Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ. 

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ 8 ಜನರ ಸಾವಿಗೆ ಕಾರಣನಾದ ಆರೋಪ ಎದುರಿಸುತ್ತಿರುವು ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ‘ಪ್ರಕರಣ ಘೋರ ಅಪರಾಧವಾದರೂ ಆರೋಪಿ ಆಶಿಶ್ ಮಿಶ್ರಾ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ ಮತ್ತು ಸಾಕ್ಷಿ ನಾಶ ಮಾಡುವುದಿಲ್ಲ’ ಎಂದು ಯುಪಿ ಸರ್ಕಾರ ಹೇಳಿದೆ.

“ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡಲಾಗಿದೆ. ಅವನ್ನು ತಿರುಚಲು ಸಾಧ್ಯವಿಲ್ಲ. ಅದೇ ರೀತಿ ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ. ಅಲ್ಲದೆ ಆರೋಪಿ ಮೊದಲ ಬಾರಿಗೆ ತಪ್ಪೆಸೆಗಿದ್ದಾರೆ. ಅವರದು ಪುನಾರಾವರ್ತಿತ ಅಪರಾಧವೆಸಗಿದ್ದರೆ ಮಾತ್ರ ಜಾಮೀನು ನೀಡಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಮಹೇಶ್ ಜೇಠ್ಮಲಾನಿ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇ‍ಷ ತನಿಖಾ ತಂಡವು ಆರೋಪಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಶಿಪಾರಸ್ಸು ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ.

“ನೀವು ಜಾಮೀನು ನೀಡಿರುವುದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ನಾವು ಒತ್ತಾಯಿಸುವುದಿಲ್ಲ. ಆದರೆ ಈ ವಿಷಯದಲ್ಲಿ ನಿಮ್ಮ ನಿಲುವೇನು” ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವು, “ನಾವು ಅಲಹಾಬಾದ್ ಹೈಕೋರ್ಟ್‌ನಲ್ಲಿಯೂ ಸಹ ಇದು ಘೋರ ಅಪರಾಧ, ಈ ಅಪರಾಧವನ್ನು ಖಂಡಿಸಲು ಯಾವುದೇ ಪದಗಳಿಲ್ಲ ಎಂದು ವಾದಿಸಿದ್ದೆವು” ಎಂದು ತಿಳಿಸಿದೆ.

“ಅಪರಾಧವು ಗಂಭೀರವಾಗಿದೆ. ಅಪರಾಧವು ಉದ್ದೇಶಪೂರ್ವಕವಾಗಿ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣೆಯ ಹಂತದಲ್ಲಿ ಮಾತ್ರ ಪರಿಶೀಲಿಸಬಹುದು. ಅಪರಾಧದ ಉದ್ದೇಶವು ಸೂಕ್ಷ್ಮವಾದ ವಿಷಯವಾಗಿರುವುದರಿಂದ ವಿಚಾರಣೆಯ ಹಂತದಲ್ಲಿ ಮಾತ್ರ ಚರ್ಚಿಸಬಹುದು. ಆರೋಪಿಗೆ ಜಾಮೀನು ನೀಡುವುದನ್ನು ಅಲಹಾಬಾದ್ ಹೈಕೋರ್ಟಿನ ಮುಂದೆ ನಾನು ಕಟುವಾಗಿ ವಿರೋಧಿಸಿದೆ. ನಮ್ಮ ವಾದಗಳ ಹೊರತಾಗಿಯೂ ಹೈಕೋರ್ಟ್ ಜಾಮೀನು ನೀಡಿದೆ. ವಾಹನ ನಜ್ಜುಗುಜ್ಜಾಗಿ ಜನರು ಸಾವನ್ನಪ್ಪಿದ್ದಾರೆ ಹೊರತು ಬುಲೆಟ್ ಗಾಯದಿಂದಲ್ಲ” ಎಂದು ಯುಪಿ ಸರ್ಕಾರದ ವಕೀಲರು ಹೇಳಿದ್ದಾರೆ.

ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡುವ ಸಮಯದಲ್ಲಿ ಹೈಕೋರ್ಟ್, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ಸೇರಿದಂತೆ ಪೊಲೀಸರು ಪಟ್ಟಿ ಮಾಡಿರುವ ಕೆಲವು ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿತ್ತು. “ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಸಂಪೂರ್ಣವಾಗಿ ಪರಿಗಣಿಸಿ ಎಫ್ಐಆರ್ ಪ್ರಕಾರ, ಆರೋಪಿ ಆಶಿಶ್ ಮಿಶ್ರಾ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಕೊಂದ ಉಲ್ಲೇಖವಿದೆ. ಆದರೆ ತನಿಖೆಯ ಸಮಯದಲ್ಲಿ, ಅಂತಹ ಯಾವುದೇ ಬಂದೂಕು ಗಾಯಗಳಾದ ಸಾಕ್ಷ್ಯವಿಲ್ಲ. ಸತ್ತವರ ದೇಹದ ಮೇಲೆ ಅಥವಾ ಗಾಯಗೊಂಡ ವ್ಯಕ್ತಿಗಳ ದೇಹದ ಗುಂಡಿನ ದಾಳಿ ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಡಲು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಒತ್ತಾಯಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಸದ್ಯ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂಬ ಅರ್ಜಿಯ ವಿಚಾರಣೆ ಮುಗಿಸಿರುವ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.


ಇದನ್ನೂ ಓದಿ; ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...