Homeಮುಖಪುಟಮೀಸಲು ಕ್ಷೇತ್ರದ ತಲ್ಲಣ ಹೇಳುವ 'ಧೀರ ಭಗತ್ ರಾಯ್‌' ಚಿತ್ರದ ಟೀಸರ್ ಬಿಡುಗಡೆ

ಮೀಸಲು ಕ್ಷೇತ್ರದ ತಲ್ಲಣ ಹೇಳುವ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ

"ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ" ಎಂಬ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

- Advertisement -
- Advertisement -

ಜಾತೀಯತೆ, ಜಾತಿ ತಾರತಮ್ಯ ಭಾರತದ ವಾಸ್ತವ. ಇಂತಹ ರಾಷ್ಟ್ರದಲ್ಲಿ ಸಾಮಾಜಿಕ ನ್ಯಾಯ ಜಾರಿಗೊಳಿಸುವುದಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಜಾರಿಗೊಳಿಸಿದರು. ಆ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರ ಮತ್ತು ದ್ವಿಮತಕ್ಕಾಗಿ ಹೋರಾಡಿದ್ದರು. ಆದರೆ ಗಾಂಧೀಜಿ ಸೇರಿದಂತೆ ಹಲವರ ವಿರೋಧದಿಂದಾಗಿ ಅದು ಜಾರಿಯಾಗಲಿಲ್ಲ. ಆನಂತರ ದೇಶಾದ್ಯಂತ ಮೀಸಲು ಕ್ಷೇತ್ರಗಳು ಅಸ್ತಿತ್ವಕ್ಕೆ ಬಂದವು. ಮೀಸಲಾತಿ ಜಾರಿಯಾದಾಗಿನಿಂದ ಆ ಕ್ಷೇತ್ರಗಳಲ್ಲಿ ಆದ ಬದಲಾವಣೆಗಳೇನು? ಇಂದಿನ ಪರಿಸ್ಥಿತಿ ಹೇಗಿದೆ? ಈ ಎಲ್ಲಾ ವಿಷಯಗಳನ್ನು ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಯುವ ನಿರ್ದೇಶಕ ಕರ್ಣನ್.

ಅವರು ತಮ್ಮ ಬಹುನಿರೀಕ್ಷಿತ ಚಿತ್ರ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ಎಲ್ಲೆಡೆ ಪ್ರಸಂಶೆಯ ಜೊತೆಗೆ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ. “ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ” ಎಂಬ ಟೀಸರ್‌ನಲ್ಲಿನ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

ನಿರ್ದೇಶಕ ಕರ್ಣನ್

ತಮಿಳು, ತೆಲುಗು ಭಾಷೆಗಳಲ್ಲಿ ಜಾತಿ ದೌರ್ಜನ್ಯದ ಹಲವಾರು ಚಿತ್ರಗಳು ಬಂದು ಸಾಕಷ್ಟು ಗಮನ ಸೆಳೆದಿವೆ. ಅಸುರನ್, ಪಲಾಸ, ಕರ್ಣನ್, ಸರ್ಪಟ್ಟ ಪರಂಬರೈ, ಲವ್ ಸ್ಟೋರಿ, ಪರಿಯೆರುಮ್ ಪೆರುಮಾಳ್, ಜೈಭೀಮ್ ಥರದ ಸಿನಿಮಾಗಳು ಇಡೀ ದೇಶಾದ್ಯಂತ ಚರ್ಚೆಗೆ ಒಳಪಟ್ಟಿವೆ. ಕನ್ನಡದಲ್ಲಿ ಇಂತಹ ಸಿನಿಮಾಗಳು ಬರುತ್ತಿಲ್ಲ ಎಂಬ ಕೊರಗು ನೀಗಿಸಲು ಮುಂದಾಗಿದ್ದಾರೆ ನಿರ್ದೇಶಕ ಕರ್ಣನ್.

ನೆಲಮಂಗಲದ ಅರುಣ್‌ರವರು ಒಂದು ದಶಕದಿಂದ ಚಿತ್ರರಂಗದಲ್ಲಿದ್ದಾರೆ. ತಮಿಳುನಲ್ಲಿ ಮಾರಿ ಸೆಲ್ವರಾಜ್ ನಿರ್ದೇಶನದ, ಧನುಶ್ ಅಭಿನಯದ ಕರ್ಣನ್ ಚಿತ್ರ ಬಿಡುಗಡೆಯಾದ ಮೇಲೆ ಆ ಚಿತ್ರದ ಪ್ರಭಾವಕ್ಕೆ ಒಳಗಾಗಿ ಅವರು ತಮ್ಮ ಹೆಸರನ್ನು ಕರ್ಣನ್ ಎಂದು ಬದಲಿಸಿಕೊಂಡಿದ್ದಾರೆ!. ಅವರ ಚೊಚ್ಚಲ ಚಿತ್ರವೇ ‘ಧೀರ ಭಗತ್ ರಾಯ್‌’ ಆಗಿದೆ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಅಧಿಕಾರ ಬೇಕು. ಆ ಅಧಿಕಾರದಿಂದ ವಂಚಿತರಾದವರ ಕಥೆ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ಕರ್ಣನ್.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ““ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ.

ರಾಕೇಶ್ ದಳವಾಯಿ ಮತ್ತು ಸುಚರಿತ

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ.


ಇದನ್ನು ಓದಿ: ವಿಶ್ಲೇಷಣೆ; ದಲಿತ ರಾಜಕಾರಣ ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...