Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...