Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...