Homeಕರ್ನಾಟಕಗದಗ: ತನ್ನ ಮನೆಯಲ್ಲೆ ಬಾಡಿಗೆಗೆ ವಾಸವಿರುವ ಸವರ್ಣೀಯ ವ್ಯಕ್ತಿಯಿಂದ ದಲಿತ ವಿಧವೆಯ ಮೇಲೆ ಹಲ್ಲೆ

ಗದಗ: ತನ್ನ ಮನೆಯಲ್ಲೆ ಬಾಡಿಗೆಗೆ ವಾಸವಿರುವ ಸವರ್ಣೀಯ ವ್ಯಕ್ತಿಯಿಂದ ದಲಿತ ವಿಧವೆಯ ಮೇಲೆ ಹಲ್ಲೆ

- Advertisement -
- Advertisement -

ದಲಿತ ವಿಧವೆ ಮಹಿಳೆಯ ಮನೆಯಲ್ಲೇ ಬಾಡಿಗೆಗೆ ವಾಸಿಸುತ್ತಿರುವ ಸವರ್ಣೀಯ ಸಮುದಾಯದ ವ್ಯಕ್ತಿಯೊಬ್ಬ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದು ತಡವಾಗಿ ವರದಿಯಾಗಿದೆ. ಆರೋಪಿಯ ವಿರುದ್ದ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನರಗುಂದ ಠಾಣೆಯ ಇನ್ಸ್‌ಪೆಕ್ಟರ್‌ ಜಯಂತ್‌ ಗೌಳಿ ಅವರು ನಾನುಗೌರಿ.ಕಾಂಗೆ ಶುಕ್ರವಾರ ಹೇಳಿದ್ದಾರೆ.

ನರಗುಂದದ ಎಸ್‌‌ಟಿ ಸಮುದಾಯಕ್ಕೆ ಸೇರಿರುವ ಸಂಗೀತ ಎಂಬ ವಿಧವೆ ಮಹಿಳೆಯ ಮೇಲೆ, ಅವರ ಮನೆಯಲ್ಲೇ ಬಾಡಿಗೆಗೆ ವಾಸವಿರುವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಚಂದ್ರೇಗೌಡ ಕಣ್ಣೂರು ಎಂಬ ವ್ಯಕ್ತಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದಾನೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಮಹಿಳೆಯು ತನಗೆ ನ್ಯಾಯ ಕೊಡಿಸುವಂತೆ ಸಾರ್ವಜನಿಕವಾಗಿ ಕೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಸಂಗೀತ ಅವರ ಗಂಡ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇದೀಗ ಅವರು ತನ್ನ ಇಬ್ಬರು ಮಕ್ಕಳೊಂದಿಗೆ ತನ್ನ ಗಂಡನ ಮನೆಯಲ್ಲಿ ವಾಸವಾಗಿದ್ದಾರೆ. ಈ ಹಿಂದೆ ಅತಿಥಿ ಶಿಕ್ಷಕಿಯಾಗಿದ್ದ ಕೆಲಸ ಮಾಡುತ್ತಿದ್ದ ಸಂಗೀತ ಅವರು ಪ್ರಸ್ತುತ ನಿರುದ್ಯೋಗಿಯಾಗಿದ್ದಾರೆ.

ಇದನ್ನೂ ಓದಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಆರೋಪಿ ಚಂದ್ರೇಗೌಡ ಕಳೆದ ತಿಂಗಳು ಕೂಡಾ ತನ್ನ ಮೇಲೆ ಹಲ್ಲೆ ನಡೆಸಿದ್ದನು ಎಂದು ಸಂಗೀತಾ ಹೇಳಿದ್ದಾರೆ. ಆ ಸಮಯದಲ್ಲಿ ಪೊಲೀಸರಿಗೆ ದೂರು ನೀಡಿದ್ದರೂ ಅದನ್ನು ಪ್ರಕರಣ ದಾಖಲಿಸಿರಲಿಲ್ಲ. ನನ್ನನ್ನೇ ಅವಮಾನ ಮಾಡಿ ವಾಪಾಸು ಕಳುಹಿಸಿದ್ದರು. ಆ ಸಮಯದಲ್ಲಿಗ ಗಾಯ ಕೂಡಾ ಆಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಇದೀಗ ಮತ್ತೆ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದ್ದು, ವಿಡಿಯೊವನ್ನು ಕೂಡಾ ಸಂಗೀತ ಅವರು ನಾನುಗೌರಿ.ಕಾಂಗೆ ಕಳುಹಿಸಿದ್ದಾರೆ.

ವಿಡಿಯೊದಲ್ಲಿ ಆರೋಪಿ ಚಂದ್ರೇಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯೊದು ಸೇರಿದಂತೆ, ಅವರ ಮಕ್ಕಳ ಮುಂದೆಯೆ ಅವರ ಮೇಲೆ ದೈಹಿಕ ಹಲ್ಲೆ ಕೂಡಾ ನಡೆಸಿರುವುದು ದಾಖಲಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಂಗೀತ ಅವರು, “ನನ್ನ ಗಂಡನ ಮನೆಯವರಿಗೆ ಸುಮಾರು ಐದು ಮನೆಗಳು ಇವೆ. ನಾನು ಗಂಡನಿಗೆ ಸೇರಿದ ಮನೆಯಲ್ಲಿ ವಾಸವಿದ್ದೇನೆ. ಆದರೆ ಅತ್ತೆ ಮತ್ತು ನಾದಿನಿ ಅಲ್ಲಿಂದ ತೆರಳುವಂತೆ ಹೇಳುತ್ತಿದ್ದಾರೆ. ನಾನು ಅವರಲ್ಲಿ ಇದೊಂದು ಮನೆ ನನಗೆ ಕೊಡಿ ಎಂದು ಕೇಳುತ್ತಾ ಬಂದಿದ್ದೇನೆ. ಆದರೆ ಅವರು ನಮ್ಮದೇ ಮತ್ತೊಂದು ಮನೆಯಲ್ಲಿ ಬಾಡಿಗೆಗೆ ಇರುವ ಚಂದ್ರೇಗೌಡ ಅವರಿಗೆ ಕುಮ್ಮಕ್ಕು ನೀಡಿ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ಸಂಗೀತ ಅವರ ಗಂಡ ತೀರಿಹೋದ ನಂತರ ಅವರ ಅತ್ತೆ ಮತ್ತು ಅವರ ನಾದಿನಿ ಅವರಿಗೆ ಕಿರುಕುಳ ನೀಡುತ್ತಲೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ. ತನ್ನ ಇಬ್ಬರು ಮಕ್ಕಳನ್ನು ಇಟ್ಟುಕೊಂಡು ನಿರುದ್ಯೋಗಿ ಆಗಿರುವ ನಾನು ಮನೆ ಬಿಟ್ಟು ಎಲ್ಲಿಗೆ ಹೋಗಲಿ ಎಂದು ಅವರು ಪ್ರಶ್ನಿಸಿದ್ದಾರೆ.

ಚಂದ್ರೇಗೌಡ, ಅವರ ಅಕ್ಕ, ತಂಗಿ, ಅವರ ತಾಯಿ ಮೇಲೆ ದೂರು ನೀಡಿದ್ದಾಗಿ ಸಂಗೀತ ಹೇಳಿದ್ದಾರೆ. ಸಂತ್ರಸ್ತೆ ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದಲಿತ ದೌರ್ಜನ್ಯದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ನರಗುಂಡ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌‌ ಜಯಂತ್‌ ಗೌಳಿ ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜಯಂತ್ ಅವರು,“ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದರ ವಿರುದ್ದ ದಲಿತ ದೌರ್ಜನ್ಯದ ಅಡಿಯಲ್ಲಿ ಎಫ್‌ಐಆರ್‌‌ ದಾಖಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಇನ್ನೂ ಬಂಧನ ನಡೆದಿಲ್ಲ. ತನಿಖೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...