Homeಅಂಕಣಗಳು’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

- Advertisement -
- Advertisement -

ಕಥಾ ರಚನೆಗೆ ಬೇಕಾದ ಸರಕು ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೂ ಕೂಡ, ಅದನ್ನು ಕಥೆಯಾಗಿಸುವ ನಿರೂಪಣಾ ಕೌಶಲ್ಯಕ್ಕೆ ಸಿದ್ಧತೆ ಮತ್ತು ಕಾರ್ಯಕ್ಷಮತೆಯ ಅಗತ್ಯವಿದೆ. ಅನಿಲ್ ಗುನ್ನಾಪುರ ಅವರ ’ಕಲ್ಲು ಹೂವಿನ ನೆರಳು’ ಸಂಕಲನದಲ್ಲಿ ಅಂತಹ ಕೌಶಲ್ಯದ ಛಾಯೆ ನಮಗೆ ಕಥೆಗಳ ಒಳಗಿಳಿದಂತೆ ಕಾಣತೊಡಗುತ್ತದೆ. ಕಥೆಗಾರನ ತನ್ಮಯತೆ ಮತ್ತು ಅಂತರಾಳದ ತುಡಿತಗಳಿಗೆ ಅಕ್ಷರದ ಬಣ್ಣ ಬಳಿದಾಗ, ಅದು ಕಲ್ಲು ಹೂವಿನ ನೆರಳಾಗಿ ವಿಶಿಷ್ಟವಾದ ಕಲಾಕೃತಿಯಾಗಿ ರೂಪುಗೊಳ್ಳುತ್ತದೆ. ತನ್ನ ಸುತ್ತಲಿನವರು ತಮ್ಮ ಬದುಕನ್ನು ಹೆಣೆದುಕೊಳ್ಳುವಂತೆಯೇ, ಕಥೆಗಾರ ಕಥೆಗಳ ಹೆಣೆಯುತ್ತ, ತನ್ನೊಳಗಿನ ಭಾವ ಪ್ರಪಂಚವನ್ನು ಲೋಕದೃಷ್ಟಿಯಿಂದ ಕಾಣಬಯಸುತ್ತಾನೆ. ಇಲ್ಲಿನ ಬಹುತೇಕ ಕಥೆಗಳು ಕೆಂಡದಂತೆ ಕಂಡರೂ ಕೂಡ ಮಂಜಿನ ಹಾಗೆ ತಣ್ಣನೆಯ ನೋವು, ಹತಾಶೆ, ಮೌನ ಮತ್ತು ಕ್ರೌರ್ಯದ ನಿಲುಗನ್ನಡಿಯೇ ಆಗಿವೆ. ಸುತ್ತಲಿನ ಲೋಕ ಮೀಮಾಂಸೆ ಒಂದೆಡೆಯಾದರೆ, ಬದುಕಿನ ಸಣ್ಣಸಣ್ಣ ತಿರುವುಗಳು ಕೂಡ ನೋವಿನ ನಗಾರಿ ಬಾರಿಸಲು ನಿಂತಿರುವಂತೆ ಕಾಣುವುದು ಇಲ್ಲಿನ ಕಥೆಗಳ ವಿಶೇಷ!

ಪ್ರತಿ ಕಥೆಯ ಸ್ಥಾಯಿಭಾವ, ಮೌನ ಮತ್ತು ಮುಗ್ಧತೆಯೇ ಆಗಿದ್ದರೂ, ಅದಕ್ಕಿರುವ ಸಂಚಾರಿ ಭಾವ ಮನೋಸಂಬಂಧವೆ ಆಗಿಬಿಡುತ್ತದೆ. ಕೊಳದೊಳಗೆ ಸಣ್ಣ ಕಲ್ಲು ಬಿದ್ದು ತರಂಗ ಎಬ್ಬಿಸುವ ಹಾಗೆ, ಸಣ್ಣದೊಂದು ಮಾತು, ಘಟನೆ, ಸ್ವಕಲ್ಪಿತ ವಿಚಾರಗಳಿಂದ ಮನಸ್ಸಿನಲ್ಲಿ ಏಳಬಹುದಾದ ತರಂಗಗಳ ಒಟ್ಟು ಮೊತ್ತವೇ ಈ ಕಥಾಗುಚ್ಚ ಎನ್ನಬಹುದು!

ಇಲ್ಲಿನ ಪ್ರತಿ ಕಥೆಗೂ ಅಂತರ್ ಸಂಬಂಧೀಯ ಗುಣ ಇದ್ದಂತೆ ಕಾಣುತ್ತಿದ್ದಂತೆಯೇ, ಇಲ್ಲವೆನಿಸಿಯೂಬಿಡುತ್ತದೆ. ’ಪರಿಮಳ’ ಕಥೆಯ ಪಮ್ಮಿಯೂ, ’ಗುಲ್ ಮೊಹರ್ ಹುಡುಗ’ನಾದ ಅಪ್ಪುವಿಗೂ ಸಾಮ್ಯತೆಯ ಕಲ್ಪಿಸಬಹುದು. ಇಬ್ಬರಲ್ಲೂ ಮುಗ್ಧತೆ ಸಾಮಾನ್ಯವೆನಿಸಿದರೂ, ಪಮ್ಮಿಗೆ ಸಂಬಂಧದ ಕುರಿತಿರುವ ಗೊಂದಲ ಅಪ್ಪುವಿಗಿಲ್ಲ.

ಆದರೆ, ’ಗುಲ್ ಮೊಹರ್ ಹುಡುಗ’ ಕಥೆಯಲ್ಲಿರುವ ಅರವಿಂದನಿಗೆ ಇರುವ ಲೈಂಗಿಕ ಆಸಕ್ತಿ ಹೆಂಡತಿಯಾದ ನಳಿನಿಯಲ್ಲಿ ಹೆಚ್ಚು ಕಾಣಿಸದು, ಅಂತೆಯೇ ’ಶ್ಯಾರಿಯ ಗಲ್ಲಾ ಡೆಬ್ಬಿ’ಯ ಬಾಯಕ್ಕನಿಗೆ ಇರುವ ಲೈಂಗಿಕ ಆಸಕ್ತಿ ಗಂಡ ಹುಚ್ಚಯ್ಯನಿಗೆ ಇಲ್ಲದಿರುವುದು ಒಂದು ರೀತಿಯ ವೈರುಧ್ಯವನ್ನು ಎದುರಿಟ್ಟ ಹಾಗಿದೆ. ಇದರಿಂದ ಪರಸ್ಪರ ಸಂಬಂಧಗಳ ನಡುವೆ ಬಿಟ್ಟಿರಬಹುದಾದ ಬಿರುಕು ಕೂಡ ಪ್ರಮುಖ ಪಾತ್ರವಹಿಸಿದೆ ಎನಿಸಬಹುದು. ’ಹುಚ್ಚಯ್ಯನ ಲೀಲೆ’ ಕಥೆಯಲ್ಲಿ ಬರುವ ಚೆನ್ನಪ್ಪನಿಗೂ ’ಕಮಲಜ್ಜಿ’ಗೂ ಇರಬಹುದಾದ ಉದಾರತೆಯ ಗುಣವು ಒಂದೇ ಅನ್ನಿಸಿದರೂ, ಚೆನ್ನಪ್ಪನದು ಊರ ಜನರ ಕುರಿತ ತನಗರಿವಿಲ್ಲದೆಯೇ ಬಂದಿರುವ ಅಘೋಷಿತ ಕಾಳಜಿಯಾದರೆ, ಕಮಲಜ್ಜಿಯದ್ದು ಮಗನ, ಮೊಮ್ಮಕ್ಕಳ ಕುರಿತ ಕೌಟುಂಬಿಕ ಕಾಳಜಿ, ಚೆನ್ನಪ್ಪ ಹುಚ್ಚಯ್ಯನಂತೆಯೇ ಆಧ್ಯಾತ್ಮದಲ್ಲಿ ಐಕ್ಯವಾದರೆ, ಕಮಲಜ್ಜಿ ಸಂಬಂಧಗಳ ಸೆಳೆತದಲ್ಲೆ ಮುಳುಗುತ್ತಾಳೆ.

ಅನಿಲ್ ಗುನ್ನಾಪುರ

ಇನ್ನೂ ’ಶ್ಯಾರಿಯ ಗಲ್ಲಾ ಡೆಬ್ಬಿ’ ಕಥೆಯಂತು ಓದುಗರ ಕಣ್ಣಂಚಿನಲ್ಲಿ ನೀರು ಚಿಮ್ಮಿಸಬಲ್ಲ ಅನಿರೀಕ್ಷಿತ ದುರಂತದ ಕಥೆ. ಬದುಕ ಕಟ್ಟಿಕೊಳ್ಳಲು ಊರಿಂದ ಊರಿಗೆ ಅಲೆಯುವ ಬದುಕಿನ ಬವಣೆ ಇಲ್ಲಿನ ಕೇಂದ್ರ ವಸ್ತು. ಬಾಯಕ್ಕನ ಬದುಕಿನ ಹಸಿವಿನೊಂದಿಗೆ, ಮಿಲನದ ಹಸಿವು, ಗಂಡ ಹುಚ್ಚಪ್ಪನ ಕುಡಿತದ ಹಸಿವು, ಮಗಳು ಶ್ಯಾರಿಯ ಅಕ್ಷರದ ಹಸಿವು ಅಲ್ಲದೇ ಕೊನೆಯಲ್ಲಿ ಅಪರಿಚಿತ ಆಸಾಮಿಯ ಅತ್ಯಾಚಾರದ ಹಸಿವಿನಿಂದಾಗಿ ಇಡೀ ಕುಟುಂಬವೇ ನರಳುವ ಮತ್ತು ಓದುಗರನ್ನು ವಿಚಿತ್ರ ಯಾತನೆಗೆ ಒಳಗು ಮಾಡುವ ಕಥೆಯಿದು.
ಇಲ್ಲಿನ ಎಂಟು ಕಥೆಗಳ ಪೈಕಿ ’ಚಿನ್ಮಯ ನಿಲಯ’ ಕಥೆಯ ವಸ್ತು ಕನ್ನಡ ಕಥಾ ಲೋಕಕ್ಕೆ ತೀರ ಹೊಸತು ಅನ್ನಿಸಿತು. ಬುದ್ಧಿಮಾಂದ್ಯರ ಲೈಂಗಿಕತೆಯ ಕುರಿತು ಮಿಶಲ್ ಫುಕೋ ಹೇಳಿದ ನಿಯಮವನ್ನು, ಕಥೆಗಾರ ಅರಿವಿದ್ದೋ, ಅರಿವಿಲ್ಲದೆಯೋ ಬಳಸಿಕೊಂಡಿದ್ದಾನೆ ಮತ್ತು ಯಶಸ್ವಿ ಕೂಡ ಆಗಿದ್ದಾನೆ. ಆ ಕಥೆಯ ನಿರೂಪಣೆ
ಕುತೂಹಲ ಅನಿಸುತ್ತದೆ, ಚಂಪಾ ಆಂಟಿ ಮತ್ತು ಸುಭಾಷ್ ಅಂಕಲ್‌ನ ಮನೆಯ ಕಥೆಯನ್ನು ಯಾರು ನಿರೂಪಣೆ ಮಾಡುತ್ತಿದ್ದಾರೆ ಎಂಬುದೇ ಗೊತ್ತಾಗುವುದಿಲ್ಲ. ಈ ಕಥೆಯಲ್ಲಿ ಬರುವ ಸಂಬಂಧಗಳ ಬಂಧ ಕೆಲವು ಸಲ ಬಿಗಿಯಾಗಿ, ಮತ್ತೂ ಗಟ್ಟಿಯಾಗಿ ಏಕತಾನತೆಯನ್ನು ಇಲ್ಲವಾಗಿಸುತ್ತದೆ. ಮೂವತ್ತೊಂದು ವರ್ಷದ ಚಿನ್ಮಯನ ಅಂಗಾಂಗವು ಚಂದ್ರವ್ವನ ಸ್ಪರ್ಷದಿಂದ ಜಾಗೃತವಾಗುವ ಮತ್ತು ಪರಸ್ಪರರು ಬೆರೆಯುವುದು ಅವನ ಬದುಕಿನ ಚೈತನ್ಯಕ್ಕೆ ಕಾರಣವಾಯಿತೇ? ಅಥವಾ ಅವನಲ್ಲಾದ ಬದಲಾವಣೆ ಮನುಷ್ಯ ಸಹಜವಾದದ್ದೆ? ಎಂಬ ಹಲವು ವಿಚಾರವನ್ನು ವಿವೇಚಿಸುವಂತೆ ಮಾಡುತ್ತ ನಿರೂಪಕ ನಿರ್ಗಮಿಸುತ್ತಾನೆ.

’ಚುಕ್ಕಿ ಕೇಳಿದ ಕತೆ’ ವಿಶೇಷವಾಗಿ ನಿರೂಪಿಸಿದ ಒಂದು ಕಥಾವಸ್ತು. ಕಥೆಯೊಳಗೊಂದು ಕಥೆ ಹೆಣೆಯುವ ಕುಸುರಿ ಕೆಲಸದಲ್ಲಿ ಕಥೆಗಾರ ಗೆದ್ದಿದ್ದಾನೆ. ’ಅವನಿ’ ಕಥೆಯೂ ಕೂಡ ಸಹಜ ಕುತೂಹಲದಿಂದ ಏನನ್ನೋ ಹೇಳಲುಹೋಗಿ, ಕೊನೆಗೆ ಏನೂ ಹೇಳದೆ ದೃಶ್ಯಗಳನ್ನಷ್ಟೆ ಎದುರಿಟ್ಟು ಸುಂದರ ಚಿತ್ರಾಕೃತಿಯಾಗಿ ನಿಂತುಬಿಡುತ್ತದೆ.

ಹೀಗೆ ಕಥೆಗಳ ಚೌಕಟ್ಟಿನಲ್ಲಿ ತುಂಬಬಹುದಾದ ಚಿತ್ರಗಳನ್ನು ಕಥೆಗಾರ ತನ್ನ ಅನುಭವದ ಕುಂಚದಿಂದ ಚಿತ್ರಿಸಲು ಪ್ರಯತ್ನಪಟ್ಟಿದ್ದಾನೆ. ಕುತೂಹಲದ ನಿರೂಪಣೆ ಮತ್ತು ಭಾಷಾ ಸೊಗಡಿನ ವೈಶಿಷ್ಟ್ಯತೆ ಆಕರ್ಷಕವಾಗಿದೆ. ಕಥೆಯ ಕೊನೆಯನ್ನು ಕೊನೆಯಾಗುವಂತೆಯೂ ಮತ್ತು ಕೊನೆಗಾಣದಂತೆಯೂ ಎಲ್ಲವನ್ನೂ ತಾನೆ ಹೇಳಿ ಮುಗಿಸಬೇಕೆಂಬ ವಾಚಾಳಿತನ ಕಥೆಗಾರನಿಗಿಲ್ಲ. ಒಟ್ಟಿನಲ್ಲಿ ಹೊಸ ತಲೆಮಾರಿನ ಕಥೆಗಳಿಗೆ ವಿಶೇಷ ಆಯಾಮ ಇರುವುದಂತೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...