Homeಮುಖಪುಟನ್ಯಾಯಾಲಯದ ತ್ವರಿತ ಸಂವಹನಕ್ಕಾಗಿ ಸಾಫ್ಟ್‌ವೇರ್ ಬಿಡುಗಡೆ ಮಾಡಿದ ಮುಖ್ಯನ್ಯಾಯಮೂರ್ತಿ ಎನ್‌.ವಿ. ರಮಣ

ನ್ಯಾಯಾಲಯದ ತ್ವರಿತ ಸಂವಹನಕ್ಕಾಗಿ ಸಾಫ್ಟ್‌ವೇರ್ ಬಿಡುಗಡೆ ಮಾಡಿದ ಮುಖ್ಯನ್ಯಾಯಮೂರ್ತಿ ಎನ್‌.ವಿ. ರಮಣ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ. ರಮಣ ಅವರು ಸಾಫ್ಟ್‌ವೇರ್ ಫಾಸ್ಟ್ ಮತ್ತು ಸೆಕ್ಯೂರ್ಡ್ ಟ್ರಾನ್ಸ್‌ಮಿಷನ್ ಆಫ್ ಎಲೆಕ್ಟ್ರಾನಿಕ್ ರೆಕಾರ್ಡ್ಸ್ (ಫಾಸ್ಟರ್) ಅನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ. ಹೊಸ ಸಾಫ್ಟ್‌ವೇರ್ ಸುಗಮ ಸಂವಹನ ಮತ್ತು ನ್ಯಾಯಾಲಯದ ಆದೇಶಗಳನ್ನು ತ್ವರಿತವಾಗಿ ರವಾನಿಸಲು ಅನುವು ಮಾಡಿಕೊಡುತ್ತದೆ ಎಂದು ರಮಣ ಹೇಳಿದ್ದಾರೆ.

ಹೊಸ ಸಾಫ್ಟ್‌ವೇರ್‌ ಜೈಲುಗಳು ಮತ್ತು ಅಧಿಕಾರಿಗಳ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ ಮುಖ್ಯನ್ಯಾಯಮೂರ್ತಿ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಪ್ರಸ್ತುತ ಸಾಫ್ಟ್‌ವೇರ್ ಗೌಪ್ಯತೆ ಮತ್ತು ಸುರಕ್ಷತೆಯನ್ನು ಸಹ ಖಚಿತಪಡಿಸುತ್ತದೆ ಎಂದು ಸಿಜೆಐ ರಮಣ ಹೇಳಿದ್ದು, ಪತ್ರಿಕೆಯ ಜಾಹಿರಾತೊಂದು ನ್ಯಾಯಾಲಯದ ಗಮನಕ್ಕೆ ಬಂದ ನಂತರ ಸಾಫ್ಟ್‌ವೇರ್‌ನ ಕಲ್ಪನೆ ಮೂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಜಾಹೀರಾತಿನ ನಂತರ ನ್ಯಾಯಾಲಯವು ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡು, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್, ಹೇಮನ್ ಗುಪ್ತಾ ಮತ್ತು ಇತರರನ್ನು ಜೊತೆಗೂಡಿಸಿತು. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ನೀಡಿದ ಆದೇಶಗಳನ್ನು ಮೂರನೇ ವ್ಯಕ್ತಿಗಳ ಪಾಲ್ಗೊಳ್ಳುವಿಕೆ ಇಲ್ಲದೆ ಸುರಕ್ಷಿತವಾಗಿ ಕಳುಹಿಸಬೇಕು ಎಂದು ಸಿಜೆಐ ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ನೇತೃತ್ವದ ಪೀಠವು ಜಾಮೀನು ಮಂಜೂರು ಮಾಡಿದ ನಂತರವೂ ಕೈದಿಗಳ ಬಿಡುಗಡೆ ವಿಳಂಬ ಮಾಡಿರುವ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡಿತ್ತು. ಪೀಠವು ಸುಪ್ರೀಂಕೋರ್ಟ್‌ನ ಸೆಕ್ರೆಟರಿ ಜನರಲ್‌ಗೆ ಜಾಮೀನು ವೇಗವಾಗಿ ಜಾರಿಗೊಳಿಸುವ ವಿಧಾನಗಳ ಶಿಫಾರಸುಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿತ್ತು.

ತ್ವರಿತ ಅನುಷ್ಠಾನದ ಮೇಲ್ವಿಚಾರಣೆಗಾಗಿ ಹೈಕೋರ್ಟ್‌ಗಳ ಮಟ್ಟದಲ್ಲಿ 73 ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಸಿಜೆಐ ಮಾಹಿತಿ ನೀಡಿದ್ದಾರೆ. ಈ ವ್ಯವಸ್ಥೆಗಾಗಿ, 1,887 ಸುರಕ್ಷಿತ-ಪಾತ್‌ವೇ ಇಮೇಲ್ ಐಡಿಗಳೊಂದಿಗೆ ನ್ಯಾಯಾಂಗ ಸಂವಹನ ಜಾಲವನ್ನು ರಚಿಸಲಾಗಿದೆ ಮತ್ತು ವಿನಿಮಯವನ್ನು ಈ ಚಾನಲ್‌ಗಳಿಗೆ ನಿರ್ಬಂಧಿಸಲಾಗುತ್ತದೆ ಎಂದು ರಮಣ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...