Homeಅಂಕಣಗಳುಸಿದ್ದರಾಮಯ್ಯ ರಾವಣನಂತಲ್ಲಾ!

ಸಿದ್ದರಾಮಯ್ಯ ರಾವಣನಂತಲ್ಲಾ!

- Advertisement -
- Advertisement -

ಪಾಪಾಸು ಕಳ್ಳಿಯ ಟಿಸಿಲಿನಂತಿರುವ ಬಿಜೆಪಿಯ ಭಜರಂಗಿ ಪಡೆ ಹಿಜಾಬ್‌ಗೆ ಕೈಹಾಕಿ ಎಳೆದು ನಂತರ, ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಮರ ಅಂಗಡಿಗಳಿರಬಾರದೆಂದು ಬೊಬ್ಬೆಹೊಡೆದ ಕೂಡಲೇ ಕರ್ನಾಟಕದ ತುಂಬೆಲ್ಲಾ ಬೊಬ್ಬೆಯದನಿ ಕೇಳಿತಲ್ಲಾ. ಏಕೆಂದರೆ ಈ ಬಿಜೆಪಿ ಅಥವಾ ಇನ್ನಾವುದೇ ಅದರ ಅಂಗ ಸಂಸ್ಥೆಗಳಿಗೆಲ್ಲಾ ಸ್ವಿಚ್‌ಬೋರ್ಡಿರುವುದು ಒಂದೇ ಜಾಗದಲ್ಲಿ. ಅದನ್ನು ಒತ್ತಿದ ಕೂಡಲೇ ಇಡೀ ನಾಡಿನ ತುಂಬೆಲ್ಲಾ ಒಂದೇ ಗಳಿಗೆಯಲ್ಲಿ ಮತೀಯ ತಲೆಗಳಿಗೆ ವಿದ್ಯುತ್ ಹರಿದಂತಾಗಿ ಶಾರ್ಟ್ ಸರ್ಕ್ಯೂಟ್ ಆಗುವುದು ಹಿಂದಿನಿಂದಲೂ ನಡೆದು ಬಂದಿದೆಯಂತಲ್ಲಾ. ಆದರೇನು ಈಗ ಇಂತಹ ಸ್ವಿಚ್ ಲೈನನ್ನ ಮಾಧ್ಯಮದವರೂ ಎಳೆದುಕೊಂಡು ಇಡೀ ದಿನ ಅಳೆದು, ಸುರಿದು, ಕೇರಿ, ತೂರಿ, ಅಯ್ಯೋಪಾಪಾ ಎಂಬ ಉದ್ಘಾರಕ್ಕೆ ತುತ್ತಾಗಿವೆಯಲ್ಲಾ. ಸಿದ್ದು ಜಗದ್ಗುರುಗಳು ಕೇಸರಿ ಬಟ್ಟೆ ತಲೆ ಮೇಲೆ ಹಾಕುವುದಿಲ್ಲವೆ ಎಂಬ ಮಾತೇ ಕಾರಣವಾಗಿ, ಮಾಧ್ಯಮದವರು ಮನಸೊ ಇಚ್ಛೆ ವದರೀ ವದರೀ ಜಗದ್ಗುರುಗಳನ್ನ ಎಬ್ಬಿಸಿ ಸಿದ್ದು ಮೇಲೆ ದಾಳಿ ಮಾಡಿಸಿದವಲ್ಲಾ. ವಾಸ್ತವವಾಗಿ ರಾಮಚಂದ್ರಾಪುರ ಮಠ, ಉಡುಪಿ ಮಠದ ಯತಿಗಳಿದ್ದವರೆಲ್ಲಾ ಸುಮ್ಮನಿದ್ದು ಎಡೂರಪ್ಪನವರಿಂದ ಧನ ಸಹಾಯ ಪಡೆದ ಧರ್ಮಗುರುಗಳೇ ಸಿದ್ದು ಮೇಲೆ ಬಿದ್ದಿದ್ದು ನೋಡಿ ಈ ಬಿಜೆಪಿಗಳಿಗೆ ಪರಮಾನ್ನ ಉಂಡಷ್ಟು ಖುಷಿಯಾಯ್ತಂತಲ್ಲಾ. ಥೂತ್ತೇರಿ.

*******

ಇನ್ನ ಬಿಜೆಪಿ ಪಾರ್ಟಿಯ ಅಧ್ಯಕ್ಷ ನಳೀನ್ ಕಟೀಲು ಎಂಬ ಬೃಹಸ್ಪತಿಗಳು ಸಿದ್ದುವನ್ನು ರಾವಣನಿಗೆ ಹೋಲಿಸಿದ್ದಾರೆ. ದಕ್ಷಿಣ ಕನ್ನಡದ ಈತ ಯಕ್ಷಗಾನವನ್ನು ನೋಡಿಯಾದರೂ ರಾವಣನ ಬಗ್ಗೆ ತಿಳಿದುಕೊಳ್ಳಬೇಕಿತ್ತು. ವಾಸ್ತವವಾಗಿ ಸಿದ್ದುಗೆ ರಾವಣನನ್ನು ಹೋಲಿಸಿದ್ದೇ ಸರಿಯಿಲ್ಲವೆಂಬುದು ರಾವಣಾಭಿಮಾನಿಗಳ ಅಭಿಪ್ರಾಯ. ರಾವಣ ಅಪ್ಪಟ ಶಿವಭಕ್ತ, ಸಂಗೀತಗಾರ, ವೀಣೆ ಶೇಷಣ್ಣನಿಗಿಂತ ಒಳ್ಳೆ ವೈಣಿಕ, ಒಳ್ಳೆಯ ನೃತ್ಯಪಟು. ಅಜೇಯನೆನಿಸಿಕೊಂಡಿದ್ದ ಒಳ್ಳೆ ಆಡಳಿತಗಾರ ಕುಬೇರನನ್ನ ಸೋಲಿಸಿ ಪುಷ್ಪಕ ವಿಮಾನವನ್ನ ಪಡೆದವನು. ಭುಜಂಗ ಸ್ತ್ರೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ
ರಾಜಲಕ್ಷಣದಿಂದ ಶೋಭಿತನಾಗಿದ್ದ ತನ್ನ ರಾಜ್ಯದಲ್ಲಿ ಮಹಿಳಾ ಮೀಸಲಾತಿ ತಂದಿದ್ದ ಪ್ರಥಮ ದೊರೆ. ಲಂಕೆಯನ್ನ ರಕ್ಷಿಸಲು ಲಂಕಿಣಿ ನಿಲ್ಲಿಸಿದ್ದ. ದಂಡಕಾರಣ್ಯ ರಕ್ಷಿಸಲು ತಾಟಕಿ ನೇಮಿಸಿದ್ದ. ಲಂಕೆಯ ಹೆಬ್ಬಾಗಿಲು ಕಾಯಲು ಸಿಂಹಿಣಿ ನೇಮಿಸಿದ್ದ. ಅಶೋಕ ವನ ನೋಡಿಕೊಳ್ಳಲು ತ್ರಿಜಟಿಯನ್ನು ಬಿಟ್ಟಿದ್ದ. ನಮ್ಮ ಪುರಾಣಕಾಲದ ರಾವಣನೆ ಮೊದಲು ಮಹಿಳಾ ಮೀಸಲಾತಿ ಜಾರಿಗೆ ತಂದವನು. ಇಂತಹ ವಿಪ್ರೋತ್ತಮನಿಗೆ ಕುರುಬ ಸಮುದಾಯದವರ ಪೈಕಿಯಾದ ಸಿದ್ದರಾಮಯ್ಯನವರನ್ನ ಹೋಲಿಸಬಾರದಿತ್ತೆಂದು ರಾಮಾಯಣ ಪ್ರಿಯ ವಿಪ್ರೊತ್ತಮರು ಕಟಿಲರ ಬಗ್ಗೆ ಕೆಂಡಾಮಂಡಲವಾಗಿ ದ್ದಾರಂತಲ್ಲಾ. ಥೂತ್ತೇರಿ.

ನಳಿನ್

*******

ಪುರಾಣಪ್ರಿಯರು ರಾಜಕೀಯ ವಿಶ್ಲೇಷಕರ ಪ್ರಕಾರ ಸಿದ್ದು ಪ್ರೊತ್ಸಾಹಿಸಿದ್ದು ಒಂದೆರಡು ಮಹಿಳೆಯರನ್ನ ಮಾತ್ರ. ಆ ಪೈಕಿ ಜಯಮಾಲ ಮಂಜುಳ ಮಾನಸೆ, ಕೆ.ಆರ್ ಪೇಟೆ ಮೀನಾಕ್ಷಿ ಮತ್ತಿನ್ನಿಬ್ಬರು ಮಹಿಳಾ ಮಣಿಗಳನ್ನು ಬಿಟ್ಟರೆ ರಾವಣನಂತೆ ಇಡೀ ರಾಜ್ಯ ನೋಡಿಕೊಳ್ಳಲು ಮಹಿಳೆಯರನ್ನ ನೇಮಿಸಲಿಲ್ಲ. ಈ ಹೋಲಿಕೆ ತಪ್ಪು. ಇನ್ನ ಸಿದ್ದು ರಂಗದ ಕುಣಿತಕ್ಕೆ ಮೀಸಲೇ ಹೊರತು ನೃತ್ಯಪಟುವಲ್ಲ. ಇನ್ನು ವೀಣೆಗೂ ತಂಬೂರಿ ಸರೋಟ್‌ಗೂ ವ್ಯತ್ಯಾಸ ಸಿದ್ದುರವರಿಗೆ ಗೊತ್ತೋ ಇಲ್ಲವೋ ಅವರೇ ಬಲ್ಲರು. ಒಳ್ಳೆ ಆಡಳಿತಗಾರ ಎಂಬುದನ್ನ ಒಪ್ಪಿಕೊಳ್ಳಬೇಕು. ಇನ್ನು ಅವರ ಬಜೆಟ್ ಮಂಡನೆ ಭುಜಂಗ ಸ್ತ್ರೋತ್ರಕ್ಕೆ ಸಮ ಅನ್ನಬಹುದು. ಸದನದಲ್ಲಿ ಅಗ್ನಿಯಂತೆ ಜ್ವಲಿಸಿದರೂ ಜೊತೆಯಲ್ಲಿ ಕುಳಿತು ಹೊಟ್ಟೆತುಂಬಾ ಭೋಜನ ಬಾರಿಸುವ ವ್ಯಕ್ತಿ. ರಾವಣನಂತೆ ರಾಜ ಲಕ್ಷಣವೇನೂ ಸಿದ್ದು ಮುಖದಲ್ಲಿಲ್ಲ. ಇನ್ನ ಕುಬೇರನನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದ ರಾವಣನಿಗೆ ಸಿದ್ದು ಹೋಲಿಸುವುದಾದರೆ, ದೇವು ಫ್ಯಾಮಿಲಿಯನ್ನ ಮೂಲೆಗೆ ಸರಿಸಿ ವಿರೋಧಪಕ್ಷದ ಸಾರಥ್ಯ ಪಡೆದದ್ದು. ಸೀತಾಪಹರಣದಂತ ಕೃತ್ಯ ಎಸಗಿದವರಲ್ಲ. ಆದ್ದರಿಂದ ಕಟೀಲರ ವ್ಯಾಖ್ಯಾನಕ್ಕೆ ಇತ್ತು ಸಿದ್ದು ಅಭಿಮಾನಿಗಳು ಮತ್ತು ಅತ್ತ ವಿಪ್ರೋತ್ತಮರು ಶ್ಯಾನೆ ಸಿಟ್ಟಾಗಿದ್ದಾರಂತಲ್ಲಾ.

********

ಕಟೀಲರ ಇನ್ನೊಂದು ಮಾತು, ರಾಮ ಜನರನ್ನು ನಂಬುತ್ತಿದ್ದ ಎಂಬುದು. ಇದರ ಅನಾಹುತವೆಂದರೆ ಅಗಸನ ಮಾತನ್ನು ನಂಬಿ ತುಂಬು ಗರ್ಭಿಣಿ ಸೀತೆಯನ್ನು ಕಾಡಿನ ಮಧ್ಯೆ ಬಿಟ್ಟು ಬಂದಿದ್ದು, ಮೊದಲು ಹನ್ನೆರಡು ವರ್ಷ ವನವಾಸ, ಆ ನಂತರ ಮತ್ತೆ ವನವಾಸ ಅನುಭವಿಸಿದ ಸೀತೆ ಕಡೆಗೆ ಸಾಕಪ್ಪ ಈ ರಾಮನ ಸಹವಾಸ ಎಂದು ತವರು ಮನೆಗೆ ಹೋಗಿ ತರಕಾರಿ ಬೆಳೆದುಕೊಂಡು ಕಾಲ ಹಾಕಿದಳಲ್ಲಾ. ಈ ಸಾಲುಗಳ ಬಗ್ಗೆ ಅನುಮಾನವಿದ್ದವರು ಎಸ್.ಎಲ್ ಭೈರಪ್ಪನವರ ಉತ್ತರಕಾಂಡ ಓದುವುದು ಒಳ್ಳೆಯದು. ಅಂದ ಹಾಗೆ ಅವರಣವನ್ನು ತಲೆಮೇಲೆ ಹೊತ್ತುಕೊಂಡು ಮಾರಿದೆ ಸಂಘಪರಿವಾರ ಸಮೂಹ ಉತ್ತರಕಾಂಡದ ಬಗ್ಗೆ ಉಸಿರೆತ್ತಿಲ್ಲವಂತಲ್ಲಾ. ಇದೆಲ್ಲಕಿಂತ ಮಜಾ ಅಂದರೆ ಬಷೀರಣ್ಣನವರು ರಾಮಾಯಣವನ್ನು ವ್ಯಾಖ್ಯಾನಿಸಿರುವ ಪರಿ ಭೈರಪ್ಪನವರಿಗೆ ಹತ್ತಿರವಾಗಿದೆಯಲ್ಲಾ. “ನೋಡಿ ಸಾರ್ ಒಬ್ಬ ಮನುಷ್ಯ ತಂಗಿಗಾಗಿ ತನ್ನ ಪ್ರಾಣವನ್ನೇ ಕೊಟ್ಟು ರಾಜ್ಯನೂ ಕಳಕೊಂಡ. ತಂದೆ ಮಾಡಿದ ಕೆಲ್ಸಕ್ಕೆ ರಾಜ್ಯ ಬಿಟ್ಟು ಬಂದ ರಾಮ ದೊಡ್ಡವುನೊ, ರಾವಣ ದೊಡ್ಡವುನೊ, ನೀವೇ ಹೇಳಿ ಸಾರ್. ಪಾಪ ಶೂರ್ಪನಕಿ ಸ್ಟೋರಿ ಈ ಕಾಲದಲ್ಲಿ ಅಸಿಡ್ ದಾಳಿಗೆ ತುತ್ತಾಗಿ ಬುರ್ಖಾ ಹಾಯ್ಕಂಡು ಓಡಾಡ್ತರಲ್ಲ, ಅಂತ ಹೆಂಗಸರ ಕತೆ ಆಗಿರಬೌದು, ಯಾವುದಾದ್ರು ಹುಡುಗಿ ಲವ್ ಮಾಡು ಅಂದ್ರೆ ಆಗಲ್ಲ ಸ್ವಲ್ಪ ಪ್ರಾಬ್ಲಂ ಅನ್ನಬೇಕು ಸಾರ್! ಮೂಗುಕುಯ್ದಾಕ್‌ಬುಡದ” ಎಂದು ಚಿಂತಾಕ್ರಾಂತರಾದರಲ್ಲಾ. ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...