Homeಅಂತರಾಷ್ಟ್ರೀಯಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರ ಆಗಮನದ ವರದಿಯನ್ನು ನಿರಾಕರಿಸಿದ ಶ್ರೀಲಂಕಾ ಸೇನೆ

- Advertisement -
- Advertisement -

ಆರ್ಥಿಕ ಬಿಕ್ಕಟ್ಟಿಗೆ ಸಿಲುಕುವುದರ ಜೊತೆಗೆ, ಶ್ರೀಲಂಕಾ ರಾಷ್ಟ್ರದಾದ್ಯಂತ ನಾಗರಿಕರ ಪ್ರತಿಭಟನೆಗಳು ಭುಗಿಲೆದ್ದಿವೆ. ಆಹಾರ ಮತ್ತು ಮೂಲಭೂತ ಅಗತ್ಯಗಳ ಕೊರತೆಯಿಂದಾಗಿ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಹೆಣಗಾಡುತ್ತಿದ್ದಾರೆ. ಈ ಮಧ್ಯೆ ಪ್ರತಿಭಟನೆಯನ್ನು ಹತ್ತಿಕ್ಕಲು ಭಾರತೀಯ ಸೈನಿಕರು ಶ್ರೀಲಂಕಾ ಪ್ರವೇಶಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹಗಳು ಹರಡಿದಾಡುತ್ತಿವೆ.

ಆದರೆ ಇದನ್ನು ನಿರಾಕರಿಸಿರುವ ಶ್ರೀಲಂಕಾ ಸೇನೆ ಮತ್ತು ಭಾರತೀಯ ಹೈಕಮಿಷನ್‌, “ಭಾರತದಿಂದ ಯಾವುದೇ ಮಿಲಿಟರಿ ಹಸ್ತಕ್ಷೇಪ ನಡೆದಿಲ್ಲ” ಎಂದು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ರಕ್ಷಣಾ ಕಾರ್ಯದರ್ಶಿ ಕಮಲ್ ಗುಣರತ್ನೆ ಶನಿವಾರದಂದು ಭಾರತೀಯ ಸೈನಿಕರ ಆಗಮನದ ವರದಿಗಳನ್ನು ತಳ್ಳಿಹಾಕಿದ್ದಾರೆ. 2021ರಲ್ಲಿ ನಡೆದ ಭಾರತ-ಶ್ರೀಲಂಕಾ ಜಂಟಿ ಮಿಲಿಟರಿ ಸಮರಭ್ಯಾಸದ ಅಧಿಕೃತ ಚಿತ್ರಗಳನ್ನು ಹೊಂದಿರುವ ನಕಲಿ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಭದ್ರತೆಯನ್ನು ಖಾತ್ರಿಪಡಿಸುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಶ್ರೀಲಂಕಾದ ಪಡೆಗಳ ಸನ್ನದ್ಧವಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ವಿಶ್ವಾಸ ವ್ಯಕ್ತಪಡಿಸಿದ್ದು, ತಪ್ಪು ಮಾಹಿತಿಯಿಂದ ಎಚ್ಚರಿಕೆಯಿಂದ ಇರಲು ಜನರನ್ನು ಕೇಳಿದ್ದಾರೆ.

ಈ ಬಗ್ಗೆ ಭಾರತೀಯ ಹೈಕಮಿಷನ್‌ ನೀಡಿದ ಹೇಳಿಕೆಯಲ್ಲಿ, “ಶ್ರೀಲಂಕಾಕ್ಕೆ ಭಾರತೀಯ ಸೇನೆಯ ಆಗಮನದ ಬಗ್ಗೆಗಿನ ವರದಿಗಳು ನಿಸ್ಸಂಶಯವಾಗಿ ಸುಳ್ಳು ಮತ್ತು ಸಂಪೂರ್ಣವಾಗಿ ಆಧಾರರಹಿತ” ಎಂದು ತಿಳಿಸಿದೆ.

ಈ ಮಧ್ಯೆ, ಶ್ರೀಲಂಕಾದಲ್ಲಿ ಭಾನುವಾರದಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಅಲ್ಲಿ ಆಡಳಿತವು ಶನಿವಾರದಿಂದ 36 ಗಂಟೆಗಳ ಸುದೀರ್ಘ ಕರ್ಫ್ಯೂ ಅನ್ನು ವಿಧಿಸಿದೆ.

ನಿನ್ನೆ ಹೊರಡಿಸಲಾದ ಗೆಜೆಟ್‌ನಲ್ಲಿ, ಶನಿವಾರ ಸಂಜೆ 6 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಇದ್ದು, ಈ ಸಮಯದಲ್ಲಿ ಸಾರ್ವಜನಿಕ ರಸ್ತೆ, ಉದ್ಯಾನವನ, ರೈಲ್ವೆ, ಸಮುದ್ರ ತೀರ ಅಥವಾ ಇತರ ಸಾರ್ವಜನಿಕ ಸ್ಥಳಗಳಿಗೆ ಜನರು ಬರುವುದನ್ನು ನಿಷೇಧಿಸಲಾಗಿದೆ.

ಈ ಕರ್ಫ್ಯೂ ವಿಧಿಸುವ ಕೆಲವೇ ಗಂಟೆಗಳ ಮೊದಲು, ರಾಷ್ಟ್ರದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆ ನೀಡಬೇಕೆಂದು ಜನರು ಬೀದಿಗಿಳಿದಿದ್ದರು.

ಗುರುವಾರ ಸಂಜೆ ಅಧ್ಯಕ್ಷರ ಭವನದ ಬಳಿ ಸಾರ್ವಜನಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಮತ್ತು ಪೊಲೀಸರು ಜನರ ಮೇಲೆ ದಾಳಿ ಮಾಡಿದ್ದರು. ಇದರ ನಂತರ ಪ್ರತಿಭಟನಾಕಾರರಲ್ಲಿ 50 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...