Homeಮುಖಪುಟಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

- Advertisement -
- Advertisement -

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ಕಾರ್ಯಕ್ರಮದ ಸ್ಥಳದಲ್ಲಿ 700-800 ಜನರು ಜಮಾಯಿಸಿದರು. ಆಯೋಜಕರ ಆಹ್ವಾನಿತರು ವೇದಿಕೆಯಿಂದ ಭಾಷಣ ಮಾಡಲು ಪ್ರಾರಂಭಿಸಿದರು. ಪೊಲೀಸರು ಸಹ ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಹೇಳಿದ್ದಾರೆ.

ಮಹಾಪಂಚಾಯತ್ ಭಾಷಣಕಾರರು ಹೇಳಿದ್ದೇನು?

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ.

ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಹಾನಂದ ಪ್ರಚೋದಿಸಿದ್ದಾರೆ.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದಲ್ಲದೆ, ಸುದರ್ಶನ ಸುದ್ದಿ ಸಂಪಾದಕ ಚವ್ಹಾಂಕೆ, ಭಾನುವಾರ ಮಹಾಪಂಚಾಯತ್‌ನಲ್ಲಿ ಮಾತನಾಡುತ್ತಾ ಭಾರತೀಯ ಮುಸ್ಲಿಮರಿಗೆ ಭಾರತೀಯ ಹಿಂದೂಗಳಿಗೆ ನೀಡಿದಂತೆಯೇ ಸಮಾನವಾದ ಹಕ್ಕುಗಳನ್ನು ನೀಡಬಾರದು ಎಂದಿದ್ದಾರೆ.

“ಪಾಕಿಸ್ತಾನದಲ್ಲಿ ಹಿಂದೂಗಳು ಯಾವ ಹಕ್ಕುಗಳನ್ನು ಪಡೆಯುತ್ತಾರೋ ಅದೇ ಹಕ್ಕುಗಳನ್ನು ಭಾರತೀಯ ಮುಸ್ಲಿಮರು ಪಡೆಯಬೇಕು. ಅದಕ್ಕಿಂತ ಹೆಚ್ಚೇನೂ ಇಲ್ಲ” ಎಂದು ಮತೀಯ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ.

ಪೊಲೀಸ್ ಅನುಮತಿ ಇಲ್ಲದೆ ಮಹಾಪಂಚಾಯತ್!

ಶನಿವಾರ, ಏಪ್ರಿಲ್ 2ರಂದು ದಿ ಕ್ವಿಂಟ್ ವರದಿ ಮಾಡಿದ ಪ್ರಕಾರ, ಸೇವ್ ಇಂಡಿಯಾ ಫೌಂಡೇಶನ್‌ ‘ಹಿಂದೂ ಮಹಾಪಂಚಾಯತ್’ ನಡೆಸದಂತೆ ದೆಹಲಿ ಪೊಲೀಸ್, ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ನಿರ್ಬಂಧ ಹೇರಿತ್ತು. ಇದರ ಹೊರತಾಗಿಯೂ, ಭಾರೀ ಪೊಲೀಸ್ ನಿಯೋಜನೆಯಲ್ಲಿ ಕಾರ್ಯಕ್ರಮ ಸಮಾವೇಶಗೊಂಡಿತು.

ಸೂಕ್ತ ಅನುಮತಿ ಪಡೆಯದೆ ಮಹಾಪಂಚಾಯತ್‌ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಅನುಮತಿ ಕೋರಿ ಮನವಿ ಪತ್ರವನ್ನು ವಾಯವ್ಯ ಜಿಲ್ಲೆಯಲ್ಲಿ ಸಂಘಟಕ ಪ್ರೀತ್ ಸಿಂಗ್ ಸಲ್ಲಿಸಿದ್ದರು. ವಾಯುವ್ಯ ಜಿಲ್ಲಾ ಪೊಲೀಸರು ಮನವಿಯನ್ನು ನಿರಾಕರಿಸಿದ್ದರು.

“ದೆಹಲಿ ಪೊಲೀಸರ ನಿರಾಕರಣೆ ಹೊರತಾಗಿಯೂ, 3.04.2022 ರಂದು, ಸಂಘಟಕ ಪ್ರೀತ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಬುರಾರಿ ಮೈದಾನ ಪ್ರವೇಶಿಸಿದರು. ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಪ್ರಾರಂಭಿಸಿದರು. ಪೊಲೀಸರು ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಉಷಾ ರಂಗನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...