Homeಕರ್ನಾಟಕಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ಉದ್ಯಮಿಯನ್ನು ತೆಲಂಗಾಣಕ್ಕೆ ಕರೆದ ಸಚಿವರಿಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

“ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ರಸ್ತೆ ಹಾಗೂ ಮೂಲಸೌಕರ್ಯಗಳು ಸರಿ ಇಲ್ಲ” ಎಂದು ಆರೋಪಿಸಿ ಖಾತಾಬುಕ್‌ ಹಾಗೂ ಹೌಸಿಂಗ್‌.ಕಾಂ ಸಂಸ್ಥಾಪಕ ರವೀಶ್‌ ನರೇಶ್‌ ಟ್ವೀಟ್ ಮಾಡಿದ್ದು ಈಗ ರಾಜಕೀಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ.

“ಎಚ್.ಎಸ್‌.ಆರ್‌./ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ನಷ್ಟು ತೆರಿಗೆ ನೀಡುತ್ತಿವೆ. ಆದರೂ ನಮ್ಮಲ್ಲಿ ಸರಿಯಾದ ರಸ್ತೆಗಳಿಲ್ಲ, ಬಹುತೇಕ ದಿನನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಕಿರುದಾರಿಗಳಿವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ರವೀಶ್‌ ನರೇಶ್‌ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪಿಎಂಒಇಂಡಿಯಾ, ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ, ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿರುವ ನರೇಶ್‌, ಏರ್‌ಪೋರ್ಟ್ ಸಮೀಪ ಸುಮಾರು ಮೂರು ಗಂಟೆಗಳ ಕಾಲ ಹೆಚ್ಚಿನ ಟ್ರಾಫಿಕ್‌ ದಟ್ಟಣೆ ಇರುವುದಾಗಿ ಆರೋಪಿಸಿದ್ದಾರೆ.

ಉದ್ಯಮಿಯ ಟ್ವೀಟ್ ಉಲ್ಲೇಖಿಸಿ ತೆಲಂಗಾಣ ಟಿಆರ್‌ಎಸ್‌ ಕಾರ್ಯಾಧ್ಯಕ್ಷ ಹಾಗೂ ಕೈಗಾರಿಕೆ, ವಾಣಿಜ್ಯ ಸಚಿವ ಕೆ.ಟಿ.ರಾಮರಾವ್ ಟ್ವೀಟ್‌ ಮಾಡಿದ್ದು, “ನಿಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿಕೊಂಡು ಹೈದರಾಬಾದ್‌ಗೆ ಬನ್ನಿ. ನಾವು ಉತ್ತಮವಾದ ಭೌತಿಕ ಮೂಲಸೌಕರ್ಯ, ಉತ್ತಮವಾದ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಗರದೊಳಗೆ ಮತ್ತು ಹೊರಗೆ ತಂಪಿದೆ” ಎಂದಿದ್ದಾರೆ.

ಮುಂದುವರಿದು, “ನಮ್ಮ ಸರ್ಕಾರ ಮೂರು ‘ಐ’ಗಳಿಗೆ ಆದ್ಯತೆ ನೀಡಿದೆ. ಅವುಗಳೆಂದರೆ ನಾವೀನ್ಯತೆ (innovation), ಮೂಲಸೌಕರ್ಯ (infrastructur) ಮತ್ತು ಒಳಗೊಳ್ಳುವ ಅಭಿವೃದ್ಧಿ (inclusive growth)” ಎಂದು ಅವರು ತಿಳಿಸಿದ್ದಾರೆ.

ರಾಮರಾವ್ ಅವರ ಟ್ವೀಟ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೆ.ಟಿ.ರಾಮರಾವ್‌ ಅವರನ್ನು ಟ್ಯಾಗ್‌ ಮಾಡಿ, ಟ್ವೀಟ್ ಹಂಚಿಕೊಂಡಿರುವ ಅವರು, “ನನ್ನ ಗೆಳೆಯ, ನಿಮ್ಮ ಸವಾಲನ್ನು ನಾನು ಸ್ವೀಕರಿಸಿದ್ದೇನೆ. 2023ರ ಅಂತ್ಯಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಾರತದ ಅತ್ಯುತ್ತಮ ನಗರವಾಗಿ ಬೆಂಗಳೂರಿನ ವೈಭವವನ್ನು ಮರುಸ್ಥಾಪಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಟ್ವೀಟ್‌ಗೆ ಮತ್ತೆ ಪ್ರತಿಕ್ರಿಯೆ ನೀಡಿರುವ ಕೆ.ಟಿ.ರಾಮ ರಾವ್‌, “ಪ್ರೀತಿಯ ಶಿವಕುಮಾರ್‌ ಅಣ್ಣ, ನನಗೆ ಕರ್ನಾಟಕದ ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ, ಯಾರು ಗೆಲ್ಲತ್ತಾರೆಂಬುದು ಗೊತ್ತಿಲ್ಲ. ಆದರೆ ಸ್ಪರ್ಧೆಯನ್ನು ಸ್ವೀಕರಿಸುತ್ತೇನೆ. ಹೈದರಾಬಾದ್ ಮತ್ತು ಬೆಂಗಳೂರು ನಗರಗಳು ನಮ್ಮ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಲು, ನಮ್ಮ ಮಹಾನ್ ರಾಷ್ಟ್ರದ ಸಮೃದ್ಧಿಗೆ ಆರೋಗ್ಯಕರವಾಗಿ ಸ್ಪರ್ಧಿಸಲಿ. ಮೂಲಸೌಕರ್ಯ, ಐಟಿ ಬಿಟಿ ಮೇಲೆ ಗಮನ ಹರಿಸೋಣ. ಹಿಜಾಬ್‌ ಮೇಲಲ್ಲ” ಎಂದಿದ್ದಾರೆ.

ಈ ಆರೋಗ್ಯಕರ ಚರ್ಚೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಪ್ರಶಂಸಿಸಿದ್ದಾರೆ. ಕೆ.ಟಿ.ರಾಮರಾವ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಟ್ಯಾಗ್ ಮಾಡಿರುವ ಅವರು, “ಈ ಸ್ಪಿರಿಟ್ ಇರಬೇಕು. ಈ ರೀತಿಯ ಸಂವಾದ ನಡೆಯಬೇಕೇ ಹೊರತು, ಕೋಮು ರಾಜಕಾರಣವಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...