Homeಕರ್ನಾಟಕಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ...

ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ಮುಂದುವರೆಸಿದ ಕುಮಾರಸ್ವಾಮಿ

- Advertisement -
- Advertisement -

‘ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರವೂ ಮುಂದುವರೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ” ಎಂದು ಅವರು ಹೇಳಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ” ಎಂದು ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

“ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್‌ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ” ಎಂದು ಅವರು ಅಭಿಪ್ರಾಯಪಟ್ಟದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.
ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ” ಎಂದು ಅವರು ಹೇಳಿದ್ದಾರೆ.

“ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ” ಎಂದು ಅವರು ವಿನಂತಿಸಿದ್ದಾರೆ.

“ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...