Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...