Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....