Homeಮುಖಪುಟಮೀಸಲು ಕ್ಷೇತ್ರದ ತಲ್ಲಣ ಹೇಳುವ 'ಧೀರ ಭಗತ್ ರಾಯ್‌' ಚಿತ್ರದ ಟೀಸರ್ ಬಿಡುಗಡೆ

ಮೀಸಲು ಕ್ಷೇತ್ರದ ತಲ್ಲಣ ಹೇಳುವ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ

"ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ" ಎಂಬ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

- Advertisement -
- Advertisement -

ಜಾತೀಯತೆ, ಜಾತಿ ತಾರತಮ್ಯ ಭಾರತದ ವಾಸ್ತವ. ಇಂತಹ ರಾಷ್ಟ್ರದಲ್ಲಿ ಸಾಮಾಜಿಕ ನ್ಯಾಯ ಜಾರಿಗೊಳಿಸುವುದಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಜಾರಿಗೊಳಿಸಿದರು. ಆ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರ ಮತ್ತು ದ್ವಿಮತಕ್ಕಾಗಿ ಹೋರಾಡಿದ್ದರು. ಆದರೆ ಗಾಂಧೀಜಿ ಸೇರಿದಂತೆ ಹಲವರ ವಿರೋಧದಿಂದಾಗಿ ಅದು ಜಾರಿಯಾಗಲಿಲ್ಲ. ಆನಂತರ ದೇಶಾದ್ಯಂತ ಮೀಸಲು ಕ್ಷೇತ್ರಗಳು ಅಸ್ತಿತ್ವಕ್ಕೆ ಬಂದವು. ಮೀಸಲಾತಿ ಜಾರಿಯಾದಾಗಿನಿಂದ ಆ ಕ್ಷೇತ್ರಗಳಲ್ಲಿ ಆದ ಬದಲಾವಣೆಗಳೇನು? ಇಂದಿನ ಪರಿಸ್ಥಿತಿ ಹೇಗಿದೆ? ಈ ಎಲ್ಲಾ ವಿಷಯಗಳನ್ನು ಸಿನಿಮಾ ಮೂಲಕ ಹೇಳಲು ಹೊರಟಿದ್ದಾರೆ ಯುವ ನಿರ್ದೇಶಕ ಕರ್ಣನ್.

ಅವರು ತಮ್ಮ ಬಹುನಿರೀಕ್ಷಿತ ಚಿತ್ರ ‘ಧೀರ ಭಗತ್ ರಾಯ್‌’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ಎಲ್ಲೆಡೆ ಪ್ರಸಂಶೆಯ ಜೊತೆಗೆ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ. “ಇಷ್ಟು ದಿನ ನಾವು ತಿಂದು ಬಿಟ್ಟಿದ್ದನ್ನು ತಿನ್ನುತ್ತಿದ್ದ ನಿಮಗೆ, ನಮ್ಮ ವಿರುದ್ಧವೇ ಮಾತಾಡುವಷ್ಟು ಧೈರ್ಯ ಬಂದಿದ್ದು ಹೇಗೆ” ಎಂಬ ಟೀಸರ್‌ನಲ್ಲಿನ ಸಂಭಾಷಣೆಯು ಇದು ಜಾತಿ ದೌರ್ಜನ್ಯದ ಕಥೆ ಹೇಳುತ್ತಿದೆ ಎಂದು ಸೂಚಿಸುತ್ತದೆ.

ನಿರ್ದೇಶಕ ಕರ್ಣನ್

ತಮಿಳು, ತೆಲುಗು ಭಾಷೆಗಳಲ್ಲಿ ಜಾತಿ ದೌರ್ಜನ್ಯದ ಹಲವಾರು ಚಿತ್ರಗಳು ಬಂದು ಸಾಕಷ್ಟು ಗಮನ ಸೆಳೆದಿವೆ. ಅಸುರನ್, ಪಲಾಸ, ಕರ್ಣನ್, ಸರ್ಪಟ್ಟ ಪರಂಬರೈ, ಲವ್ ಸ್ಟೋರಿ, ಪರಿಯೆರುಮ್ ಪೆರುಮಾಳ್, ಜೈಭೀಮ್ ಥರದ ಸಿನಿಮಾಗಳು ಇಡೀ ದೇಶಾದ್ಯಂತ ಚರ್ಚೆಗೆ ಒಳಪಟ್ಟಿವೆ. ಕನ್ನಡದಲ್ಲಿ ಇಂತಹ ಸಿನಿಮಾಗಳು ಬರುತ್ತಿಲ್ಲ ಎಂಬ ಕೊರಗು ನೀಗಿಸಲು ಮುಂದಾಗಿದ್ದಾರೆ ನಿರ್ದೇಶಕ ಕರ್ಣನ್.

ನೆಲಮಂಗಲದ ಅರುಣ್‌ರವರು ಒಂದು ದಶಕದಿಂದ ಚಿತ್ರರಂಗದಲ್ಲಿದ್ದಾರೆ. ತಮಿಳುನಲ್ಲಿ ಮಾರಿ ಸೆಲ್ವರಾಜ್ ನಿರ್ದೇಶನದ, ಧನುಶ್ ಅಭಿನಯದ ಕರ್ಣನ್ ಚಿತ್ರ ಬಿಡುಗಡೆಯಾದ ಮೇಲೆ ಆ ಚಿತ್ರದ ಪ್ರಭಾವಕ್ಕೆ ಒಳಗಾಗಿ ಅವರು ತಮ್ಮ ಹೆಸರನ್ನು ಕರ್ಣನ್ ಎಂದು ಬದಲಿಸಿಕೊಂಡಿದ್ದಾರೆ!. ಅವರ ಚೊಚ್ಚಲ ಚಿತ್ರವೇ ‘ಧೀರ ಭಗತ್ ರಾಯ್‌’ ಆಗಿದೆ.

’ಕಥಾ ನಾಯಕ ಭಗತ್ ಎಂಬುವವ ಒಬ್ಬ ವಕೀಲ. ಆತ ತನ್ನ ಜನರಿಗಾಗಿ ಹೇಗೆ ಗ್ಯಾಂಗ್‌ಸ್ಟರ್‌ ಆಗಿ ಬಳಿಕ ರಾಜಕೀಯ ನಾಯಕನಾಗುತ್ತಾನೆ ಎಂಬುದು ಕಥೆ. ರಾಜಕೀಯ ಶಕ್ತಿ ಇದ್ದರೇ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಅಧಿಕಾರ ಬೇಕು. ಆ ಅಧಿಕಾರದಿಂದ ವಂಚಿತರಾದವರ ಕಥೆ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ಕರ್ಣನ್.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ““ಒಂದು ಮೀಸಲು ಕ್ಷೇತ್ರದಲ್ಲಿ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ. ನಾವು ಆಯ್ಕೆ ಮಾಡಿ ಕಳುಹಿಸುವವರು ನಮಗಾಗಿ ಕೆಲಸ ಮಾಡುತ್ತಾರೆಯೇ…? ಗೆದ್ದ ಶಾಸಕನನ್ನು ಕಂಟ್ರೋಲ್ ಮಾಡುವ ಕೈಗಳು ಯಾವುವು…? ಮೀಸಲು ಕ್ಷೇತ್ರದಲ್ಲಿ ಹೇಗೆ ತಮಗೆ ಬೇಕಾದವರನ್ನು ಗೆಲ್ಲಿಸಿಕೊಳ್ಳುತ್ತಾರೆ. ಆ ಕ್ಷೇತ್ರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಳಗಿವೆಯೇ ಎಂಬುದು ಮುಖ್ಯ. ನಾನು ಕೂಡ ಒಬ್ಬ ಮೀಸಲು ಕ್ಷೇತ್ರದಲ್ಲಿ ಬೆಳೆದವನಾದ್ದರಿಂದ, ಅಲ್ಲಿನ ಸಮಸ್ಯೆಗಳ ಜೊತೆಯಲ್ಲಿಯೇ ಬದುಕು ಸಾಗಿಸುತ್ತಿರುವ ಕಾರಣ ಇದರ ಕುರಿತು ಏಕೆ ಸಿನಿಮಾ ಮಾಡಬಾರದು ಎಂಬ ಆಯೋಚನೆ ಬಂತು. 2 ವರ್ಷ ಒಂದು ಕಥೆಯ ಮೇಲೆ ಕೆಲಸ ಮಾಡಿ ಸಿನಿಮಾ ನಿರ್ದೇಶಿಸಿದ್ದೇನೆ” ಎನ್ನುತ್ತಾರೆ.

ರಾಕೇಶ್ ದಳವಾಯಿ ಮತ್ತು ಸುಚರಿತ

ರಂಗಭೂಮಿ ಕಲಾವಿದ ರಾಕೇಶ್ ದಳವಾಯಿ, ನಟ ಶರತ್ ಲೋಹಿತಾಶ್ವ, ನಟಿ ಸುಚರಿತ, ಚೈತ್ರಾ ಕೊಟ್ಟೂರು ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಲೂಸಿಯಾ, ಯೂಟರ್ನ್ ಖ್ಯಾತಿಯ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ.


ಇದನ್ನು ಓದಿ: ವಿಶ್ಲೇಷಣೆ; ದಲಿತ ರಾಜಕಾರಣ ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...