Homeಮುಖಪುಟಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

ಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ನಾಡಿನಾದ್ಯಂತ ಕೋಮು ಸಾಮರಸ್ಯ ಹಾಳುಗೆಡವುತ್ತಿರುವ ಮಧ್ಯೆ, ‘ಸೌಹಾರ್ದ ಕರ್ನಾಟಕ’ ಹಾಗೂ ಇನ್ನಿತರ ಜನಪರ ಸಂಘಟನೆಗಳ ನೇತೃತ್ವದಲ್ಲಿ ಎಲ್ಲಾ ಸಮುದಾಯಗಳ ಜನರು ಒಟ್ಟು ಸೇರಿ ರಾಜ್ಯದಾದ್ಯಂತ ಉಗಾದಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿದ್ದಾರೆ.

‘ಸೌಹಾರ್ದ ಕರ್ನಾಟಕ’ ಹಾಗೂ ಜನಪರ ಸಂಘಟನೆಗಳು ಮತ್ತು ಸಿಪಿಐಎಂ ‘ಸೌಹಾರ್ದ ಯುಗಾದಿ’ಯನ್ನು ರಾಜ್ಯದಾದ್ಯಂತ ಆಚರಿಸಲು ಕರೆ ನೀಡಿತ್ತು. ಈ ಕರೆಗೆ ರಾಜ್ಯವ್ಯಾಪಿ ಉತ್ತಮ ಸ್ಪಂದನೆ ದೊರೆತಿದ್ದು, ಎಲ್ಲಾ ಸಮುದಾಯದ ಜನರು ಒಟ್ಟು ಸೇರಿ ಉಗಾದಿ ಹಬ್ಬವನ್ನು ಆಚರಿಸಿ ಸೌಹಾರ್ದ ಮೆರೆದಿದ್ದಾರೆ. ರಾಜ್ಯದ ಕಲಬುರಗಿ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ, ಬೆಂಗಳೂರು, ಹಾಸನ, ಬೀದರ್‌, ವಿಜಯಪುರ, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲಾ ಸಮುದಾಯದ ಜನರು ಸೇರಿ ಬೇವು-ಬೆಲ್ಲ ಹಂಚಿ ತಿನ್ನುವ ಮೂಲಕ ಬಿಜೆಪಿಯ ದ್ವೇಷ ರಾಜಕೀಯಕ್ಕೆ ಸೆಡ್ಡುಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ‌ ಸಿಪಿಎಂ ಪಕ್ಷದ ವತಿಯಿಂದ ಮುಸಲ್ಮಾನರೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿದೆ.‌ ವಿವಿಧ ಸಮುದಾಯಗಳ, ಸಂಘಟನೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಪಕ್ಷವು ಹೇಳಿದೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

“ತೀರಾ ಭಾವನಾತ್ಮಕವಾಗಿ ಕಾರ್ಯಕ್ರಮ ನಡೆಯಿತು. ಬೇವು ಬೆಲ್ಲವನ್ನು ಮುಸ್ಲಿಮರೊಂದಿಗೆ ಹಿಂದುಗಳು ಹಂಚಿಕೊಂಡರು. ಸರಕಾರವೇ ನಿಂತು ಮುಸಲ್ಮಾನರನ್ನು ಪ್ರತ್ಯೇಕಿಸುವ, ಬಹಿಷ್ಕಾರ ಹಾಕುವ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವಾಗ ಇದೊಂದು ಪ್ರಾಯೋಗಿಕವಾದ ಮಾದರಿ ಉತ್ತರ. ದುಡಿದುಣ್ಣುವ ಜನರ ಮಧ್ಯೆ ಗೋಡೆ ಕಟ್ಟುವ ಪ್ರಯತ್ನ ನಡೆದಷ್ಟು ನಾವು ಬೆಸೆಯುವ ಕಾರ್ಯವನ್ನು ಮತ್ತಷ್ಟು ಹುರುಪಿ‌ನಿಂದ ನಡೆಸುವೆವು. ಇಂದು ಬಹಳಷ್ಟು ಕಡೆ ಸೌಹಾರ್ದ ಯುಗಾದಿ ಕಾರ್ಯಕ್ರಮ ನಡೆದಿದೆ. ಮುಸ್ಲಿಮರು ಏಕಾಂಗಿಗಳಲ್ಲ. ಅವರೊಂದಿಗೆ ಸೌಹಾರ್ದ ಪ್ರಿಯ ಹಿಂದುಗಳು ಸದಾ ಇರುತ್ತಾರೆ” ಎಂದು ಮಳವಳ್ಳಿ ಸಿಪಿಐಎಂ ಪಕ್ಷದ ಪದಾದಿಕಾರಿಗಳು ಹೇಳಿದ್ದಾರೆ.

ಕಲಬುರಗಿಯ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣದಲ್ಲಿ ಹಿಂದೂ,ಮುಸ್ಲಿಂ, ಕ್ರಿಶ್ಚಿಯನ್ ಬೌದ್ಧ ಧರ್ಮಿಯರು ಸೇರಿದಂತೆ ಹಲವಾರು ಜನರು ಸೇರಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಮೈಸೂರಿನಲ್ಲಿ ‘ಸೌಹಾರ್ದ ಕರ್ನಾಟಕ’ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸೌಹಾರ್ದ ಯುಗಾದಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿಂದೂ ಧರ್ಮಿಯರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮಿಯರೊಂದಿಗೆ ಹಬ್ಬ ಆಚರಿಸಿ ಬೇವು-ಬೆಲ್ಲ, ಹೋಳಿಗೆಯನ್ನು ಪರಸ್ಪರ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಪಟ್ಟಣದಲ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಕೋಲಾರ, ಶ್ರೀನಿವಾಸಪುರ, ಹಾಸನ, ಬೀದರ, ಬಳ್ಳಾರಿ, ವಿಜಯಪುರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹಬ್ಬವನ್ನು ಎಲ್ಲಾ ಸಮುದಾಯಗಳ ಜನರೊಂದಿಗೆ ಸೇರಿ ಆಚರಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜ್ಯ ರೈತ ಪ್ರಾಂತ ಸಂಘದ ಕಾರ್ಯದರ್ಶಿ ಬಸವರಾಜ್ ಅವರು, “ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಹಿಂದೂ ಮುಸ್ಲಿಮರ ನಡುವೆ ತಾರತಮ್ಯ ಮಾಡುವುದು, ದ್ವೇಷ ಹರಡುವುದನ್ನು ಸರ್ಕಾರವೇ ಮಾಡುತ್ತಿವೆ. ಅದನ್ನು ಮೀರಿ ಈ ಸಂದರ್ಭದಲ್ಲಿ ಭಾವೈಕ್ಯತೆಯನ್ನು ಮರೆಯುವ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ನಾವು ತೀರ್ಮಾನ ಮಾಡಿ, ರಾಜ್ಯದಾದ್ಯಂತ ಸೌಹಾರ್ದ ಯುಗಾದಿ ಎಂದು ಆಚರಿಸಲು ಕರೆ ನೀಡಿದ್ದೆವು” ಎಂದು ಹೇಳಿದ್ದಾರೆ.

“ಕಾರ್ಯಕ್ರಮದಲ್ಲಿ, ಸೌಹಾರ್ದತೆಯ ಪರವಾಗಿ ಇರುವ ಎಲ್ಲಾ ಸಂಘಟನೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದೆವು. ರಾಜ್ಯದಾದ್ಯಂತ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಎಲ್ಲಾ ಸಮುದಾಯದ ಜನರು ಕೈ ಕೈ ಹಿಡಿದು ನಾವೆಲ್ಲರೂ ಒಂದೇ ಎಂದು ಸಾರಿ ಸಾಮರಸ್ಯ, ಸೌಹಾರ್ದತೆ ಮತ್ತು ಸಂವಿಧಾನವನ್ನು ಉಳಿಸುವ ಪ್ರತಿಜ್ಞೆ ಮಾಡಿದ್ದಾರೆ” ಎಂದು ಬಸವರಾಜ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...