Homeಕರ್ನಾಟಕಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗ ದಳ ಮತ್ತು ವಿಎಚ್‌ಪಿ ವಿರುದ್ಧದ ವಾಗ್ದಾಳಿಯನ್ನು ಮತ್ತೆ ಮುಂದುವರೆಸಿದ್ದು, “ಜನರನ್ನು ಒಡೆಯುವುದಕ್ಕೆ ಮಾತ್ರ ಬಜರಂಗದಳ ಮತ್ತು ವಿಹೆಚ್‌ಪಿಯವರು ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, “ಡೀಸೆಲ್-ಪೆಟ್ರೋಲ್ ಬೆಲೆ ಪ್ರತಿನಿತ್ಯ ಷೇರು ಬೆಲೆಯಂತೆ ಏರುತ್ತಲೇ ಇದೆ. ದೇಶವನ್ನೇ ಬಂಡವಾಳಶಾಹಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಭಜರಂಗದಳ ಮತ್ತು ವಿಹೆಚ್‌ಪಿಯವರು ಕೇಸರಿ ಟವೆಲ್ ಹಾಕಿಕೊಂಡು ರಸ್ತೆಗಿಳಿದು ಜನರ ಪರ ಹೋರಾಟ ನಡೆಸಿದ್ದನ್ನು ಒಂದೇ ಒಂದು ದಿನವೂ ನಾನು ಕಂಡಿಲ್ಲ. ಜನರ ಪರ ದನಿ ಎತ್ತುವುದಿಲ್ಲ, ಜನರನ್ನು ಒಡೆಯುವುದಕ್ಕೆ ಮಾತ್ರ ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಹೇಳಿದ್ದಾರೆ.

“ಬೆಲೆ ಏರಿಕೆಯಿಂದ ಜನ ನರಳುತ್ತಿದ್ದಾರೆ. ನೀವು ಬೆಲೆ ಏರಿಕೆ ವಿರುದ್ಧ ಹೋರಾಡಿ. ನಿಮಗೆ ಬೆಂಬಲ ನೀಡುತ್ತೇನೆ. ಜನಪರ ಹೋರಾಟ ಮಾಡುವುದಿಲ್ಲ ಎಂದರೆ ನೀವೇ ನಿಜವಾದ ದೇಶದ್ರೋಹಿಗಳು ಅಲ್ಲವೆ?” ಎಂದು ಕುಮಾರಸ್ವಾಮಿ ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಕರಾವಳಿಯ ಒಂದು ಶಾಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಹಲಾಲ್ ಮಾಂಸ, ಮುಸ್ಲಿಮರ ವಿರುದ್ಧ ಆರ್ಥಿಕ ಜಿಹಾದ್, ಆಜಾನ್ ಬ್ಯಾನ್‌ವರೆಗೆ ಬಂದು ನಿಂತಿದೆ. ನಾಡಿನ ಕೋಮು ಸಾಮರಸ್ಯ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್‌ಗಾಗಿ ಉರಿವ ಮನೆಯ ಗಳ ಹಿರಿಯಬೇಡಿ. ನಿಮ್ಮ ಚುನಾವಣಾ ರಾಜಕಾರಣಕ್ಕೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ದ್ವೇಷವನ್ನು ಬಿತ್ತಿ ಸಾಮರಸ್ಯ ಕೆಡಿಸಬೇಡಿ” ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವು ಕಿಡಿಕಾರಿರುವ ಕುಮಾರಸ್ವಾಮಿ, “ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಹಿಜಾಬ್ ವಿವಾದವನ್ನು ಒಂದೇ ದಿನದಲ್ಲಿ ಮುಗಿಸಬಹುದಿತ್ತು. ಹಲಾಲ್ ವಿಚಾರ ವಿವಾದವಾಗದಂತೆ ತಡೆಯಬಹುದಿತ್ತು. ಆದರೆ, ಬಿಜೆಪಿ ನಾಯಕರು ಕೋಮು ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸ್ವತಃ ಹಿಂದೆ ನಿಂತು ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ಮೂಲಕ ಸಮಾಜವನ್ನೇ ಒಡೆಯುವ ಹೇಯ ರಾಜಕಾರಣ ಮಾಡುತ್ತಿದೆ. ಯಾವ ಸರ್ಕಾರವೂ ತನ್ನ ಸ್ವಯಂ ಲಾಭಕ್ಕಾಗಿ ಈ ಹಂತಕ್ಕೆ ಇಳಿಬಾರದಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಲ್ಲಿ ಮಕ್ಕಳ ಬಾಯಲ್ಲಿ ನಾಡಗೀತೆ ಹಾಡಿಸಿ ಶಾಲೆಯ ಹೊರಗೆ ಕೋಮು ಪ್ರಚೋದನೆ ಮಾಡುವುದು ಎಷ್ಟು ಸರಿ? ದಯವಿಟ್ಟು ನಾಡಿನಲ್ಲಿ ಕುವೆಂಪು ಆಶಯವನ್ನು ಕಾಪಾಡಿ ಇಲ್ಲವೇ ನಾಡಗೀತೆಯನ್ನೇ ತೆಗೆದುಬಿಡಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪೊಲೀಸರು ನಟ ಚೇತನ್ ಟ್ವೀಟ್ ಮಾಡಿದರು ಎಂಬ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸುತ್ತಾರೆ. ಆದರೆ, ಮಟನ್ ಸ್ಟಾಲ್‌ಗಳಿಗೆ ಹೋಗಿ ಮುಸ್ಲಿಂ ಬಾಂಧವರ ಮೇಲೆ ಹಲ್ಲೆ ಮಾಡುವ, ಮುಸ್ಲಿಮರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಮಾಜ ವಿರೋಧಿಗಳನ್ನು ಏಕೆ ಬಂಧಿಸುವುದಿಲ್ಲ? ರಾಜ್ಯ ಪೊಲೀಸರಿಗೆ ತಾಕತ್ ಇದ್ದರೆ ಇಂಥವರನ್ನು ಬಂಧಿಸಲಿ” ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಹಲಾಲ್‌ ಕಟ್ ವಿರುದ್ಧ ಆರಂಭವಾಗಿರುವ ಅಭಿಯಾನದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, “ಹಲಾಲ್ ಕಟ್ಟೋ-ಜಟ್ಕಾ ಕಟ್ಟೋ? ಜನ ಏನ್ ತಿಂದ್ರೆ ನಿಮಗೇನು? ಮೊನ್ನೆ ಮೊನ್ನೆ ಯಾರೋ ಜಟ್ಕಾ ಕಟ್ ಮಾಡ್ತೀನಿ ಅಂತ ಕುರಿ ಹಿಡಿದವನ ತಲೆಗೆ ಮಚ್ಚು ಬೀಸಿದ್ದರು. ಈಗ ಜಟ್ಕಾ ಕಟ್ ಎಂದು ಮಾತನಾಡುತ್ತಿರುವವರ ತಲೆ ಹುಷಾರು. ಇಷ್ಟಕ್ಕೂ ಜನ ಏನ್ ತಿಂದರೆ ನಿಮಗೇನು?” ಎಂದು ಹೇಳಿದ್ದಾರೆ.

“ಹಳ್ಳಿ-ನಗರಗಳಲ್ಲಿ ಈಗಲೂ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಈ ಹಿಂದುತ್ವವಾದಿಗಳಿಗೆ ಸಮಸ್ಯೆ ಎದುರಾದಾಗ ಮಾತ್ರ ನಾವು ಹಿಂದುಗಳು ಎಂಬುದು ನೆನಪಾಗುತ್ತಾ? ಶ್ರೀಕೃಷ್ಣ ಮಠದಲ್ಲಿ ಕನಕದಾಸರನ್ನು ಇವರು ಹೇಗೆ ನಡೆಸಿಕೊಂಡರು ಎಂಬುದನ್ನು ಇತಿಹಾಸ ಇನ್ನೂ ಮರೆತಿಲ್ಲ. ಸಮಸ್ಯೆ ಎದುರಾದಾಗ ’ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಎನ್ನುವುದು. ಕೆಲಸ ಮುಗಿದ ಮೇಲೆ ದಲಿತನೆಂದು ಜರಿಯುವುದು ಯಾವ ಸೀಮೆಯ ರಾಜಕಾರಣ” ಎಂದು ಅವರು ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಮಾತೆತ್ತಿದರೆ ’ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್’ ಎಂದು ಹೇಳುತ್ತಾರೆ. ಆದರೆ, ಬಿಜೆಪಿಯವರು ಸಮಾಜದಲ್ಲಿ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಬಿತ್ತುತ್ತಿದ್ದಾಗ ಕಾಂಗ್ರೆಸ್ಸಿನವರೇಕೆ ಮೌನವಾಗಿದ್ದರು ಎಂಬುದು ಜಗತ್ತಿಗೆ ಗೊತ್ತಿದೆ. ಹಿಂದೂಗಳ ಮತಗಳು ಎಲ್ಲಿ ಕೈಬಿಟ್ಟು ಹೋಗುತ್ತವೋ? ಎಂಬ ಭಯದಲ್ಲಿ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು” ಎಂದು ಹೇಳಿದ್ದಾರೆ.

“ಸ್ವತಃ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ’ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮಾತನಾಡಬೇಕಿದೆ’ ಎಂದು ಹೇಳುವವರೆಗೆ ಇವರುಗಳು ಬಾಯಿಗೆ ಬೀಗ ಜಡಿದು ಕೂತಿದ್ದರು. ಈಗ ಈ ಬಗ್ಗೆ ಸರಣಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಜೆಡಿಎಸ್ ಈ ರೀತಿ ಎಂದೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮೈಸೂರು: ಬಿಜೆಪಿ ಬೆಂಬಲಿತ ಸಂಘಟನೆಗಳ ಕರೆ ಬಹಿಷ್ಕರಿಸಿ ಮುಸ್ಲಿಮರ ಅಂಗಡಿಯ ಹಲಾಲ್‌‌ ಮಾಂಸ ಖರೀದಿಸಿದ ಸಾಹಿತಿ ದೇವನೂರ ಮಹದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...