Homeಮುಖಪುಟಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

ಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ನಾಡಿನಾದ್ಯಂತ ಕೋಮು ಸಾಮರಸ್ಯ ಹಾಳುಗೆಡವುತ್ತಿರುವ ಮಧ್ಯೆ, ‘ಸೌಹಾರ್ದ ಕರ್ನಾಟಕ’ ಹಾಗೂ ಇನ್ನಿತರ ಜನಪರ ಸಂಘಟನೆಗಳ ನೇತೃತ್ವದಲ್ಲಿ ಎಲ್ಲಾ ಸಮುದಾಯಗಳ ಜನರು ಒಟ್ಟು ಸೇರಿ ರಾಜ್ಯದಾದ್ಯಂತ ಉಗಾದಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿದ್ದಾರೆ.

‘ಸೌಹಾರ್ದ ಕರ್ನಾಟಕ’ ಹಾಗೂ ಜನಪರ ಸಂಘಟನೆಗಳು ಮತ್ತು ಸಿಪಿಐಎಂ ‘ಸೌಹಾರ್ದ ಯುಗಾದಿ’ಯನ್ನು ರಾಜ್ಯದಾದ್ಯಂತ ಆಚರಿಸಲು ಕರೆ ನೀಡಿತ್ತು. ಈ ಕರೆಗೆ ರಾಜ್ಯವ್ಯಾಪಿ ಉತ್ತಮ ಸ್ಪಂದನೆ ದೊರೆತಿದ್ದು, ಎಲ್ಲಾ ಸಮುದಾಯದ ಜನರು ಒಟ್ಟು ಸೇರಿ ಉಗಾದಿ ಹಬ್ಬವನ್ನು ಆಚರಿಸಿ ಸೌಹಾರ್ದ ಮೆರೆದಿದ್ದಾರೆ. ರಾಜ್ಯದ ಕಲಬುರಗಿ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ, ಬೆಂಗಳೂರು, ಹಾಸನ, ಬೀದರ್‌, ವಿಜಯಪುರ, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲಾ ಸಮುದಾಯದ ಜನರು ಸೇರಿ ಬೇವು-ಬೆಲ್ಲ ಹಂಚಿ ತಿನ್ನುವ ಮೂಲಕ ಬಿಜೆಪಿಯ ದ್ವೇಷ ರಾಜಕೀಯಕ್ಕೆ ಸೆಡ್ಡುಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ‌ ಸಿಪಿಎಂ ಪಕ್ಷದ ವತಿಯಿಂದ ಮುಸಲ್ಮಾನರೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿದೆ.‌ ವಿವಿಧ ಸಮುದಾಯಗಳ, ಸಂಘಟನೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಪಕ್ಷವು ಹೇಳಿದೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

“ತೀರಾ ಭಾವನಾತ್ಮಕವಾಗಿ ಕಾರ್ಯಕ್ರಮ ನಡೆಯಿತು. ಬೇವು ಬೆಲ್ಲವನ್ನು ಮುಸ್ಲಿಮರೊಂದಿಗೆ ಹಿಂದುಗಳು ಹಂಚಿಕೊಂಡರು. ಸರಕಾರವೇ ನಿಂತು ಮುಸಲ್ಮಾನರನ್ನು ಪ್ರತ್ಯೇಕಿಸುವ, ಬಹಿಷ್ಕಾರ ಹಾಕುವ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವಾಗ ಇದೊಂದು ಪ್ರಾಯೋಗಿಕವಾದ ಮಾದರಿ ಉತ್ತರ. ದುಡಿದುಣ್ಣುವ ಜನರ ಮಧ್ಯೆ ಗೋಡೆ ಕಟ್ಟುವ ಪ್ರಯತ್ನ ನಡೆದಷ್ಟು ನಾವು ಬೆಸೆಯುವ ಕಾರ್ಯವನ್ನು ಮತ್ತಷ್ಟು ಹುರುಪಿ‌ನಿಂದ ನಡೆಸುವೆವು. ಇಂದು ಬಹಳಷ್ಟು ಕಡೆ ಸೌಹಾರ್ದ ಯುಗಾದಿ ಕಾರ್ಯಕ್ರಮ ನಡೆದಿದೆ. ಮುಸ್ಲಿಮರು ಏಕಾಂಗಿಗಳಲ್ಲ. ಅವರೊಂದಿಗೆ ಸೌಹಾರ್ದ ಪ್ರಿಯ ಹಿಂದುಗಳು ಸದಾ ಇರುತ್ತಾರೆ” ಎಂದು ಮಳವಳ್ಳಿ ಸಿಪಿಐಎಂ ಪಕ್ಷದ ಪದಾದಿಕಾರಿಗಳು ಹೇಳಿದ್ದಾರೆ.

ಕಲಬುರಗಿಯ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣದಲ್ಲಿ ಹಿಂದೂ,ಮುಸ್ಲಿಂ, ಕ್ರಿಶ್ಚಿಯನ್ ಬೌದ್ಧ ಧರ್ಮಿಯರು ಸೇರಿದಂತೆ ಹಲವಾರು ಜನರು ಸೇರಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಮೈಸೂರಿನಲ್ಲಿ ‘ಸೌಹಾರ್ದ ಕರ್ನಾಟಕ’ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸೌಹಾರ್ದ ಯುಗಾದಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿಂದೂ ಧರ್ಮಿಯರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮಿಯರೊಂದಿಗೆ ಹಬ್ಬ ಆಚರಿಸಿ ಬೇವು-ಬೆಲ್ಲ, ಹೋಳಿಗೆಯನ್ನು ಪರಸ್ಪರ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಪಟ್ಟಣದಲ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಕೋಲಾರ, ಶ್ರೀನಿವಾಸಪುರ, ಹಾಸನ, ಬೀದರ, ಬಳ್ಳಾರಿ, ವಿಜಯಪುರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹಬ್ಬವನ್ನು ಎಲ್ಲಾ ಸಮುದಾಯಗಳ ಜನರೊಂದಿಗೆ ಸೇರಿ ಆಚರಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜ್ಯ ರೈತ ಪ್ರಾಂತ ಸಂಘದ ಕಾರ್ಯದರ್ಶಿ ಬಸವರಾಜ್ ಅವರು, “ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಹಿಂದೂ ಮುಸ್ಲಿಮರ ನಡುವೆ ತಾರತಮ್ಯ ಮಾಡುವುದು, ದ್ವೇಷ ಹರಡುವುದನ್ನು ಸರ್ಕಾರವೇ ಮಾಡುತ್ತಿವೆ. ಅದನ್ನು ಮೀರಿ ಈ ಸಂದರ್ಭದಲ್ಲಿ ಭಾವೈಕ್ಯತೆಯನ್ನು ಮರೆಯುವ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ನಾವು ತೀರ್ಮಾನ ಮಾಡಿ, ರಾಜ್ಯದಾದ್ಯಂತ ಸೌಹಾರ್ದ ಯುಗಾದಿ ಎಂದು ಆಚರಿಸಲು ಕರೆ ನೀಡಿದ್ದೆವು” ಎಂದು ಹೇಳಿದ್ದಾರೆ.

“ಕಾರ್ಯಕ್ರಮದಲ್ಲಿ, ಸೌಹಾರ್ದತೆಯ ಪರವಾಗಿ ಇರುವ ಎಲ್ಲಾ ಸಂಘಟನೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದೆವು. ರಾಜ್ಯದಾದ್ಯಂತ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಎಲ್ಲಾ ಸಮುದಾಯದ ಜನರು ಕೈ ಕೈ ಹಿಡಿದು ನಾವೆಲ್ಲರೂ ಒಂದೇ ಎಂದು ಸಾರಿ ಸಾಮರಸ್ಯ, ಸೌಹಾರ್ದತೆ ಮತ್ತು ಸಂವಿಧಾನವನ್ನು ಉಳಿಸುವ ಪ್ರತಿಜ್ಞೆ ಮಾಡಿದ್ದಾರೆ” ಎಂದು ಬಸವರಾಜ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...