದನ್ನೆಲ್ಲ ಉತ್ತರ ಪ್ರದೇಶದಲ್ಲಿ ಇಟ್ಟುಕೊಳ್ಳಿ. ನಿಮ್ಮಿಂದ ಈ ರಾಜ್ಯ ಕಟ್ಟಲು ಆಗುವುದಿಲ್ಲ” ಎಂದು ಎಚ್‌.ಡಿಕೆ ಕಿಡಿಕಾರಿದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರೂ ಈ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು? ಎಂದು ಎಚ್‌ಡಿಕೆ ಪ್ರಶ್ನಿಸಿದರು. ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ ಇನ್ನು‌ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕೂಡಲೆ ಈ ರೀತಿ ಮಾತನಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಸವಾಲು ಹಾಕಿದರು.

ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೆ ಸ್ಪರ್ಧೆ

ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ. ಇವತ್ತಿ‌ನ ಮಂಡ್ಯ ಸಂಸದರ ಹೇಳಿಕೆಗಳು ನೋಡಿದಾಗ ಇದು ನನ್ನ ಮನಸ್ಸಿಗೆ ಬಂದಿದೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು‌‌. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜಘಾತುಕ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕುಮಾರಣ್ಣನವರು ಹೇಳಿಕೆ ಸತ್ಯವಾದುದು ಕೇಸರಿ ಬಣ್ಣಕ್ಕೆ ಇರುವಂತಹ ಮೌಲ್ಯವನ್ನು ಕೆಲವೊಂದು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಕುಮಾರಣ್ಣನವರ ಈ ಹೋರಾಟಕ್ಕೆ ನಾವೆಲ್ಲರೂ ಧ್ವನಿಗೂಡಿಸಿದ ಸಮರ್ಥಿಸೋಣ ಹಾಗೂ ಕುಮಾರಣ್ಣನವರ ಹೇಳಿಕೆಯ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ವನ್ನು ಪ್ರಾರಂಭಿಸೋಣ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...