Homeಅಂಕಣಗಳುಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

ಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಜ್ಯೋತಿಷ್ಯಿಯ ಮಾತು ಕೇಳಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಬೂಚೇನಹಳ್ಳಿಯ ಯುವಕನೊಬ್ಬ ತನಗೆ ಹುಟ್ಟಿದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಸಾಯಿಸಿದ ಘಟನೆ ಮನುಷ್ಯ ಸಮಾನವನ್ನು ಬೆಚ್ಚಿ ಬೀಳಿಸಿದೆ. ದಿನ ಬೆಳಗಾದರೆ ಟಿ.ವಿ.ಯಲ್ಲಿ ಒಕ್ಕರಿಸಿ ಕನ್ನಡ ನಾಡಿನ ಜನಗಳ ಬುದ್ಧಿಯ ಮೇಲೆ ಕಲ್ಲು ಚಪ್ಪಡಿ ಎಳೆಯುವ ಜ್ಯೋತಿಷ್ಯಿಗಾರರ ಕಾಟ ಅತಿಯಾಯಿತು ಎನ್ನದೆ ವಿಧಿ ಇಲ್ಲವಾಗಿದೆ. ಯಾರು , ಜ್ಯೋತಿಷ್ಯ, ಭವಿಷ್ಯ, ವಾಸ್ತುಗಳನ್ನು ನಂಬುತ್ತಾರೋ ಮೊದಲು ಅವರನ್ನು ಮಾನಸಿಕ ತಜ್ಞರ ಹತ್ತಿರ ಕರೆದುಕೊಂಡು ಹೋಗಿ ಎಂಬ ಸ್ವಾಮಿ ವಿವೇಕಾನಂದರ ಮಾತು ಇಂದು ಹೆಚ್ಚು ಪ್ರಸ್ತುತವೆನಿಸುತ್ತಿದೆ.

ಪ್ರತಿಯೊಬ್ಬರ ಬದುಕಿನಲ್ಲಿ ಬರಬಹುದಾದ ಸಂಕಟ ನೋವುಗಳಿಗೆ ಜ್ಯೋತಿಷ್ಯ ಪರಿಹಾರ ಅಲ್ಲವೇ ಅಲ್ಲ. ಯಾರೋ ಒಬ್ಬ ಮಾಂತ್ರಿಕ ಶಕ್ತಿ ಹೊಂದಿದ್ದೇನೆಂದು ಎಲ್ಲರ ನಂಬಿಸುತ್ತಿದ್ದವನೊಬ್ಬ ಹಸಿವಿನಿಂದ ಕಂಗಾಲಾಗಿ ಮನೆಯೊಂದಕ್ಕೆ ಹೋಗಿ ಬಿಕ್ಷೆ ಬೇಡುತ್ತ, “ ತಾಯಿ ನಾಲ್ಕಾರು ದಿನಗಳಿಂದ ಊಟ ಮಾಡಿಲ್ಲ, ಒಂದು ರೊಟ್ಟಿ ಕೊಡಿ ಎಂದು ಅಂಗಲಾಚಿದನಂತೆ. ಅದಕ್ಕೆ ಪ್ರತಿಕ್ರಿಯಿಸಿದ ಆ ಮನೆಯ ಒಡತಿ, ವಾಸ್ತವ ಅರ್ಥ ಮಾಡಿಕೊಳ್ಳದೆ “ ಓ ಮಹಾತ್ಮನೆ ನೀನು ನನಗೇನು ಕೊಡುತ್ತಿ ?” ಎಂದು ಕೇಳಿದ್ದೆ ತಡ ಆ ಪಾಕಡಾ ಆಸಾಮಿ “ ನಿನಗೆ ಹಸಿವಿಲ್ಲದ ಮಂತ್ರ ಕಲಿಸಿಕೊಡುತ್ತೇನೆ !?” ಎಂದು ಹೇಳಿದನಂತೆ. ಆ ಮಹಿಳೆ ಲಗುಬಗೆಯಿಂದ ತನ್ನ ಮನೆಯಲ್ಲಿದ್ದ ರೊಟ್ಟಿಯೊಂದನ್ನು ಕೊಟ್ಟು ನಂತರ ಯೋಚಿಸತೊಡಗಿದಳಂತೆ. ಹಸಿವಿಲ್ಲದ ಮಂತ್ರ ನನಗೆ ಕಲಿಸುವ ಬದಲು, ಆತನಗೆ ತನ್ನಷ್ಟಕ್ಕೆ ತಾನು ಹಸಿವೆ ಆಗದೆ ಇರುವ ಮಂತ್ರ ಹೇಳಿಕೊಂಡು ಹಸಿವು ನೀಗಿಸಿಕೊಳ್ಳಬಹುದಿತ್ತಲ್ಲ ! ಎಂದು.

ಮಂತ್ರ, ಶಾಸ್ತ್ರ, ಬೊಗಳೆ ಪುರಾಣಗಳಿಗೆ ಹಸಿವನ್ನು ನೀಗಿಸುವ ಶಕ್ತಿ ಇರಲು ಸಾಧ್ಯವೇ ಇಲ್ಲ. ಹಾಗೆಯೇ ಜ್ಯೋತಿಷ್ಯವೂ ಸಹ. ಜ್ಯೋತಿಷ್ಯದ ಹೆಸರಿನ ಮೇಲೆ ಇಂದು ಸಮಾಜದಲ್ಲಿ ನಡೆದಿರುವ ನಂಗಾನಾಚ ಹೇಸಿಗೆ ತರಿಸುತ್ತಿದೆ. ಬರಗೆಟ್ಟ ರಾಜಕಾರಣಿಗಳು, ಭ್ರಷ್ಟ ಅಧಿಕಾರಶಾಹಿ ಜನಗಳು, ಲಜ್ಜೆಗೆಟ್ಟ ಬಂಡವಾಳ ಶಾಹಿಗಳ ಹಾದರದ ಕೂಸೆ ಜ್ಯೋತಿಷ್ಯ , ವಾಸ್ತು, ಮಂತ್ರ, ತಂತ್ರ ಇತ್ಯಾದಿ. ‘ಮಂತ್ರಕ್ಕೆ ಮಾವಿನ ಕಾಯಿಯೂ ಉದರೊಲ್ಲ’ ಎಂಬುದು ಬಡಜನತೆಗೆ ಗೊತ್ತು. ಆದರೆ ಅವರು ತಮಗಿಂತಲೂ ದೊಡ್ಡವರು, ಶ್ಯಾಣ್ಯಾ ಜನ ಎಂದು ಕೊಂಡ ಶ್ರೀಮಂತರು, ರಾಜಕಾಣಿಗಳು ಹಾಗೂ ಅಧಿಕಾರಿಗಳ ನಡೆ ನುಡಿಗಳಿಂದ ಪ್ರಭಾವಿತಗೊಂಡಿರುತ್ತಾರೆ.
ನಮ್ಮನ್ನು ಆಳುವ ಸರಕಾರಗಳು ತಮ್ಮ ಕೈಯಲ್ಲಿಯೆ ಇರುವ ಮುಜರಾಯಿ ಇಲಾಖೆಯ ಮೂಲಕ ನಿತ್ಯ ದೇವರಿಗೆ ನಡೆಸುವ ಅಭಿಷೇಕ, ಕುಂಭಾಬಿಷೇಕ, ರುದ್ರಾಭಿಷೇಕ, ಕೋಟಿ ಬಿಲ್ವ ಅರ್ಚನೆ, ಪರ್ಜನ್ಯ ಜಪ ಮುಂತಾದ ಅರ್ಥಹೀನ ಕೆಲಸವನ್ನು ಯಾವ ನಾಚಿಕೆಯೂ ಇಲ್ಲದೆ ನಡೆಸುತ್ತಿದೆ. ಅದೇನೋ ಹೇಳುತ್ತಾರಲ್ಲ, ದೊಡ್ಡವರೆ ಓಡಾಡಿ ಮೂತ್ರ ಮಾಡುವಾಗ , ಇನ್ನು ಚಿಕ್ಕವರು ? ಶಾಲಾ ಕಾಲೇಜು ಓದಿ ಡಿಗ್ರಿಯ ಮೂಲಕ ಬಹುದೊಡ್ಡ ಹುದ್ದೆ ಹೊಂದಿದ್ದೇವೆ ಎಂಬುವವರೆ ಮಂತ್ರವಾದಿಗಳಿಗೆ ಪಿಗ್ಗಿ ಬಿದ್ದಿದ್ದಾರೆ. ಹೇಗಾದರೂ ಸೈ ಜನತೆಯ ಮನವನ್ನು ಗೆಲ್ಲಬೇಕು. ಅವರ ಮೌನಸಿಕ ದೌರ್ಬಲ್ಯವನ್ನು ಬೆಳೆಸಿಕೊಂಡು ಮೇಲೆ ಬರಬೇಕೆಂದು ಹೊಂಚು ಹಾಕಿದ ರಾಜಕಾಣಿಗಳಂತೂ ನಿತ್ಯವೂ ಗುಡಿ,ಮಸೀದಿ, ಚರ್ಚಗಳಿಗೆ ಎಡತಾಕುತ್ತಾರೆ. ಇದರಿಂದಾಗಿ ದುಡಿಯದೆ ದುಃಖ ಪಡದೆ ಆರಾಮ ಇರುವ ಮುಲ್ಲಾ, ಪಾದ್ರಿ, ಪುರೋಹಿತ ಇವರೆಲ್ಲರನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಆಟ ಆಡುತ್ತಾನೆ.
ಇದನ್ನು ಓದಿ:  ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಅಂದಿನ ರಾಜ ಮಹಾರಾಜರನ್ನೆ ತಮ್ಮ ಶಾಸ್ತ್ರದ ಬಲದಿಂದ ಪೋಜರಾಜರಂತೆ ಕುಣಿಸುತ್ತಿದ್ದರು. ಈಗಲೂ ಅವರು ಅಟಾಟೋಪ ನಿಂತಿಲ್ಲ. ಸುರಪುರದ ವೀರದೊರೆ ವೆಂಕಟಪ್ಪ ನಾಯಕರನ್ನು ಔರಂಗಜೇಬ ಕೂಡ ಸೋಲಿಸಲು ಸಾಧ್ಯವಾಗದೆ, ಆತನ ಶೌರ್ಯ ಪರಾಕ್ರಮವನ್ನು ನೋಡಿ ಬಿರುದು ಬಾವಲಿ ನೀಡಿ ಹೋದ. ಆದರೆ ಇಂಥ ಶೂರ ದೊರೆಯನ್ನು ಜ್ಯೋತಿಷ್ಯರು ಯಾವ ಮದ್ದು ಗುಂಡುಗಳನ್ನು ಬಳಸದೆ ಕೇವಲ ತಮ್ಮ ಶಾಸ್ತ್ರದ ಬಲದಿಂದ “ ರಾಜಾ ವೆಂಕಟಪ್ಪ ನಾಯಕ ಮುಂದಿನ ಯುದ್ಧದಲ್ಲಿ ಸೋತು ಹತನಾಗುತ್ತಾನೆ” ಎಂದು ಜ್ಯೋತಿಷ್ಯ ನುಡಿದರು. ಇದನ್ನು ಕೇಳಿ ಕಂಗಾಲಾದ ರಾಜ ಊರು ಬಿಟ್ಟು ಓಡಿ ಹೋಗಿಬಿಟ್ಟ. ವಾಸ್ತವವೆಂದರೆ ಮುಂದೆ ಯಾವ ಯುದ್ಧಗಳೂ ನಡೆಯೋದಿಲ್ಲ, ಆತ ಹತನಾಗುವ ಪ್ರಶ್ನೆಯೇ ಬರುತ್ತಿರಲಿಲ್ಲ. ಔರಂಗಜೇಬ ಸೋಲಿಸದೆ ಇರುವ ದೊರೆಯನ್ನು ಶಾಸ್ತ್ರಿಕರು ಸೋಲಿಸಿಬಿಟ್ಟರು.
ಹಲವು ವರ್ಷಗಳ ಹಿಂದೆ ಜ್ಯೋತಿಷ್ಯಿಯ ಮಾತು ಕೇಳಿ ಮದುವೆಯಾದ ನೇಪಾಳದ ದೊರೆ ಬೀರೇಂದ್ರ ನಾವೆಲ್ಲ ನೋಡ ನೋಡುತ್ತಲೆ ತನ್ನ ಇಡೀ ಪರಿವಾರವನ್ನು ಬಂದೂಕಿನಿಂದ ಹತ್ಯೆಗೈದು, ತಾನು ಹತನಾದ ದುರಂತ ಚಿತ್ರ ಕಣ್ಣ ಮುಂದೆಯೆ ಇದೆ. ಯಾರಲ್ಲಿ ಮನೋಬಲವಿಲ್ಲವೋ ಆತನ ಮಾತ್ರ ಜ್ಯೋತಿಷ್ಯರನ್ನು, ಕಣಿ ಹೇಳುವವರನ್ನು, ಪಂಚಾಂಗ ತಿರುವುವರನ್ನು ಭೇಟಿಯಾಗುತ್ತಾನೆ. ಯಾರಿಗೆ ತನ್ನ ಮೇಲೆ ತನಗೆ ನಂಬಿಕೆ ಇದೆಯೋ ಅವರು ಎಂದೂ ಜ್ಯೋತಿಷ್ಯಗಳೆಂಬ ಹಗಲುಗಳ್ಳರ ಹತ್ತಿರ ಕೂಡ ಸುಳಿಯಲಾರರು.
ಹಿಂದಿನ ಮಹಾತ್ಮ ಬುದ್ಧ, ಬಸವಣ್ಣನವರು ಸಹ ಈ ಜ್ಯೋತಿಷ್ಯಗಾರರಿಗೆ ಚಾಟಿ ಏಟು ಕೊಟ್ಟಿದ್ದಾರೆ. ಜಕ್ಕಣ್ಣಯ ಎಂಬ ಶರಣನೊಬ್ಬ

ವೇದ ದೊಡ್ಡದೆಂದು ನುಡಿವ ವದಿಯ ಮಾತ ಹೇಳಲಾಗದು
ಕೇಳಲಾಗದು, ಶಾಸ್ತ್ರ ದೊಡ್ಡದೆಂದು ನುಡಿವ ಪಾತಕನ ಮಾತ ಹೇಳಲಾಗದು ಕೇಳಲಾಗದು.
ಪುರಾಣ ದೊಡ್ಡದೆಂದು ನುಡಿದ ಪುಂಡರ ಮಾತ ಹೇಳಲಾಗದು ಕೇಳಲಾಗದು
ಆಗಮ ದೊಡ್ಡದೆಂದು ನುಡಿವ ಅಹಂಕಾರಿಯ ಮಾತ ಹೇಳಲಾಗದು, ಕೇಳಲಾಗದು
ಜ್ಯೋತಿಷ್ಯ ದೊಡ್ಡದೆಂದು ನುಡಿವ ಘಾತಕವ ಮಾತ ಹೇಳಲಾಗದು, ಕೇಳಲಾಗದು
ಇದನ್ನು ಓದಿ: ಜನರ ತಲೆಗೆ ಮೌಢ್ಯದ ‘ಚಿಪ್ಪು’!

ಎಂದು ಸ್ಪಷ್ಟವಾಗಿ ಇವರನ್ನು ಜಜ್ಜನೆ ಜರಿದಿದ್ದಾರೆ.
ಸೊಲ್ಲಾಪುರದ ಸಿದ್ಧರಾಮ ಶಿವಯೋಗಿಗಳು
ಲಗ್ನಕ್ಕೆ ವಿಘ್ನಬಾರದೆಂದು ಜ್ಯೋತಿಷ್ಯ ಕೇಳುವ ಅಣ್ಣಗಳಿರಾ
ಕೇಳಿರಯ್ಯಾ : ಅಂದೇಕೆ ವೀರಭದ್ರನ ಸೆರಗ ಸುಟ್ಟಿತ್ತು ?
ಅಂದೇಕೆ ಮಹಾದೇವಿಯವರ ಬಲಭುಜ ಹಾರಿತ್ತು ?
ಇಂದೇಕೆ ಎನ್ನ ವಾಮನೇತ್ರ ಚರಿಸಿತ್ತು ? ಕಪಿಲಸಿದ್ದಮಲ್ಲಿಕಾರ್ಜುನಾ

ಎಂದು ಇತಿಹಾಸದ ಪುಟಗಳಲ್ಲಿ ನಡೆದ ಘಟನೆಗಳನ್ನು ಉದಾಹರಿಸಿ ನಮ್ಮ ಕಣ್ಣು ತೆರೆಸುತ್ತಾರೆ. ಜ್ಯೋತಿಷ್ಯ ನೋಡಿಯೆ ಮದುಯಾದ ಎಷ್ಟೋ ಜೋಡಿಗಳು ವರ್ಷ ತುಂಬುವಷ್ಟರಲ್ಲಿಯೆ ಡೈವೋರ್ಸ ಪಡೆದಿವೆ. ಜ್ಯೋತಿಷ್ಯ ನೋಡಿಯೇ ಪ್ರಧಾನಿಯ ಪಟ್ಟ ಮತ್ತೆ ಇನ್ನಷ್ಟು ದಿನ ಉಳಿಸಿಕೊಳ್ಳಬೇಕೆಂದ ದೇವೇಗೌಡರು ರಾಜ್ಯಕ್ಕೆ ಮರಳಿ ಬರಲಿಲ್ಲವೆ ? ಜ್ಯೋತಿಷ್ಯಿಯ ಮಾತು ಕೇಳಿ ಹದಿ ಹರೆಯದ ಹುಡುಗಿಯನ್ನು ನಗ್ನ ಮಾಡಿ ಪೂಜಿಸಿದ ಆಂದ್ರದ ಮುಖ್ಯ ಮಂತ್ರಿ ಎನ್.ಟಿ.ಆರ್. ಅಧಿಕಾರ ಶಾಶ್ವತವಾಗಿ ಉಳಿಯಿತೆ ?

ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು
ಜಗವೆಲ್ಲ ಕಾಬ ಕಣ್ಣು, ತನ್ನ ಕೊಂಬ ಕೊಲ್ಲೆಯ
ಕಾಣಲರಿಯದು.
ಇದಿರ ಗುಣವ ಬಲ್ಲೆವೆಂಬರು ತಮ್ಮ ಗುಣವನರಿಯರು
ಕೂಡಲಸಂಗಮದೇವಾ

ಮಡಿವಾಳ ಮಾಚಿದೇವನೆಂಬ ಶರಣರಂತು ‘ಗಿಳಿಯೋದಿ ತನ್ನ ಅಶುದ್ಧವ ತನ್ನ ಮೂಗಿನಲಿ ಕಚ್ಚಿ ತೆಗೆದಂತೆ’ ಜ್ಯೋತಿಷ್ಯ ಕಲಿತವರ ಹಣೆಬರಹ ಎಂದು ಹೇಳಿತ್ತಾರೆ.
ಒಟ್ಟಿನಲ್ಲಿ ನಮ್ಮ ಬದುಕು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ. ಇನ್ನಾರ ಕೈಯಲ್ಲಿಯೂ ಅದು ಇಲ್ಲವೆ ಇಲ್ಲ. ಆದ್ದರಿಂದಲೆ ಮಹಾತ್ಮ ಬುದ್ಧ ‘ನಿನಗೆ ನೀನೇ ಬೆಳಕು’ ಎಂದು ಹೇಳಿದರು. ನಮಗೆ ನಾವೆ ಬೆಳಕಾಗಬೇಕೆ ವಿನಃ ಕೊಳಕರ ಮಾತು ಕೇಳಿಕೊಂಡು ಜನ ಸಾಮಾನ್ಯರು ಹೊಲಸಿನ ಹೊಂಡಕ್ಕೆ ಬೀಳಬಾರದು. ತಮ್ಮ ಬದುಕನ್ನು ಕೆಡಿಸಿಕೊಳ್ಳಬಾರದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...