Homeಕರ್ನಾಟಕಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

- Advertisement -
- Advertisement -

ಇಂದಿನಿಂದ ರಾಜ್ಯದಲ್ಲಿ ಹೋಟೆಲ್-ರೆಸ್ಟೋರೆಂಟ್-ಕೈಗಾಡಿಗಳಲ್ಲಿನ ಊಟ-ತಿಂಡಿ ದರ ಶೇ.10 ರಷ್ಟು ಹೆಚ್ಚಾಗಿದೆ. ಪ್ರತಿ ಪ್ಲೇಟ್ ಊಟ ತಿಂಡಿಯ ಮೇಲೆ 10 ರೂ ನಿಂದ 50 ರೂವರೆಗೆ ಏರಿಸಲಾಗಿದೆ. ಅದೇ ರೀತಿಯಾಗಿ ಕಾಫಿ-ಟೀ ಬೆಲೆ ಕೂಡ ಏರಿಕೆಯಾಗಿದೆ.

ಕಳೆದ ಮೂರು-ನಾಲ್ಕು ವರ್ಷಗಳಿಂದ ಹೋಟೆಲ್ ಊಟದ ದರದಲ್ಲಿ ತಟಸ್ಥತೆಯನ್ನು ಕಾಯ್ದುಕೊಂಡು ಬರಲಾಗಿತ್ತು. ಅದರಲ್ಲಿಯೂ ರಸ್ತೆ ಬದಿಯಲ್ಲಿರುವ ಚಿಕ್ಕ ಪುಟ್ಟ ಹೋಟೆಲ್‌ಗಳು, ಮೆಸ್‌ಗಳು ಮತ್ತು ಕೈಗಾಡಿಗಳು ಕೈಗೆಟುಕುವ ದರದಲ್ಲಿ ಊಟ- ತಿಂಡಿ ಮಾರುತ್ತಿದ್ದವು. ಈಗ ಅವುಗಳು ಸಹ ಬೆಲೆ ಏರಿಸಿವೆ. 30-35 ರೂಗಳಿಗೆಲ್ಲ ಬೆಳಗ್ಗಿನ ತಿಂಡಿ ತಿನ್ನಬಹುದಾಗಿತ್ತು. ಈಗ 50ರೂಗಳ ಗಡಿ ದಾಟಿದೆ. ಇನ್ನು ರೆಸ್ಟೋರೆಂಟ್‌ಗಲ್ಲಿ ಒಂದು ತಿಂಡಿಗೆ ಕನಿಷ್ಟ 100 ರೂ ಖರ್ಚು ಮಾಡಬೇಕಾಗಿದೆ.

ಕಾರಣವೇನು?

ಕೊರೊನಾ ಕಾರಣಕ್ಕೆ ಈ ಎರಡು ವರ್ಷ ಹೋಟೆಲ್ ಉದ್ಯಮ ಸಮರ್ಪಕವಾಗಿ ನಡೆದುದ್ದೆ ಇಲ್ಲ. ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳು ಮುಚ್ಚಿದ್ದರೆ ಇನ್ನುಳಿದ ಸಮಯದಲ್ಲಿ ಶೇ.50 ರಷ್ಟು ಜನಕ್ಕೆ ಮಾತ್ರ ಅನುಮತಿ, ಪಾರ್ಸೆಲ್ ಮಾತ್ರ ಎಂಬ ನಿಬಂಧನೆಗಳಿಗೆ ಒಳಪಟ್ಟಿತ್ತು. ಈಗ ಕೋವಿಡ್ ಮುಗಿದ ನಂತರ ಪೂರ್ಣ ಪ್ರಮಾಣದಲ್ಲಿ ಹೋಟೆಲ್‌ಗಳು ಆರಂಭವಾಗಿವೆ. ಆದರೆ ಹೋಟೆಲ್ ನಡೆಸಲು ಬೇಕಾಗುವ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಅಡುಗೆ ಎಣ್ಣೆ, ಗ್ಯಾಸ್, ತರಕಾರಿ, ದಿನಸಿ ಬೆಲೆ ದಿನೇ ದಿನೇ ಏರುತ್ತಿರುವುದರಿಂದ ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾಗಿದೆ.

ಅಡುಗೆ ಎಣ್ಣೆ:

80 ರೂಗಳಿಗೆ ಸಿಗುತ್ತಿದ್ದ ಒಂದು ಲೀಟರ್ ಅಡುಗೆ ಎಣ್ಣೆ ಈಗ 160-170 ರೂಗಳಿಗೆ ಏರಿಕೆಯಾಗಿದೆ. ಅಂದರೆ ಡಬಲ್ ಆಗಿದೆ. ಇದು ಹೋಟೆಲ್ ಉದ್ಯಮ ನಡೆಸುವವರಿಗೆ ಹೊರೆಯಾಗಿದೆ.

ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ:

19 ಕೆಜಿಯ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮೊನ್ನೆಯಷ್ಟೆ 250 ರೂ ಹೆಚ್ಚಳ ಮಾಡಲಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಅದರ ಬೆಲೆ 2317.00 ರೂ.ಗೆ ಏರಿಕೆಯಾಗಿದೆ. ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಟೀ ಸ್ಟಾಲ್‌ಗಳು ಮತ್ತು ಇತರ ವಾಣಿಜ್ಯ ಕೆಫೆಗಳು ಇದೇ 19 ಕೆಜಿ ಸಿಲಿಂಡರ್‌ ಅನ್ನು ಬಳಸಲಾಗುತ್ತವೆ.  2021ರ ನವೆಂಬರ್ ನಲ್ಲಿ 1700 ರೂ ಇದ್ದ ಗ್ಯಾಸ್ ಬೆಲೆ ಈಗ 2300 ರೂಗೆ ಏರಿದೆ. ಅಂದರೆ ಆರು ತಿಂಗಳಲ್ಲಿ 600 ರೂ ಹೆಚ್ಚಾಗಿದೆ!

ಪೆಟ್ರೋಲ್ -ಡೀಸೆಲ್ ಬೆಲೆಯಲ್ಲಿ ನಿರಂತರ ಏರಿಕೆ

2020ರ ಜೂನ್‌ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 73.55ರೂ ಇತ್ತು. ಈಗ ಅದು 110 ರೂಗೆ ಏರಿದೆ. ಅಂದರೆ 36.50 ರೂ ಹೆಚ್ಚಳವಾಗಿದೆ. ಅಂದರೆ ಶೇ.50 ರಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ ಸಹ 66 ರೂ ಇದ್ದುದ್ದು ಈಗ 94 ರೂಗೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತಿದೆ.

ಅದೇ ರೀತಿಯಾಗಿ ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕಾರಣವೇನು?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಧನಗಳ ಮೇಲಿನ ತೆರಿಗೆ ಹೆಚ್ಚು ಮಾಡುತ್ತಿದೆ. ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 38 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 37 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ವ್ಯಾಟ್ ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 110 ರೂ ದಾಟುತ್ತದೆ.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಇಂಧನಗಳ ಮೇಲಿನ ತೆರಿಗೆಯಿಂದಲೇ 26,51,919 ಕೋಟಿ ರೂ ಸಂಗ್ರಹಿಸಿದ್ದಾರೆ! 26 ಲಕ್ಷ ಕೋಟಿ ರೂಗಳೆಂದರೆ ಕಳೆದ 10 ವರ್ಷದ ಇಡಿ ಕರ್ನಾಟಕ ಬಜೆಟ್‌ಗೆ ಸರಿಸಮವಾಗುತ್ತದೆ.

ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ. ಇದರಿಂದ ಪಾರಾಗಲು ಇಂಧನಗಳ ಮೇಲಿನ ತೆರಿಗೆ ಇಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದೊಂದೆ ಜನರಿಗೆ ಉಳಿದಿರುವ ದಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...