Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...