Homeಅಂಕಣಗಳು’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

- Advertisement -
- Advertisement -

ಕಥಾ ರಚನೆಗೆ ಬೇಕಾದ ಸರಕು ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೂ ಕೂಡ, ಅದನ್ನು ಕಥೆಯಾಗಿಸುವ ನಿರೂಪಣಾ ಕೌಶಲ್ಯಕ್ಕೆ ಸಿದ್ಧತೆ ಮತ್ತು ಕಾರ್ಯಕ್ಷಮತೆಯ ಅಗತ್ಯವಿದೆ. ಅನಿಲ್ ಗುನ್ನಾಪುರ ಅವರ ’ಕಲ್ಲು ಹೂವಿನ ನೆರಳು’ ಸಂಕಲನದಲ್ಲಿ ಅಂತಹ ಕೌಶಲ್ಯದ ಛಾಯೆ ನಮಗೆ ಕಥೆಗಳ ಒಳಗಿಳಿದಂತೆ ಕಾಣತೊಡಗುತ್ತದೆ. ಕಥೆಗಾರನ ತನ್ಮಯತೆ ಮತ್ತು ಅಂತರಾಳದ ತುಡಿತಗಳಿಗೆ ಅಕ್ಷರದ ಬಣ್ಣ ಬಳಿದಾಗ, ಅದು ಕಲ್ಲು ಹೂವಿನ ನೆರಳಾಗಿ ವಿಶಿಷ್ಟವಾದ ಕಲಾಕೃತಿಯಾಗಿ ರೂಪುಗೊಳ್ಳುತ್ತದೆ. ತನ್ನ ಸುತ್ತಲಿನವರು ತಮ್ಮ ಬದುಕನ್ನು ಹೆಣೆದುಕೊಳ್ಳುವಂತೆಯೇ, ಕಥೆಗಾರ ಕಥೆಗಳ ಹೆಣೆಯುತ್ತ, ತನ್ನೊಳಗಿನ ಭಾವ ಪ್ರಪಂಚವನ್ನು ಲೋಕದೃಷ್ಟಿಯಿಂದ ಕಾಣಬಯಸುತ್ತಾನೆ. ಇಲ್ಲಿನ ಬಹುತೇಕ ಕಥೆಗಳು ಕೆಂಡದಂತೆ ಕಂಡರೂ ಕೂಡ ಮಂಜಿನ ಹಾಗೆ ತಣ್ಣನೆಯ ನೋವು, ಹತಾಶೆ, ಮೌನ ಮತ್ತು ಕ್ರೌರ್ಯದ ನಿಲುಗನ್ನಡಿಯೇ ಆಗಿವೆ. ಸುತ್ತಲಿನ ಲೋಕ ಮೀಮಾಂಸೆ ಒಂದೆಡೆಯಾದರೆ, ಬದುಕಿನ ಸಣ್ಣಸಣ್ಣ ತಿರುವುಗಳು ಕೂಡ ನೋವಿನ ನಗಾರಿ ಬಾರಿಸಲು ನಿಂತಿರುವಂತೆ ಕಾಣುವುದು ಇಲ್ಲಿನ ಕಥೆಗಳ ವಿಶೇಷ!

ಪ್ರತಿ ಕಥೆಯ ಸ್ಥಾಯಿಭಾವ, ಮೌನ ಮತ್ತು ಮುಗ್ಧತೆಯೇ ಆಗಿದ್ದರೂ, ಅದಕ್ಕಿರುವ ಸಂಚಾರಿ ಭಾವ ಮನೋಸಂಬಂಧವೆ ಆಗಿಬಿಡುತ್ತದೆ. ಕೊಳದೊಳಗೆ ಸಣ್ಣ ಕಲ್ಲು ಬಿದ್ದು ತರಂಗ ಎಬ್ಬಿಸುವ ಹಾಗೆ, ಸಣ್ಣದೊಂದು ಮಾತು, ಘಟನೆ, ಸ್ವಕಲ್ಪಿತ ವಿಚಾರಗಳಿಂದ ಮನಸ್ಸಿನಲ್ಲಿ ಏಳಬಹುದಾದ ತರಂಗಗಳ ಒಟ್ಟು ಮೊತ್ತವೇ ಈ ಕಥಾಗುಚ್ಚ ಎನ್ನಬಹುದು!

ಇಲ್ಲಿನ ಪ್ರತಿ ಕಥೆಗೂ ಅಂತರ್ ಸಂಬಂಧೀಯ ಗುಣ ಇದ್ದಂತೆ ಕಾಣುತ್ತಿದ್ದಂತೆಯೇ, ಇಲ್ಲವೆನಿಸಿಯೂಬಿಡುತ್ತದೆ. ’ಪರಿಮಳ’ ಕಥೆಯ ಪಮ್ಮಿಯೂ, ’ಗುಲ್ ಮೊಹರ್ ಹುಡುಗ’ನಾದ ಅಪ್ಪುವಿಗೂ ಸಾಮ್ಯತೆಯ ಕಲ್ಪಿಸಬಹುದು. ಇಬ್ಬರಲ್ಲೂ ಮುಗ್ಧತೆ ಸಾಮಾನ್ಯವೆನಿಸಿದರೂ, ಪಮ್ಮಿಗೆ ಸಂಬಂಧದ ಕುರಿತಿರುವ ಗೊಂದಲ ಅಪ್ಪುವಿಗಿಲ್ಲ.

ಆದರೆ, ’ಗುಲ್ ಮೊಹರ್ ಹುಡುಗ’ ಕಥೆಯಲ್ಲಿರುವ ಅರವಿಂದನಿಗೆ ಇರುವ ಲೈಂಗಿಕ ಆಸಕ್ತಿ ಹೆಂಡತಿಯಾದ ನಳಿನಿಯಲ್ಲಿ ಹೆಚ್ಚು ಕಾಣಿಸದು, ಅಂತೆಯೇ ’ಶ್ಯಾರಿಯ ಗಲ್ಲಾ ಡೆಬ್ಬಿ’ಯ ಬಾಯಕ್ಕನಿಗೆ ಇರುವ ಲೈಂಗಿಕ ಆಸಕ್ತಿ ಗಂಡ ಹುಚ್ಚಯ್ಯನಿಗೆ ಇಲ್ಲದಿರುವುದು ಒಂದು ರೀತಿಯ ವೈರುಧ್ಯವನ್ನು ಎದುರಿಟ್ಟ ಹಾಗಿದೆ. ಇದರಿಂದ ಪರಸ್ಪರ ಸಂಬಂಧಗಳ ನಡುವೆ ಬಿಟ್ಟಿರಬಹುದಾದ ಬಿರುಕು ಕೂಡ ಪ್ರಮುಖ ಪಾತ್ರವಹಿಸಿದೆ ಎನಿಸಬಹುದು. ’ಹುಚ್ಚಯ್ಯನ ಲೀಲೆ’ ಕಥೆಯಲ್ಲಿ ಬರುವ ಚೆನ್ನಪ್ಪನಿಗೂ ’ಕಮಲಜ್ಜಿ’ಗೂ ಇರಬಹುದಾದ ಉದಾರತೆಯ ಗುಣವು ಒಂದೇ ಅನ್ನಿಸಿದರೂ, ಚೆನ್ನಪ್ಪನದು ಊರ ಜನರ ಕುರಿತ ತನಗರಿವಿಲ್ಲದೆಯೇ ಬಂದಿರುವ ಅಘೋಷಿತ ಕಾಳಜಿಯಾದರೆ, ಕಮಲಜ್ಜಿಯದ್ದು ಮಗನ, ಮೊಮ್ಮಕ್ಕಳ ಕುರಿತ ಕೌಟುಂಬಿಕ ಕಾಳಜಿ, ಚೆನ್ನಪ್ಪ ಹುಚ್ಚಯ್ಯನಂತೆಯೇ ಆಧ್ಯಾತ್ಮದಲ್ಲಿ ಐಕ್ಯವಾದರೆ, ಕಮಲಜ್ಜಿ ಸಂಬಂಧಗಳ ಸೆಳೆತದಲ್ಲೆ ಮುಳುಗುತ್ತಾಳೆ.

ಅನಿಲ್ ಗುನ್ನಾಪುರ

ಇನ್ನೂ ’ಶ್ಯಾರಿಯ ಗಲ್ಲಾ ಡೆಬ್ಬಿ’ ಕಥೆಯಂತು ಓದುಗರ ಕಣ್ಣಂಚಿನಲ್ಲಿ ನೀರು ಚಿಮ್ಮಿಸಬಲ್ಲ ಅನಿರೀಕ್ಷಿತ ದುರಂತದ ಕಥೆ. ಬದುಕ ಕಟ್ಟಿಕೊಳ್ಳಲು ಊರಿಂದ ಊರಿಗೆ ಅಲೆಯುವ ಬದುಕಿನ ಬವಣೆ ಇಲ್ಲಿನ ಕೇಂದ್ರ ವಸ್ತು. ಬಾಯಕ್ಕನ ಬದುಕಿನ ಹಸಿವಿನೊಂದಿಗೆ, ಮಿಲನದ ಹಸಿವು, ಗಂಡ ಹುಚ್ಚಪ್ಪನ ಕುಡಿತದ ಹಸಿವು, ಮಗಳು ಶ್ಯಾರಿಯ ಅಕ್ಷರದ ಹಸಿವು ಅಲ್ಲದೇ ಕೊನೆಯಲ್ಲಿ ಅಪರಿಚಿತ ಆಸಾಮಿಯ ಅತ್ಯಾಚಾರದ ಹಸಿವಿನಿಂದಾಗಿ ಇಡೀ ಕುಟುಂಬವೇ ನರಳುವ ಮತ್ತು ಓದುಗರನ್ನು ವಿಚಿತ್ರ ಯಾತನೆಗೆ ಒಳಗು ಮಾಡುವ ಕಥೆಯಿದು.
ಇಲ್ಲಿನ ಎಂಟು ಕಥೆಗಳ ಪೈಕಿ ’ಚಿನ್ಮಯ ನಿಲಯ’ ಕಥೆಯ ವಸ್ತು ಕನ್ನಡ ಕಥಾ ಲೋಕಕ್ಕೆ ತೀರ ಹೊಸತು ಅನ್ನಿಸಿತು. ಬುದ್ಧಿಮಾಂದ್ಯರ ಲೈಂಗಿಕತೆಯ ಕುರಿತು ಮಿಶಲ್ ಫುಕೋ ಹೇಳಿದ ನಿಯಮವನ್ನು, ಕಥೆಗಾರ ಅರಿವಿದ್ದೋ, ಅರಿವಿಲ್ಲದೆಯೋ ಬಳಸಿಕೊಂಡಿದ್ದಾನೆ ಮತ್ತು ಯಶಸ್ವಿ ಕೂಡ ಆಗಿದ್ದಾನೆ. ಆ ಕಥೆಯ ನಿರೂಪಣೆ
ಕುತೂಹಲ ಅನಿಸುತ್ತದೆ, ಚಂಪಾ ಆಂಟಿ ಮತ್ತು ಸುಭಾಷ್ ಅಂಕಲ್‌ನ ಮನೆಯ ಕಥೆಯನ್ನು ಯಾರು ನಿರೂಪಣೆ ಮಾಡುತ್ತಿದ್ದಾರೆ ಎಂಬುದೇ ಗೊತ್ತಾಗುವುದಿಲ್ಲ. ಈ ಕಥೆಯಲ್ಲಿ ಬರುವ ಸಂಬಂಧಗಳ ಬಂಧ ಕೆಲವು ಸಲ ಬಿಗಿಯಾಗಿ, ಮತ್ತೂ ಗಟ್ಟಿಯಾಗಿ ಏಕತಾನತೆಯನ್ನು ಇಲ್ಲವಾಗಿಸುತ್ತದೆ. ಮೂವತ್ತೊಂದು ವರ್ಷದ ಚಿನ್ಮಯನ ಅಂಗಾಂಗವು ಚಂದ್ರವ್ವನ ಸ್ಪರ್ಷದಿಂದ ಜಾಗೃತವಾಗುವ ಮತ್ತು ಪರಸ್ಪರರು ಬೆರೆಯುವುದು ಅವನ ಬದುಕಿನ ಚೈತನ್ಯಕ್ಕೆ ಕಾರಣವಾಯಿತೇ? ಅಥವಾ ಅವನಲ್ಲಾದ ಬದಲಾವಣೆ ಮನುಷ್ಯ ಸಹಜವಾದದ್ದೆ? ಎಂಬ ಹಲವು ವಿಚಾರವನ್ನು ವಿವೇಚಿಸುವಂತೆ ಮಾಡುತ್ತ ನಿರೂಪಕ ನಿರ್ಗಮಿಸುತ್ತಾನೆ.

’ಚುಕ್ಕಿ ಕೇಳಿದ ಕತೆ’ ವಿಶೇಷವಾಗಿ ನಿರೂಪಿಸಿದ ಒಂದು ಕಥಾವಸ್ತು. ಕಥೆಯೊಳಗೊಂದು ಕಥೆ ಹೆಣೆಯುವ ಕುಸುರಿ ಕೆಲಸದಲ್ಲಿ ಕಥೆಗಾರ ಗೆದ್ದಿದ್ದಾನೆ. ’ಅವನಿ’ ಕಥೆಯೂ ಕೂಡ ಸಹಜ ಕುತೂಹಲದಿಂದ ಏನನ್ನೋ ಹೇಳಲುಹೋಗಿ, ಕೊನೆಗೆ ಏನೂ ಹೇಳದೆ ದೃಶ್ಯಗಳನ್ನಷ್ಟೆ ಎದುರಿಟ್ಟು ಸುಂದರ ಚಿತ್ರಾಕೃತಿಯಾಗಿ ನಿಂತುಬಿಡುತ್ತದೆ.

ಹೀಗೆ ಕಥೆಗಳ ಚೌಕಟ್ಟಿನಲ್ಲಿ ತುಂಬಬಹುದಾದ ಚಿತ್ರಗಳನ್ನು ಕಥೆಗಾರ ತನ್ನ ಅನುಭವದ ಕುಂಚದಿಂದ ಚಿತ್ರಿಸಲು ಪ್ರಯತ್ನಪಟ್ಟಿದ್ದಾನೆ. ಕುತೂಹಲದ ನಿರೂಪಣೆ ಮತ್ತು ಭಾಷಾ ಸೊಗಡಿನ ವೈಶಿಷ್ಟ್ಯತೆ ಆಕರ್ಷಕವಾಗಿದೆ. ಕಥೆಯ ಕೊನೆಯನ್ನು ಕೊನೆಯಾಗುವಂತೆಯೂ ಮತ್ತು ಕೊನೆಗಾಣದಂತೆಯೂ ಎಲ್ಲವನ್ನೂ ತಾನೆ ಹೇಳಿ ಮುಗಿಸಬೇಕೆಂಬ ವಾಚಾಳಿತನ ಕಥೆಗಾರನಿಗಿಲ್ಲ. ಒಟ್ಟಿನಲ್ಲಿ ಹೊಸ ತಲೆಮಾರಿನ ಕಥೆಗಳಿಗೆ ವಿಶೇಷ ಆಯಾಮ ಇರುವುದಂತೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...