Homeಮುಖಪುಟಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

ಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ನಾಡಿನಾದ್ಯಂತ ಕೋಮು ಸಾಮರಸ್ಯ ಹಾಳುಗೆಡವುತ್ತಿರುವ ಮಧ್ಯೆ, ‘ಸೌಹಾರ್ದ ಕರ್ನಾಟಕ’ ಹಾಗೂ ಇನ್ನಿತರ ಜನಪರ ಸಂಘಟನೆಗಳ ನೇತೃತ್ವದಲ್ಲಿ ಎಲ್ಲಾ ಸಮುದಾಯಗಳ ಜನರು ಒಟ್ಟು ಸೇರಿ ರಾಜ್ಯದಾದ್ಯಂತ ಉಗಾದಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿದ್ದಾರೆ.

‘ಸೌಹಾರ್ದ ಕರ್ನಾಟಕ’ ಹಾಗೂ ಜನಪರ ಸಂಘಟನೆಗಳು ಮತ್ತು ಸಿಪಿಐಎಂ ‘ಸೌಹಾರ್ದ ಯುಗಾದಿ’ಯನ್ನು ರಾಜ್ಯದಾದ್ಯಂತ ಆಚರಿಸಲು ಕರೆ ನೀಡಿತ್ತು. ಈ ಕರೆಗೆ ರಾಜ್ಯವ್ಯಾಪಿ ಉತ್ತಮ ಸ್ಪಂದನೆ ದೊರೆತಿದ್ದು, ಎಲ್ಲಾ ಸಮುದಾಯದ ಜನರು ಒಟ್ಟು ಸೇರಿ ಉಗಾದಿ ಹಬ್ಬವನ್ನು ಆಚರಿಸಿ ಸೌಹಾರ್ದ ಮೆರೆದಿದ್ದಾರೆ. ರಾಜ್ಯದ ಕಲಬುರಗಿ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ, ಬೆಂಗಳೂರು, ಹಾಸನ, ಬೀದರ್‌, ವಿಜಯಪುರ, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲಾ ಸಮುದಾಯದ ಜನರು ಸೇರಿ ಬೇವು-ಬೆಲ್ಲ ಹಂಚಿ ತಿನ್ನುವ ಮೂಲಕ ಬಿಜೆಪಿಯ ದ್ವೇಷ ರಾಜಕೀಯಕ್ಕೆ ಸೆಡ್ಡುಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ‌ ಸಿಪಿಎಂ ಪಕ್ಷದ ವತಿಯಿಂದ ಮುಸಲ್ಮಾನರೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿದೆ.‌ ವಿವಿಧ ಸಮುದಾಯಗಳ, ಸಂಘಟನೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಪಕ್ಷವು ಹೇಳಿದೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

“ತೀರಾ ಭಾವನಾತ್ಮಕವಾಗಿ ಕಾರ್ಯಕ್ರಮ ನಡೆಯಿತು. ಬೇವು ಬೆಲ್ಲವನ್ನು ಮುಸ್ಲಿಮರೊಂದಿಗೆ ಹಿಂದುಗಳು ಹಂಚಿಕೊಂಡರು. ಸರಕಾರವೇ ನಿಂತು ಮುಸಲ್ಮಾನರನ್ನು ಪ್ರತ್ಯೇಕಿಸುವ, ಬಹಿಷ್ಕಾರ ಹಾಕುವ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವಾಗ ಇದೊಂದು ಪ್ರಾಯೋಗಿಕವಾದ ಮಾದರಿ ಉತ್ತರ. ದುಡಿದುಣ್ಣುವ ಜನರ ಮಧ್ಯೆ ಗೋಡೆ ಕಟ್ಟುವ ಪ್ರಯತ್ನ ನಡೆದಷ್ಟು ನಾವು ಬೆಸೆಯುವ ಕಾರ್ಯವನ್ನು ಮತ್ತಷ್ಟು ಹುರುಪಿ‌ನಿಂದ ನಡೆಸುವೆವು. ಇಂದು ಬಹಳಷ್ಟು ಕಡೆ ಸೌಹಾರ್ದ ಯುಗಾದಿ ಕಾರ್ಯಕ್ರಮ ನಡೆದಿದೆ. ಮುಸ್ಲಿಮರು ಏಕಾಂಗಿಗಳಲ್ಲ. ಅವರೊಂದಿಗೆ ಸೌಹಾರ್ದ ಪ್ರಿಯ ಹಿಂದುಗಳು ಸದಾ ಇರುತ್ತಾರೆ” ಎಂದು ಮಳವಳ್ಳಿ ಸಿಪಿಐಎಂ ಪಕ್ಷದ ಪದಾದಿಕಾರಿಗಳು ಹೇಳಿದ್ದಾರೆ.

ಕಲಬುರಗಿಯ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣದಲ್ಲಿ ಹಿಂದೂ,ಮುಸ್ಲಿಂ, ಕ್ರಿಶ್ಚಿಯನ್ ಬೌದ್ಧ ಧರ್ಮಿಯರು ಸೇರಿದಂತೆ ಹಲವಾರು ಜನರು ಸೇರಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಮೈಸೂರಿನಲ್ಲಿ ‘ಸೌಹಾರ್ದ ಕರ್ನಾಟಕ’ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸೌಹಾರ್ದ ಯುಗಾದಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿಂದೂ ಧರ್ಮಿಯರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮಿಯರೊಂದಿಗೆ ಹಬ್ಬ ಆಚರಿಸಿ ಬೇವು-ಬೆಲ್ಲ, ಹೋಳಿಗೆಯನ್ನು ಪರಸ್ಪರ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಪಟ್ಟಣದಲ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಕೋಲಾರ, ಶ್ರೀನಿವಾಸಪುರ, ಹಾಸನ, ಬೀದರ, ಬಳ್ಳಾರಿ, ವಿಜಯಪುರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹಬ್ಬವನ್ನು ಎಲ್ಲಾ ಸಮುದಾಯಗಳ ಜನರೊಂದಿಗೆ ಸೇರಿ ಆಚರಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜ್ಯ ರೈತ ಪ್ರಾಂತ ಸಂಘದ ಕಾರ್ಯದರ್ಶಿ ಬಸವರಾಜ್ ಅವರು, “ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಹಿಂದೂ ಮುಸ್ಲಿಮರ ನಡುವೆ ತಾರತಮ್ಯ ಮಾಡುವುದು, ದ್ವೇಷ ಹರಡುವುದನ್ನು ಸರ್ಕಾರವೇ ಮಾಡುತ್ತಿವೆ. ಅದನ್ನು ಮೀರಿ ಈ ಸಂದರ್ಭದಲ್ಲಿ ಭಾವೈಕ್ಯತೆಯನ್ನು ಮರೆಯುವ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ನಾವು ತೀರ್ಮಾನ ಮಾಡಿ, ರಾಜ್ಯದಾದ್ಯಂತ ಸೌಹಾರ್ದ ಯುಗಾದಿ ಎಂದು ಆಚರಿಸಲು ಕರೆ ನೀಡಿದ್ದೆವು” ಎಂದು ಹೇಳಿದ್ದಾರೆ.

“ಕಾರ್ಯಕ್ರಮದಲ್ಲಿ, ಸೌಹಾರ್ದತೆಯ ಪರವಾಗಿ ಇರುವ ಎಲ್ಲಾ ಸಂಘಟನೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದೆವು. ರಾಜ್ಯದಾದ್ಯಂತ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಎಲ್ಲಾ ಸಮುದಾಯದ ಜನರು ಕೈ ಕೈ ಹಿಡಿದು ನಾವೆಲ್ಲರೂ ಒಂದೇ ಎಂದು ಸಾರಿ ಸಾಮರಸ್ಯ, ಸೌಹಾರ್ದತೆ ಮತ್ತು ಸಂವಿಧಾನವನ್ನು ಉಳಿಸುವ ಪ್ರತಿಜ್ಞೆ ಮಾಡಿದ್ದಾರೆ” ಎಂದು ಬಸವರಾಜ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...