Homeಮುಖಪುಟಹಲಾಲ್, ಜಟ್ಕಾ ವಿವಾದದ ಸುಳಿಯಲ್ಲಿ - ದೇವನೂರ ಮಹಾದೇವ

ಹಲಾಲ್, ಜಟ್ಕಾ ವಿವಾದದ ಸುಳಿಯಲ್ಲಿ – ದೇವನೂರ ಮಹಾದೇವ

ಹಿಂದು-ಮುಸ್ಲಿಂ ಸಹಬಾಳ್ವೆಯ ಖಂಡುಗ ಹಾಲಿಗೆ ಒಂದು ಸೊಲಗ ವಿಷದ ಹೆಪ್ಪು ಹಾಕಿ ಸಮಾಜ ಛಿದ್ರಗೊಳಿಸಿ, ಧರ್ಮ ಕೋಮು ಧೃವೀಕರಣದ ಓಟು ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ.

- Advertisement -
- Advertisement -

ಇಂದು, ಮಾಂಸವನ್ನು ಎಂದೂ ತಿನ್ನದ ಪ.ಮಲ್ಲೇಶ್ ಅವರು ಹಲಾಲ್ ಮಾಂಸ ಕೊಂಡುಕೊಂಡಿದ್ದಾರೆ! ಇದು ನಿಜಕ್ಕೂ ಚಾರಿತ್ರಿಕ. ಮಲ್ಲೇಶ್ ಇಂದಿನ ವಿಷಮಯ ವಾತಾವರಣ ಕಂಡು ಜಿಗುಪ್ಸೆಗೊಂಡು ಈ ರೀತಿ ಅಭಿವ್ಯಕ್ತಿ ವ್ಯಕ್ತಪಡಿಸಿದ್ದಾರೆ. ನೊಂದವರಿಗೆ ಏನೋ ಒಂದಿಷ್ಟು ಸಾಂತ್ವಾನ ನೀಡಿದ್ದಾರೆ. ಇದು ಸಣ್ಣ ಕ್ರಿಯೆಯಾದರೂ ಅದು ಹಣತೆಯ ಬೆಳಕಿನಂತೆ.

ನಮ್ಮ ಹಳ್ಳಿ ಕಡೆ ಒಂದು ಮಾತಿದೆ – “ಆಯ್ದುಕೊಂಡು ತಿನ್ನೋ ಕೋಳಿಗೆ ಕಾಲು ಮುರಿಯಬಾರದು” ಅಂತ. ಹಾಗೇ ಇನ್ನೊಂದು ಮಾತೂ ಇದೆ – “ಹೊಟ್ಟೆಗೆ ಹೊಡೆಯಬಾರದು, ಅದು ಅಧರ್ಮ, ಪಾಪ” ಅಂತ. ಇಂದು ನಮ್ಮ ಸುತ್ತಮುತ್ತ ಇವೇ ಆಗುತ್ತಿವೆ. ಒಂದು ಉದಾಹರಣೆ – ಹಳೇಪೇಪರ್, ಖಾಲಿಬಾಟಲ್, ಹಾಲಿನ ಕವರ್ ಮಾರಲು ನಾನು ಕಾಯುತ್ತಿದ್ದೇನೆ. ಕೊಂಡುಕೊಳ್ಳುವವರು ಯಾರೊಬ್ಬರೂ ಕಾಣುತ್ತಿಲ್ಲ. ಕಲುಷಿತ ವಾತಾವರಣದಿಂದ ನಿಶ್ಯಬ್ಧರಾಗಿದ್ದಾರೆ. ಎಲ್ಲಿದ್ದಾರೋ ಏನು ಮಾಡುತ್ತಿದ್ದಾರೊ ಗೊತ್ತಿಲ್ಲ.

ಹಳೇಪೇಪರ್, ಹಾಲಿನ ಕವರ್, ಖಾಲಿ ಬಾಟಲ್ ಮಾರಾಟದಿಂದಾಗಿ ಇವುಗಳ ಪುನರ್ ಬಳಕೆಯಾಗುತ್ತಿತ್ತು. ಈಗ ಈ ಕಾಯಕ ನಿಂತಿದೆ. ಇದರಿಂದಾಗಿ, ಪೇಪರ್‌ಗಾಗಿ ಮರ ಕಡಿಯುವುದು ಹೆಚ್ಚುತ್ತದೆ. ಪರಿಣಾಮವಾಗಿ ಬಿಸಿಲು ಏರುತ್ತದೆ. ಕಾರ್ಬಲ್ ಡೈಆಕ್ಸೈಡ್ ಹೆಚ್ಚುತ್ತದೆ. ಭೂಮಿ ಬೇಯುತ್ತದೆ. ಪ್ಲಾಸ್ಟಿಕ್ ತ್ಯಾಜ್ಯ ಭೂಮಿಗೆ ಸೇರುವುದರಿಂದಲೂ ಭೂಮಿ ಅನಾರೋಗ್ಯವಾಗುತ್ತದೆ. ಇದನ್ನು ಸ್ವಲ್ಪಮಟ್ಟಿಗೆ ತಪ್ಪಿಸುತ್ತಿದ್ದ ಹಳೆಪೇಪರ್ ಮಾರಾಟದ ಕಾಯಕ ಜೀವಿಗಳು ಮಾಡುತ್ತಿದ್ದುದು ನಿಜಕ್ಕೂ ಭೂಮಿ ಸೇವೆ. ಇದೇ ದೇಶಸೇವೆ. ಇದು ಬಹುಶಃ ಆ ಕಾಯಕ ಜೀವಿಗಳಿಗೂ ಗೊತ್ತಿಲ್ಲ. ಸಮಾಜಕ್ಕೂ ಗೊತ್ತಿಲ್ಲ. ಇದು ದುರಂತ. ಆಯ್ತು, ಕಾವಿ ಬಟ್ಟೆ ತೊಟ್ಟು, ಇಂದು ಆರ್ಭಟಿಸುತ್ತಿರುವ ಮಠಮಾನ್ಯ ಸಂಘಟನೆಗಳು ತಮ್ಮ ಮರಿಗಳಿಂದ ‘ಅಹಂಕಾರ ನಿರಸನ ಕ್ರಿಯೆ’ಗಾಗಿ ಈ ಕಾಯಕ ಮಾಡಿಸಬಹುದಲ್ಲ?

ದ್ವೇಷ ಅಸಹನೆಯ ಕುಸಂಸ್ಕೃತಿಯ ರಂಗಪ್ರವೇಶವು ‘ಹಿಜಾಬ್ ನಿಷೇಧವಾಗಬೇಕು’ ಎಂಬ ದಾಂಧಲೆಯಿಂದ ಆರಂಭವಾಗುತ್ತದೆ. ಯಾರಿಗೊ ಒಬ್ಬರಿಗೆ ಕೋರ್ಟ್ ತೀರ್ಪು ವಿರುದ್ಧವಾದಾಗ ಆ ವ್ಯಕ್ತಿ ಹಾಗೂ ಆ ಕುಟುಂಬದವರು ಸಂಭ್ರಮಿಸಬೇಕಿತ್ತೆ? ಅವರು ತಮ್ಮ ದುಃಖಕ್ಕೆ ತಮ್ಮ ಮನೆ ಬಾಗಿಲು ಮುಚ್ಚಿಕೊಂಡು ಮೌನವಾದರು ಎಂದಿಟ್ಟುಕೊಳ್ಳೋಣ. ಇದು ನ್ಯಾಯಾಂಗದ ಆದೇಶ ಉಲ್ಲಂಘನೆಯಾಗುತ್ತದೆಯೆ? ಇಲ್ಲೂ ಇದೇ ರೀತಿ ಆಯ್ತು. ಹಿಜಾಬ್ ವಿರುದ್ಧ ಕೋರ್ಟ್ ತೀರ್ಪು ವಿರುದ್ಧವಾದಾಗ- 17-03-2022ರಂದು ಬಂದ್ ಸತ್ಯಾಗ್ರಹಕ್ಕೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ ನೀಡುತ್ತದೆ. ಮುಸ್ಲಿಂ ಸಂಘಟನೆಗಳ ಒಕ್ಕೂಟ ತಮ್ಮ ಕರಪತ್ರದಲ್ಲಿ ಹೀಗೆ ಹೇಳುತ್ತಾರೆ – “ಇಂದು ನಡೆಯುತ್ತಿರುವ ಬಂದ್ ಯಾರ ವಿರುದ್ಧವಾದುದೂ ಅಲ್ಲ. ಯಾರಿಗೂ ತೊಂದರೆ ಕೊಡುವಂಥದ್ದೂ ಅಲ್ಲ. ‘ಉಪವಾಸ ಸತ್ಯಾಗ್ರಹ’ದ ರೀತಿ ನಾವು ‘ಬಂದ್ ಸತ್ಯಾಗ್ರಹ’ ನಡೆಸುತ್ತಿದ್ದೇವೆ ಅಷ್ಟೆ. ನಾವು ನಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೆ ನಮಗಾಗಿರುವ ನೋವನ್ನು ಅಭಿವ್ಯಕ್ತಿ ಪಡಿಸುತ್ತಿದ್ದೇವೆ. ಯಾರಿಗೂ ಬಲವಂತ ಮಾಡುತ್ತಿಲ್ಲ. ಬೀದಿಗೆ ಇಳಿಯುತ್ತಿಲ್ಲ. ಘೋಷಣೆಯನ್ನೂ ಹಾಕುತ್ತಿಲ್ಲ. ನಾವು ಬಹಳ ಬಹಳ ನೊಂದಿದ್ದೇವೆ ಎಂದಷ್ಟೆ ಎಲ್ಲಾ ಧರ್ಮದ ಬಂಧುಗಳಿಗೆ ಹೇಳಬಯಸುತ್ತೇವೆ” – ಇದಿಷ್ಟೇ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಮಾತುಗಳು. ಹಾಗೆ ನೋಡುವುದಾದರೆ ಈ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಬಂದ್ ನಾಗರೀಕವಾದ ಒಂದು ಘನತೆಯ ಮಾದರಿಯನ್ನು ಸೃಷ್ಟಿಸಿದೆ. ಆದರೆ ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು ಎಂಬಂತೆ ಕೆಲವರಿಗೆ ಕಂಡಿದೆ! ಹಾಗಾಗಿ ಈ ಬಂದ್ ನೆಪಮಾಡಿಕೊಂಡು ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಕ್ಕೆ ತಗಾದೆ ತೆಗೆದರು. ಇಂದು ಆ ಗುಂಪೇ ಹಲಾಲ್ ಮಾಂಸಕ್ಕೆ ಮುಗಿಬಿದ್ದಿದ್ದಾರೆ. ಮಾಂಸ ತಿನ್ನದವರೇ ಹೆಚ್ಚಾಗಿ ಹಲಾಲ್ ಮಾಂಸಕ್ಕೆ ಯಕ್ಷಗಾನ, ನಾಟಕ ಮಾಡುತ್ತಿದ್ದಾರೆ. ಧರ್ಮದ ಮುಖವಾಡದಲ್ಲಿ ಅದರೊಳಗೆ ಅಧರ್ಮ, ದ್ವೇಷ ಕುಣಿದು ಕುಪ್ಪಳಿಸುತ್ತಿದೆ. ಯಾಕಾಗಿ? ಹಿಂದು-ಮುಸ್ಲಿಂ ಸಹಬಾಳ್ವೆಯ ಖಂಡುಗ ಹಾಲಿಗೆ ಒಂದು ಸೊಲಗ ವಿಷದ ಹೆಪ್ಪು ಹಾಕಿ ಸಮಾಜ ಛಿದ್ರಗೊಳಿಸಿ, ಧರ್ಮ ಕೋಮು ಧೃವೀಕರಣದ ಓಟು ಬ್ಯಾಂಕ್ ರಾಜಕಾರಣದ ಗೆಲುವಿಗಾಗಿ. ಇದಕ್ಕಾಗಿ ಅಧರ್ಮವೇ ಧರ್ಮದ ಮುಖವಾಡದಲ್ಲಿ ದ್ವೇಷ ಅಸಹನೆಯನ್ನು ಬಿತ್ತಿ, ಬೆಳೆದು, ಕೊಂದು, ಉಂಡು, ತಿಂದು ಕೊಬ್ಬುತ್ತಿದೆ. (ಇದನ್ನೆಲ್ಲಾ ನೋಡಿದಾಗ ಕುವೆಂಪು ಅವರು ಹೇಳಿದ ಒಂದು ರೂಪಕ ನೆನಪಾಗುತ್ತಿದೆ – “ಲಂಗೋಟಿ ಕಟ್ಟಿಕೊಂಡು ಕುಸ್ತಿ ಮಾಡುವವರೊಟ್ಟಿಗೆ ಕುಸ್ತಿ ಮಾಡಬಹುದು. ಆದರೆ ಲಂಗೋಟಿ ಬಿಚ್ಚಿ ಕುಸ್ತಿ ಮಾಡುವವರ ಜೊತೆ ಹೇಗೆ ಕುಸ್ತಿ ಮಾಡುವುದು? ನಾವು ಆ ನಿರ್ಲಜ್ಜ ಅಖಾಡಕ್ಕೆ ಹೋಗಲೇಬಾರದು”.) ಇಂದು ಲಂಗೋಟಿ ಇಲ್ಲದೆ, ನಿರ್ಲಜ್ಜವಾಗಿ ಕುಸ್ತಿ ಆಡುವವರೇ, ಎತ್ತ ನೋಡಿದರೂ ಕಾಣಿಸುತ್ತಿದ್ದಾರೆ. ನಾವು ಕುಸ್ತಿ ಆಡುವುದೆಂತು?

ನಾವು ಈ ಸರ್ಕಾರಕ್ಕೆ ಇದಿಷ್ಟನ್ನಾದರೂ ಕೇಳಬೇಕು – “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ” ಇದೆಯಾ? ಇಲ್ಲವೇ ಇಲ್ಲ, ಬಿಲ್‌ಕುಲ್ ಕಾಣುತ್ತಿಲ್ಲ. ಛೂಬಿಟ್ಟ ಗುಂಪು, ತಾವೆ ಕಾನೂನು ಕೈಗೆತ್ತಿಕೊಂಡು, ತಾವೇ ನ್ಯಾಯಾಧೀಶರಂತೆ ಪೊಲೀಸ್‌ರಂತೆ ವರ್ತಿಸುತ್ತಿವೆ. ಆಯ್ತು, ಸರ್ಕಾರವಾದರೂ ಇದೆಯಾ? ನನಗಂತು ಇದೆ ಅಂತ ಅನ್ನಿಸುತ್ತಿಲ್ಲ. ಅಥವಾ ಬಜರಂಗದಳ, ಶ್ರೀರಾಮಸೇನೆ, ಕೆಲ ಮಠಗಳಿಗೆ ಸರ್ಕಾರವೇ ಕಣ್ಸನ್ನೆ ಮಾಡಿ ಲಾ & ಆರ್ಡರ್ ಹದಗೆಡಿಸಲು ಛೂ ಬಿಟ್ಟಿದಿಯಾ? ಇದಲ್ಲದೆ ಇನ್ನೇನು? ಬಜರಂಗದಳದ ಅಮಾಯಕ ಹುಡುಗರಿಗೆ ಉದ್ಯೋಗ ನೀಡಿದ್ದರೂ ಇಷ್ಟೆಲ್ಲಾ ಗಲಭೆ ಆಗುತ್ತಿರಲಿಲ್ಲ. ಈಗ ಇನ್ನೊಂದು ಪಿಶಾಚಿ ಇಣುಕುತ್ತಿದೆ – ಅದೇ ಪ್ರಾಣಿವಧೆ ಮಾಡುವಾಗ ಅದನ್ನು ಹೇಗೆ ಕೊಲ್ಲಬೇಕು ಅಂತ, ಕೆಲವರು ಮಾನವೀಯತೆಯಿಂದ ಕೊಲ್ಲಬೇಕು ಅಂತ ಅನ್ನುತ್ತಿದ್ದಾರೆ. ಪ್ರಾಣಿ ಕೊಲ್ಲುವುದೇ ಅದರ ಮಾಂಸ ತಿನ್ನುವುದಕ್ಕಾಗಿ. ಇದರಲ್ಲಿ ‘ಮಾನವೀಯತೆ’ ಪದಬಳಕೆ ಯಾಕೆ? ಪ್ರಾಣಿವಧೆ ಹೇಗೆ ಮಾಡಬೇಕೆಂಬ ಈ ವಿವಾದ ಹೆಚ್ಚಿದರೆ, ನೆನಪಿರಲಿ, ಅದರೊಳಗೆ ಮನುಷ್ಯ ವಧೆ ಬಚ್ಚಿಟ್ಟುಕೊಂಡಿದೆ. “ಒಂದು ಹಿಂದೂ ಹೆಣಬಿದ್ದರೆ ಅಲ್ಲಿ ಬಿಜೆಪಿ ಗೆಲವು ಗ್ಯಾರಂಟಿ” ಎಂಬ ಮನಸ್ಥಿತಿ ಇರುವಾಗ ಯಾವುದು ಅಸಾಧ್ಯ? ಮಾಂಸಾಹಾರಿಗಳು ಪ್ರಾಣಿವಧೆ ಮಾಡುತ್ತಿದ್ದರೆ ಸರ್ಕಾರ ನರಬಲಿ ಕೇಳುತ್ತಿದೆ, ತನ್ನ ಗೆಲುವಿಗಾಗಿ.

ಬೇಲಿಯೇ ಎದ್ದು ಹೊಲ ಮೇಯುತ್ತಾ ಇರುವಾಗ ಯಾರನ್ನು ಕೇಳುವುದು? ಉಳಿದಿರುವುದು ಒಂದೇ ದಾರಿ. ನಾಡಿನ ಯಾವುದೇ ಮೂಲೆಗೆ ಹೋದರೂ, ಯಾವುದೇ ಹಳ್ಳಿಗೆ ಹೋದರೂ ಸಕಲ ಹದಿನೆಂಟು ಜಾತಿ ಧರ್ಮಕ್ಕೆ ಸೇರಿದ ಸಹಬಾಳ್ವೆ ಬಯಸುವ ಮನುಷ್ಯರು ಸಿಕ್ಕೇ ಸಿಗುತ್ತಾರೆ. ನಾವೀಗ ಅವರ ಕಡೆ ನೋಡಬೇಕಿದೆ. ಎಲ್ಲಡೆಯೂ ‘ಸಕಲೆಂಟು ಜಾತಿ/ಮತ ಸಹಬಾಳ್ವೆ ಸಂಘ’ ಚಿಗುರಬೇಕಾಗಿದೆ. ನಾಡು ಉಳಿಯಬೇಕಾದರೆ ಅದು ಕ್ರಿಯಾಶೀಲವಾಗಬೇಕಾಗಿದೆ.

  • ದೇವನೂರ ಮಹಾದೇವ

(ಕನ್ನಡದ ಹಿರಿಯ ಸಾಹಿತಿಗಳು ಮತ್ತು ಜನಪರ ಹೋರಾಟಗಾರರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಡೋಜ ದೇವನೂರು ಮಹದೇವ ಅವರ ಈ ಮಾನವೀಯ ಮಾತುಗಳು ಅಂದರಾದ ಜನರ ಕಣ್ಣು ತೆರೆಸಲಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....