Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...