Homeಕರ್ನಾಟಕಮತ್ತೆ ಇಂಧನ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ; ತುಮಕೂರಿನಲ್ಲಿ ಪೆಟ್ರೋಲ್‌ಗೆ ಬರೋಬ್ಬರಿ 2 ರೂ....

ಮತ್ತೆ ಇಂಧನ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ; ತುಮಕೂರಿನಲ್ಲಿ ಪೆಟ್ರೋಲ್‌ಗೆ ಬರೋಬ್ಬರಿ 2 ರೂ. ಏರಿಕೆ!

- Advertisement -
- Advertisement -

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಭಾನುವಾರ ಮತ್ತೊಮ್ಮೆ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಿದೆ. ಕಳೆದ ಹದಿಮೂರು ದಿನಗಳಿಂದ ಇಂಧನ ದರ ಹೆಚ್ಚಳವಾಗುತ್ತಲೆ ಇದ್ದು, ಐದು ರಾಜ್ಯಗಳ ಚುನಾವಣೆ ನಡೆದ ನಂತರ ಲೀಟರ್‌ಗೆ 8 ರೂ. ಇದುವರೆಗೂ ಏರಿಕೆಯಾಗಿದೆ.

ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪೆಟ್ರೋಲ್ ದರವು ನಿನ್ನೆಯ 102.61 ರೂ. ನಿಂದ 103.41 ರೂಗೆ ಏರಿಕೆಯಾಗಿದೆ. ಡೀಸೆಲ್ ದರಗಳು ಲೀಟರ್‌ಗೆ 93.87 ರೂ. ನಿಂದ 94.67 ರೂ.ಗೆ ಏರಿದೆ. ಈ ಬೆಲೆ ಏರಿಕೆಯೊಂದಿಗೆ ರಾಜ್ಯದಲ್ಲೂ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕ್ರಮವಾಗಿ 88 ಪೈಸೆ ಮತ್ತು 81 ಪೈಸೆ ಏರಿಕೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಬೆಂಗಳೂರಿನಲ್ಲಿ 85 ಪೈಸೆ ಪೆಟ್ರೋಲ್‌ಗೆ ಮತ್ತು 78 ಪೈಸೆ ಡೀಸೆಲ್‌ಗೆ ಏರಿಕೆಯಾಗಿದ್ದು, ಇದರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ,108.99 ರೂ. ಮತ್ತು 92.83 ರೂ.ಗೆ ತಲುಪಿದೆ.

ಇಂದಿನ ಬೆಲೆ ಏರಿಕೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಬರೋಬ್ಬರಿ 2 ರೂ. ಏರಿಕೆಯಾಗಿದ್ದು, ಡೀಸೆಲ್‌ಗೆ 1.83 ರೂ. ಏರಿಕೆಯಾಗಿದೆ. ಇದು ಇಂದು ರಾಜ್ಯದಲ್ಲೇ ಅತೀ ಹೆಚ್ಚು ಇಂಧನ ದರ ಏರಿಕೆಯಾದ ಜಿಲ್ಲೆಯಾಗಿದೆ. ಇದರೊಂದಿಗೆ ಅಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ, 110.46 ರೂ. ಮತ್ತು 94.17 ರೂ.ಗೆ ತಲುಪಿದೆ.

ಇದನ್ನೂ ಓದಿ: ‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

ಪ್ರಸ್ತುತ ರಾಜ್ಯದಲ್ಲೇ ಅತೀ ಹೆಚ್ಚು ಪೆಟ್ರೋಲ್‌ ದರ ಇರುವ ಜಿಲ್ಲೆಯಾಗಿ ದಾವಣಗೆರೆ ಹೊರಹೊಮ್ಮಿದೆ. ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 110.95 ರೂ.ಗೆ ತಲುಪಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ 110 ರೂ. ದಾಟುತ್ತಿದೆ. ಜಿಲ್ಲಾವಾರು ಬೆಲೆ ಏರಿಕೆಯ ಪಟ್ಟಿ ಕೆಳಗಿನಂತಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಶುಕ್ರವಾರದಂದು ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿರಲಿಲ್ಲ. ಅದರ ಬದಲಿಗೆ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 KG ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಏಕಾಏಕಿ 250ರೂ.ಗೆ ಏರಿಸಿ, ಗ್ರಾಹಕರ ಕಿಸೆಗೆ ಕನ್ನ ಹಾಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...